AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕ ಅಭಿಮನ್ಯು ಈಶ್ವರನ್ ಹೊರಕ್ಕೆ: ರಿಯಾನ್ ಪರಾಗ್​ಗೆ ಕ್ಯಾಪ್ಟನ್ ಪಟ್ಟ

Duleep trophy 2025: ದುಲೀಪ್ ಟ್ರೋಫಿ ಟೂರ್ನಿಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಯಲಿದೆ. 6 ತಂಡಗಳು ಕಣಕ್ಕಿಳಿಯಲಿರುವ ಈ ಟೂರ್ನಿಯು ನಾಕೌಟ್ ಮಾದರಿಯಲ್ಲಿ ಜರುಗಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಕ್ವಾರ್ಟರ್ ಫೈನಲ್ ಪಂದ್ಯಗಳು ಜರುಗಲಿದ್ದು, ಇದಾದ ಬಳಿಕ ಸೆಮಿಫೈನಲ್ ಆಡಲಿದ್ದಾರೆ.

ನಾಯಕ ಅಭಿಮನ್ಯು ಈಶ್ವರನ್ ಹೊರಕ್ಕೆ: ರಿಯಾನ್ ಪರಾಗ್​ಗೆ ಕ್ಯಾಪ್ಟನ್ ಪಟ್ಟ
Abhimanyu - Riyan Parag
ಝಾಹಿರ್ ಯೂಸುಫ್
|

Updated on:Aug 28, 2025 | 12:53 PM

Share

ದುಲೀಪ್ ಟ್ರೋಫಿ ಟೆಸ್ಟ್ ಟೂರ್ನಿಯು ಇಂದಿನಿಂದ ಶುರುವಾಗಿದೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಉತ್ತರ ವಲಯ ಹಾಗೂ ಪೂರ್ವ ವಲಯ ತಂಡಗಳು ಮುಖಾಮುಖಿಯಾಗಿದೆ. ಆದರೆ ಈ ಪಂದ್ಯದಿಂದ ಪೂರ್ವ ವಲಯ ತಂಡದ ನಾಯಕ ಅಭಿಮನ್ಯು ಈಶ್ವರನ್ ಹೊರಗುಳಿದಿದ್ದಾರೆ.

ಇದಕ್ಕೂ ಮುನ್ನ ಪೂರ್ವ ವಲಯ ತಂಡದ ನಾಯಕರಾಗಿ ಇಶಾನ್ ಕಿಶನ್ ಆಯ್ಕೆಯಾಗಿದ್ದರು. ಆದರೆ ಗಾಯದ ಸಮಸ್ಯೆಯ ಕಾರಣ ಕಿಶನ್ ಟೂರ್ನಿಯಿಂದ ಹೊರಗುಳಿದಿದ್ದರು. ಹೀಗಾಗಿ ಅಭಿಮನ್ಯು ಈಶ್ವರನ್ ಅವರಿಗೆ ಕ್ಯಾಪ್ಟನ್ ನೀಡಲಾಗಿತ್ತು. ಆದರೆ ಗುರುವಾರ ಬೆಳಿಗ್ಗೆ ಟಾಸ್ ವೇಳೆ ರಿಯಾನ್ ಪರಾಗ್ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಅಭಿಮನ್ಯು ಈಶ್ವರನ್ ಹೊರಗುಳಿದಿದ್ದೇಕೆ?

ಅಭಿಮನ್ಯು ಈಶ್ವರನ್ ಅವರು ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಪೂರ್ವ ವಲಯ ತಂಡದ ನಾಯಕನಾಗಿ ರಿಯಾನ್ ಪರಾಗ್ ಕಾಣಿಸಿಕೊಂಡಿದ್ದಾರೆ.

ಇನ್ನು ರಿಯಾನ್ ಪರಾಗ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಆಟಗಾರರಾದ ಮೊಹಮ್ಮದ್ ಶಮಿ, ಮುಖೇಶ್ ಕುಮಾರ್ ಕಣಕ್ಕಿಳಿದಿದ್ದಾರೆ.

ಶುಭ್​ಮನ್ ಗಿಲ್ ಅಲಭ್ಯ:

ಈ ಬಾರಿಯ ದುಲೀಪ್ ಟ್ರೋಫಿಯಲ್ಲಿ ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ ಉತ್ತರ ವಲಯ ಟೀಮ್​ನ ಕ್ಯಾಪ್ಟನ್ ಆಗಿ ಕಣಕ್ಕಿಳಿಯಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಅವರು ಸಹ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಉತ್ತರ ವಲಯ ತಂಡವನ್ನು ಅಂಕಿತ್ ಕುಮಾರ್ ಮುನ್ನಡೆಸುತ್ತಿದ್ದಾರೆ.

ಮ್ಯಾಚ್ ವಿವರ:

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪೂರ್ವ ವಲಯ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಉತ್ತರ ವಲಯ ತಂಡವು ಮೊದಲು ಬ್ಯಾಟಿಂಗ್ ಆರಂಭಿಸಿದೆ. ಅಲ್ಲದೆ 35 ಓವರ್​ಗಳ ಮುಕ್ತಾಯದ ವೇಳೆಗೆ ಉತ್ತರ ವಲಯ ತಂಡವು 3 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿದೆ.

ಉತ್ತರ ವಲಯ ಪ್ಲೇಯಿಂಗ್ ಇಲೆವೆನ್: ಶುಭಂ ಖಜುರಿಯಾ , ಅಂಕಿತ್ ಕುಮಾರ್ (ನಾಯಕ) , ಯಶ್ ಧುಲ್ , ಆಯುಷ್ ಬದೋನಿ , ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್ ) , ಸಾಹಿಲ್ ಲೋತ್ರಾ , ನಿಶಾಂತ್ ಸಿಂಧು , ಹರ್ಷಿತ್ ರಾಣಾ , ಔಕಿಬ್ ನಬಿ ದಾರ್ , ಮಯಾಂಕ್ ದಾಗರ್ , ಅರ್ಷದೀಪ್ ಸಿಂಗ್.

ಇದನ್ನೂ ಓದಿ: IPL 2026: ಐಪಿಎಲ್ ನಿಯಮ… RCB ಈ ಇಬ್ಬರನ್ನು ಬಿಡುಗಡೆ ಮಾಡಲೇಬೇಕು!

ಪೂರ್ವ ವಲಯ ಪ್ಲೇಯಿಂಗ್ ಇಲೆವೆನ್:  ಉತ್ಕರ್ಷ್ ಸಿಂಗ್ , ಶರಣದೀಪ್ ಸಿಂಗ್ , ವಿರಾಟ್ ಸಿಂಗ್ , ರಿಯಾನ್ ಪರಾಗ್ (ನಾಯಕ) , ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) , ಶ್ರೀದಾಮ್ ಪಾಲ್ , ಸೂರಜ್ ಸಿಂಧು ಜೈಸ್ವಾಲ್ , ಮುಖ್ತಾರ್ ಹುಸೇನ್ , ಮೊಹಮ್ಮದ್ ಶಮಿ , ಮನಿಷಿ , ಮುಖೇಶ್ ಕುಮಾರ್.

Published On - 12:53 pm, Thu, 28 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ