AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆವಾಲ್ಡ್ ಬ್ರೆವಿಸ್​ಗೆ ರಿವ್ಯೂ ಕೊಡದಿರಲು ಇದುವೇ ಕಾರಣ

IPL 2025 CSK vs RCB: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 52ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 213 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 211 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ.

IPL 2025: ಡೆವಾಲ್ಡ್ ಬ್ರೆವಿಸ್​ಗೆ ರಿವ್ಯೂ ಕೊಡದಿರಲು ಇದುವೇ ಕಾರಣ
Csk Vs Rcb
ಝಾಹಿರ್ ಯೂಸುಫ್
|

Updated on: May 04, 2025 | 7:30 AM

Share

ಐಪಿಎಲ್​ನ 52ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

214 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು 16.2 ಓವರ್​ಗಳಲ್ಲಿ 172 ರನ್ ಕಲೆಹಾಕಿತ್ತು. ಇನ್ನುಳಿದ 22 ಎಸೆತಗಳಲ್ಲಿ ಕೇವಲ 42 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕಣಕ್ಕಿಳಿದ ಡೆವಾಲ್ಡ್ ಬ್ರೆವಿಸ್, ಲುಂಗಿ ಎನ್​ಗಿಡಿ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿದ್ದರು. ಆರ್​ಸಿಬಿ ಆಟಗಾರರು ಮನವಿ ಮಾಡುತ್ತಿದ್ದಂತೆ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರು. ಆದರೆ ಆ ಬಳಿಕ ಡೆವಾಲ್ಡ್ ಬ್ರೆವಿಸ್ ಮೇಲ್ಮನವಿ ಅಂಪೈರ್​ಗೆ ಕೋರಿಕೆ ಸಲ್ಲಿಸಿದರೂ. ಡಿಆರ್​ಎಸ್​ಗೆ ಅವಕಾಶ ನೀಡಿರಲಿಲ್ಲ.

ಇದನ್ನೂ ಓದಿ
Image
ಬೋಲ್ಡ್ ಫೋಟೋಗೆ ಬೌಲ್ಡ್ ಆಗಿ ಸ್ಪಷ್ಟನೆ ನೀಡಿದ ವಿರಾಟ್ ಕೊಹ್ಲಿ
Image
IPL 2025: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು
Image
IPL 2025: ಕರುಣ್ ನಾಯರ್ ಡಕೌಟ್: ಈ ಬಾರಿ ಮುಂಬೈ ಇಂಡಿಯನ್ಸ್ ಚಾಂಪಿಯನ್ಸ್?
Image
IPL ನಲ್ಲಿ ಬದಲಾವಣೆ: ರೌಂಡ್ ರಾಬಿನ್ ಸ್ವರೂಪ, ಒಂದು ತಂಡಕ್ಕೆ 18 ಪಂದ್ಯ

ಡಿಆರ್​ಎಸ್​ಗೆ ಅವಕಾಶ ಕೊಡದಿರಲು ಕಾರಣವೇನು?

ಐಪಿಎಲ್​ ನಿಯಮದ ಪ್ರಕಾರ, 15 ಸೆಕೆಂಡ್​ಗಳಲ್ಲಿ ಡಿಆರ್​ಎಸ್​ ತೆಗೆದುಕೊಳ್ಳಬೇಕು. ಆದರೆ ಡೆವಾಲ್ಡ್ ಬ್ರೆವಿಸ್ ಎಲ್​ಬಿಡಬ್ಲ್ಯೂ ಆದ ಬಳಿಕ ರನ್​ಗಾಗಿ ಓಡಿದ್ದರು. ಎರಡು ರನ್​ಗಳನ್ನು ಓಡಿದ ಬಳಿಕ ಅವರು ಅಂಪೈರ್​ ಬಳಿ ಡಿಆರ್​ಎಸ್​ಗೆ ಮನವಿ ಮಾಡಿದ್ದರು. ಅಷ್ಟರಲ್ಲಾಗಲೇ ರಿವ್ಯೂ ಸೆಕೆಂಡ್ಸ್​ 25 ಆಗಿತ್ತು.

ಬ್ರೆವಿಸ್ ರಿವ್ಯೂ ಮನವಿ ವಿಡಿಯೋ:

View this post on Instagram

A post shared by Dhana Raju (@dhana_raju_1)

ಅಂದರೆ 25 ಸೆಕೆಂಡ್ಸ್ ಆದಮೇಲಷ್ಟೇ ಬ್ರೆವಿಸ್ ಎಲ್​ಬಿಡಬ್ಲ್ಯೂಗೆ ಮನವಿ ಮಾಡಿದ್ದರು. ಹೀಗಾಗಿ ಫೀಲ್ಡ್ ಅಂಪೈರ್ ನಿತಿನ್ ಮೆನನ್ ಈ ಮನವಿಯನ್ನು ತಿರಸ್ಕರಿಸಿದ್ದರು. ಅಲ್ಲದೆ ಫೀಲ್ಡ್ ಅಂಪೈರ್ ತೀರ್ಪಿನಂತೆ ನೀವು ಔಟಾಗಿದ್ದು, ಹಾಗಾಗಿ ಮೈದಾನ ತೊರೆಯುವಂತೆ ಸೂಚಿಸಿದ್ದರು. ಅದರಂತೆ ಡೆವಾಲ್ಡ್ ಬ್ರೆವಿಸ್ ಪೆವಿಲಿಯನ್​ಗೆ ಮರಳಿದ್ದರು.

ಅಚ್ಚರಿ ಎಂದರೆ, ರಿಪ್ಲೇನಲ್ಲಿ ಡೆವಾಲ್ಡ್ ಬ್ರೆವಿಸ್ ಕಾಲಿಗೆ ತಾಗಿದ ಚೆಂಡು ವಿಕೆಟ್​ನಿಂದ ಹೊರ ಹೋಗುತ್ತಿರುವುದು ಕಂಡು ಬಂದಿದೆ. ಅಂದರೆ ಎಲ್​ಬಿಡಬ್ಲ್ಯೂ ಆದ ಬೆನ್ನಲ್ಲೇ ಡಿಆರ್​ಎಸ್​ ತೆಗೆದುಕೊಳ್ಳದೇ ರನ್​ಗಾಗಿ ಓಡಿದ್ದು, ಸಿಎಸ್​ಕೆ ಪಾಲಿಗೆ ಮುಳುವಾಯಿತು. ಅಂತಿಮವಾಗಿ  ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 2 ರನ್​ಗಳ ಸೋಲನುಭವಿಸಿದೆ.

ಇದನ್ನೂ ಓದಿ: 11 ಫೋರ್, 3 ಸಿಕ್ಸ್: ಕೊನೆಗೂ ಶತಕ ಪೂರೈಸಿದ ಗ್ಲೆನ್ ಮ್ಯಾಕ್ಸ್​ವೆಲ್

ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. ಇತ್ತ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ