AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆವಾಲ್ಡ್ ಬ್ರೆವಿಸ್​ಗೆ ರಿವ್ಯೂ ಕೊಡದಿರಲು ಇದುವೇ ಕಾರಣ

IPL 2025 CSK vs RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

IPL 2025: ಡೆವಾಲ್ಡ್ ಬ್ರೆವಿಸ್​ಗೆ ರಿವ್ಯೂ ಕೊಡದಿರಲು ಇದುವೇ ಕಾರಣ
Csk Vs Rcb
ಝಾಹಿರ್ ಯೂಸುಫ್
|

Updated on: May 04, 2025 | 7:30 AM

Share

ಐಪಿಎಲ್​ನ 52ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

214 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು 16.2 ಓವರ್​ಗಳಲ್ಲಿ 172 ರನ್ ಕಲೆಹಾಕಿತ್ತು. ಇನ್ನುಳಿದ 22 ಎಸೆತಗಳಲ್ಲಿ ಕೇವಲ 42 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್, ಲುಂಗಿ ಎನ್​ಗಿಡಿ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿದ್ದರು. ಆರ್​ಸಿಬಿ ಆಟಗಾರರು ಮನವಿ ಮಾಡುತ್ತಿದ್ದಂತೆ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು. ಆದರೆ ಆ ಬಳಿಕ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಅಂಪೈರ್​ಗೆ ಕೋರಿಕೆ ಸಲ್ಲಿಸಿದರೂ. ಡಿಆರ್​ಎಸ್​ಗೆ ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಡಿಆರ್​ಎಸ್​ಗೆ ಅವಕಾಶ ಕೊಡದಿರಲು ಕಾರಣವೇನು?

ಐಪಿಎಲ್​ ನಿಯಮದ ಪ್ರಕಾರ, 15 ಸೆಕೆಂಡ್​ಗಳಲ್ಲಿ ಡಿಆರ್​ಎಸ್​ ತೆಗೆದುಕೊಳ್ಳಬೇಕು. ಆದರೆ ಡೆವಾಲ್ಡ್ ಬ್ರೆವಿಸ್ ಎಲ್​ಬಿಡಬ್ಲ್ಯೂ ಆದ ಬಳಿಕ ರನ್​ಗಾಗಿ ಓಡಿದ್ದರು. ಎರಡು ರನ್​ಗಳನ್ನು ಓಡಿದ ಬಳಿಕ ಅವರು ಅಂಪೈರ್​ ಬಳಿ ಡಿಆರ್​ಎಸ್​ಗೆ ಮನವಿ ಮಾಡಿದ್ದರು. ಅಷ್ಟರಲ್ಲಾಗಲೇ ರಿವ್ಯೂ ಸೆಕೆಂಡ್ಸ್​ 25 ಆಗಿತ್ತು.

ಬ್ರೆವಿಸ್ ರಿವ್ಯೂ ಮನವಿ ವಿಡಿಯೋ:

View this post on Instagram

A post shared by Dhana Raju (@dhana_raju_1)

ಅಂದರೆ 25 ಸೆಕೆಂಡ್ಸ್ ಆದಮೇಲಷ್ಟೇ ಬ್ರೆವಿಸ್ ಎಲ್​ಬಿಡಬ್ಲ್ಯೂಗೆ ಮನವಿ ಮಾಡಿದ್ದರು. ಹೀಗಾಗಿ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಈ ಮನವಿಯನ್ನು ತಿರಸ್ಕರಿಸಿದ್ದರು. ಅಲ್ಲದೆ ಫೀಲ್ಡ್ ಅಂಪೈರ್ ತೀರ್ಪಿನಂತೆ ನೀವು ಔಟಾಗಿದ್ದು, ಹಾಗಾಗಿ ಮೈದಾನ ತೊರೆಯುವಂತೆ ಸೂಚಿಸಿದ್ದರು. ಅದರಂತೆ ಡೆವಾಲ್ಡ್ ಬ್ರೆವಿಸ್ ಪೆವಿಲಿಯನ್​ಗೆ ಮರಳಿದ್ದರು.

ಅಚ್ಚರಿ ಎಂದರೆ, ರಿಪ್ಲೇನಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್​ನಿಂದ ಹೊರ ಹೋಗುತ್ತಿರುವುದು ಕಂಡು ಬಂದಿದೆ. ಅಂದರೆ ಎಲ್​ಬಿಡಬ್ಲ್ಯೂ ಆದ ಬೆನ್ನಲ್ಲೇ ಡಿಆರ್​ಎಸ್​ ತೆಗೆದುಕೊಳ್ಳದೇ ರನ್​ಗಾಗಿ ಓಡಿದ್ದು, ಸಿಎಸ್​ಕೆ ಪಾಲಿಗೆ ಮುಳುವಾಯಿತು. ಅಂತಿಮವಾಗಿ  ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2 ರನ್​ಗಳ ಸೋಲನುಭವಿಸಿದೆ.

ಇದನ್ನೂ ಓದಿ: 11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್​ವೆಲ್

ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ