AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಧೋನಿ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಲು ಕಾರಣವೇನು?

CSK: ಈ ನಿರ್ಧಾರವ ಸ್ವಲ್ಪ ಸಮಯದಿಂದ ಅವರ ಮನಸ್ಸಿನಲ್ಲಿತ್ತು. ಧೋನಿ ಕೂಡ ಪರಿವರ್ತನೆ ಬಯಸಿದ್ದರು. ಹೀಗಾಗಿ ಜಡೇಜಾಗೆ ಕ್ಯಾಪ್ಟನ್ ಪಟ್ಟ ಹಸ್ತಾಂತರಿಸಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿದ್ದಾರೆ.

MS Dhoni: ಧೋನಿ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ನೀಡಲು ಕಾರಣವೇನು?
Dhoni
TV9 Web
| Edited By: |

Updated on: Mar 24, 2022 | 5:48 PM

Share

ಚೆನ್ನೈ ಸೂಪರ್ ಕಿಂಗ್ಸ್ (CSK) ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ (Ms Dhoni) ರಾಜೀನಾಮೆ ನೀಡಿದ್ದಾರೆ. ಅವರ ಬದಲಿಗೆ ಈಗ ರವೀಂದ್ರ ಜಡೇಜಾ (Ravindra Jadeja) ಸಿಎಸ್​ಕೆ ತಂಡವನ್ನು ಮುನ್ನಡೆಸಲಿದ್ದಾರೆ. ಇದಾಗ್ಯೂ ಸಿಎಸ್​ಕೆ ತಂಡದ ವಿಕೆಟ್ ಕೀಪರ್ ಆಗಿ ಧೋನಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಇದೇ ಮೊದಲ ಬಾರಿಗೆ ಧೋನಿ ಕೇವಲ ಆಟಗಾರನಾಗಿ ಸಿಎಸ್​ಕೆ ಪರ ಕಣಕ್ಕಿಳಿಯಲಿದ್ದಾರೆ. ಸಿಎಸ್​ಕೆ ತಂಡವನ್ನು 6 ಬಾರಿ ಚಾಂಪಿಯನ್ ಪಟ್ಟಕ್ಕೇರಿಸಿದ್ದ ನಾಯಕ ಎನಿಸಿಕೊಂಡಿರುವ ಧೋನಿ ಇದಕ್ಕಿದ್ದಂತೆ ರಾಜೀನಾಮೆ ನೀಡಲು ಕಾರಣವೇನು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಐಪಿಎಲ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅದರಲ್ಲೂ ಮೊದಲ ಪಂದ್ಯದಲ್ಲಿ ಸಿಎಸ್​ಕೆ ತಂಡವು ಕೆಕೆಆರ್ ವಿರುದ್ದ ಆಡಬೇಕಿದೆ. ಆದರೆ ಇದಕ್ಕೂ ಎರಡು ದಿನಗಳ ಮೊದಲು ಧೋನಿ ರಾಜೀನಾಮೆ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಆದರೆ ಮಹೇಂದ್ರ ಸಿಂಗ್ ಧೋನಿ ದಿಢೀರ್ ಆಗಿ ಈ ನಿರ್ಧಾರಕ್ಕೆ ಬಂದಿಲ್ಲ ಎಂಬುದು ಸ್ಪಷ್ಟ.

ಏಕೆಂದರೆ ಕಳೆದ ಸೀಸನ್​ ಐಪಿಎಲ್ ವೇಳೆಯೇ ಧೋನಿಯ ವಿದಾಯದ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಇದಾಗ್ಯೂ ಕೊನೆಯ ಬಾರಿಗೆ ಚೆನ್ನೈನಲ್ಲಿ ಆಡುವ ಮೂಲಕ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳುವುದಾಗಿ ಧೋನಿ ತಿಳಿಸಿದ್ದರು. ಇದೀಗ ಅದರ ಮೊದಲ ಹೆಜ್ಜೆ ಎಂಬಂತೆ ಧೋನಿ ಸಿಎಸ್​ಕೆ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಏಕೆಂದರೆ ಧೋನಿ ಕಳೆದೆರಡು ಐಪಿಎಲ್​ ಸೀಸನ್​ಗಳಲ್ಲಿ ನಾಯಕನಾಗಿ ಯಶಸ್ವಿಯಾಗಿದ್ದಾರೇ ಹೊರತು ಬ್ಯಾಟ್ಸ್​ಮನ್​ ಆಗಿ ಸಕ್ಸಸ್ ಆಗಿಲ್ಲ.

ಅದರಲ್ಲೂ ಕಳೆದ ಸೀಸನ್​ನಲ್ಲೇ ಧೋನಿ ವಿದಾಯದ ಬಗ್ಗೆ ಸುಳಿವು ಸಿಕ್ಕಿದ್ದವು. ಆದರೆ ನಾವು ಧೋನಿಯನ್ನು ಮತ್ತೆರಡು ವರ್ಷಗಳವರೆಗೆ ತಂಡದಲ್ಲಿ ಮುಂದುವರೆಸಲು ಬಯಸುತ್ತೇವೆ ಎಂದು ಸಿಎಸ್​ಕೆ ಸಿಇಒ ಕಾಸಿ ವಿಶ್ವನಾಥನ್ ತಿಳಿಸಿದ್ದರು. ಅಂದರೆ ಅದಾಗಲೇ ಧೋನಿ ಸಿಎಸ್​ಕೆ ಫ್ರಾಂಚೈಸಿ ಜೊತೆ ನಿವೃತ್ತಿ ಬಗ್ಗೆ ಚರ್ಚಿಸಿದ್ದರು. ಇದೀಗ ಜಡೇಜಾ ಅವರಿಗೆ ನಾಯಕತ್ವ ಜವಾಬ್ದಾರಿ ವಹಿಸಿದ್ದಾರೆ. ಅಲ್ಲದೆ ಈ ಸೀಸನ್​ನಲ್ಲಿ ರವೀಂದ್ರ ಜಡೇಜಾ ಅವರನ್ನು ಪರಿಪೂರ್ಣ ನಾಯಕನಾಗಿ ಮಾಡುವ ಜವಾಬ್ದಾರಿಯನ್ನು ಧೋನಿ ವಹಿಸಿಕೊಂಡಿದ್ದಾರೆ.

ಧೋನಿಯ ನಿರ್ಧಾರ ಬಗ್ಗೆ ಮಾತನಾಡಿರುವ ಸಿಎಸ್‌ಕೆ ಸಿಇಒ ಕಾಸಿ ವಿಶ್ವನಾಥನ್, ಈ ನಿರ್ಧಾರವ ಸ್ವಲ್ಪ ಸಮಯದಿಂದ ಅವರ ಮನಸ್ಸಿನಲ್ಲಿತ್ತು. ಧೋನಿ ಕೂಡ ಪರಿವರ್ತನೆ ಬಯಸಿದ್ದರು. ಹೀಗಾಗಿ ಜಡೇಜಾಗೆ ಕ್ಯಾಪ್ಟನ್ ಪಟ್ಟ ಹಸ್ತಾಂತರಿಸಲು ಇದು ಸರಿಯಾದ ಸಮಯ ಎಂದು ಅವರು ಭಾವಿಸಿದ್ದಾರೆ. ಹೀಗಾಗಿ ಇದೇ ಸೀಸನ್ ಮೂಲಕ ರವೀಂದ್ರ ಜಡೇಜಾಗೆ ಧೋನಿ ಹೊಸ ಜವಾಬ್ದಾರಿವಹಿಸಿದ್ದಾರೆ ಎಂದು ಕಾಸಿ ವಿಶ್ವನಾಥನ್ ತಿಳಿಸಿದ್ದಾರೆ.

ಅಂದರೆ ಇಲ್ಲಿ ಧೋನಿ ಈ ಸೀಸನ್​ ಮಾತ್ರ ಆಡುವ ಸಾಧ್ಯತೆಯಿದೆ. ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಚೆನ್ನೈ ಚೆಪಾಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದ ಮೂಲಕ ವಿದಾಯ ಹೇಳಬಹುದು. ಏಕೆಂದರೆ ಕಳೆದ ಸೀಸನ್​ ಐಪಿಎಲ್​ ಬಳಿಕ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯವಾಡುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಕೊರೋನಾ ಪರಿಸ್ಥಿತಿಯಲ್ಲಿ ಈ ಬಾರಿಯ ಐಪಿಎಲ್​ನ ಲೀಗ್ ಹಂತದ ಪಂದ್ಯಗಳು ಮುಂಬೈನಲ್ಲೇ ನಡೆಯುತ್ತಿದೆ. ಹೀಗಾಗಿ ಚೆನ್ನೈನಲ್ಲಿ ನಾಯಕನಾಗಿ ಕೊನೆಯ ಪಂದ್ಯವಾಡುವ ಅವಕಾಶ ಕೈತಪ್ಪಿದೆ.

ಇದಾಗ್ಯೂ ಮುಂದಿನ ವರ್ಷ ಅಥವಾ ಐಪಿಎಲ್ ಮುಕ್ತಾಯದ ಬಳಿಕ ಮಹೇಂದ್ರ ಸಿಂಗ್ ಧೋನಿಗಾಗಿ ಸಿಎಸ್​ಕೆ ಚೆಪಾಕ್ ಮೈದಾನದಲ್ಲಿ ವಿಶೇಷ ಪಂದ್ಯವನ್ನು ಆಯೋಜಿಸುವ ಸಾಧ್ಯತೆಯಿದೆ. ಈ ಮೂಲಕ ಧೋನಿ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ 40 ವರ್ಷದ ಮಹೇಂದ್ರ ಸಿಂಗ್ ಧೋನಿ ಈ ಹಿಂದಿನ ನಿರ್ಧಾರದಂತೆ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳುವ ಸಲುವಾಗಿ ಇದೀಗ ನಾಯಕತ್ವವನ್ನು ತ್ಯಜಿಸಿದ್ದಾರೆ. ಹೀಗಾಗಿ ಒಂದು ವರ್ಷದೊಳಗೆ ಧೋನಿ ಅವರ ನಿವೃತ್ತಿಯನ್ನೂ ಕೂಡ ನಿರೀಕ್ಷಿಸಬಹುದು.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(Why did Dhoni step down as CSK Captain?)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು