AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Jersey: ಟೀಮ್ ಇಂಡಿಯಾ ಜೆರ್ಸಿ ಮೇಲೆ 3 ಸ್ಟಾರ್ ನೀಡಿದ್ದು ಯಾಕೆ ಗೊತ್ತಾ?

Indian Team New Jersey: ಬಿಸಿಸಿಐ ಲೋಗೋ ಮೇಲೆ 3 ಸ್ಟಾರ್​ಗಳನ್ನು ನೀಡಲಾಗಿದೆ. ಇದರ ಬೆನ್ನಲ್ಲೇ ಈ ಸ್ಟಾರ್​ಗಳು ಯಾಕಾಗಿ ನೀಡಲಾಗಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Team India Jersey: ಟೀಮ್ ಇಂಡಿಯಾ ಜೆರ್ಸಿ ಮೇಲೆ 3 ಸ್ಟಾರ್ ನೀಡಿದ್ದು ಯಾಕೆ ಗೊತ್ತಾ?
Team India Jersey
TV9 Web
| Edited By: |

Updated on: Sep 19, 2022 | 1:32 PM

Share

T20 World Cup 2022: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ (Team India) ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಕಿಟ್ ಪ್ರಾಯೋಜಕರಾದ ಎಂಪಿಎಲ್ ಸ್ಪೋರ್ಟ್ಸ್​  ಭಾರತ ತಂಡದ ಹೊಸ ಜೆರ್ಸಿಯನ್ನು ವಿನ್ಯಾಸಗೊಳಿಸಿದೆ. ವಿಶೇಷ ಎಂದರೆ ಈ ಜೆರ್ಸಿಯ ಅನಾವರಣ ಫೋಟೋದಲ್ಲಿ ಟೀಮ್ ಇಂಡಿಯಾದ 6 ಸ್ಟಾರ್ ಪ್ಲೇಯರ್ಸ್ ಕಾಣಿಸಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಹಾಗೂ ಹಾರ್ದಿಕ್ ಪಾಂಡ್ಯ ಪರುಷರ ತಂಡದಿಂದ ಕಾಣಿಸಿಕೊಂಡರೆ, ಮಹಿಳಾ ತಂಡದಿಂದ ನಾಯಕಿ ಹರ್ಮನ್ ಪ್ರೀತ್ ಕೌರ್, ಶಫಾಲಿ ವರ್ಮಾ ಹಾಗೂ ರೇಣುಕಾ ಠಾಕೂರ್ ಕಾಣಿಸಿಕೊಂಡಿದ್ದಾರೆ.

ನೂತನ ಜೆರ್ಸಿಯ ಮತ್ತೊಂದು ವಿಶೇಷ ಎಂದರೆ ಈ ಕಿಟ್​ನಲ್ಲಿ ವಿನ್ಯಾಸಗೊಳಿಸಲಾಗಿರುವ ಬಿಸಿಸಿಐ ಲೋಗೋ ಮೇಲೆ 3 ಸ್ಟಾರ್​ಗಳನ್ನು ನೀಡಲಾಗಿರುವುದು. ಇದರ ಬೆನ್ನಲ್ಲೇ ಈ ಸ್ಟಾರ್​ಗಳು ಯಾಕಾಗಿ ನೀಡಲಾಗಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗಳಿಗೆ ಸಿಗುವ ಉತ್ತರ ಮೂರು ಬಾರಿಯ ವಿಶ್ವಕಪ್ ಚಾಂಪಿಯನ್​. ಅಂದರೆ ಟೀಮ್ ಇಂಡಿಯಾ ಐಸಿಸಿ ವಿಶ್ವಕಪ್​ನಲ್ಲಿ 3 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಭಾರತ ತಂಡವು 1983 ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಗೆದ್ದಿತು. ಇದಾದ ಬಳಿಕ 2007 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇನ್ನು 2011 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಭಾರತ ತಂಡ ಮೂರನೇ ಬಾರಿಗೆ ವಿಶ್ವಕಪ್​ನಲ್ಲಿ ಟ್ರೋಫಿ ಎತ್ತಿ ಹಿಡಿದಿತ್ತು.

ಈ ಮೂರು ವಿಶ್ವಕಪ್​ಗಳ ಚಾಂಪಿಯನ್ ಪಟ್ಟವನ್ನು ಪ್ರತಿನಿಧಿಸುವಂತೆ ಜೆರ್ಸಿ ಮೇಲೆ 3 ಸ್ಟಾರ್​ಗಳನ್ನು ನೀಡಲಾಗಿದೆ. ಈ ಮೂಲಕ ನಾಲ್ಕನೇ ಬಾರಿ ಪ್ರಶಸ್ತಿ ಗೆಲ್ಲಲು ಟೀಮ್ ಇಂಡಿಯಾವನ್ನು ಹುರಿದುಂಬಿಸಲಾಗಿದೆ. ಒಟ್ಟಿನಲ್ಲಿ ಟೀಮ್ ಇಂಡಿಯಾದ ಹೊಸ ಜೆರ್ಸಿ ವಿನ್ಯಾಸದ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಅದರಂತೆ ನೂತನ ಜೆರ್ಸಿಯಲ್ಲಿ ಕಣಕ್ಕಿಳಿದು ಟೀಮ್ ಇಂಡಿಯಾ ದಶಕದ ವಿಶ್ವಕಪ್​ ಬರವನ್ನು ನೀಗಿಸಲಿದೆಯಾ ಕಾದು ನೋಡಬೇಕಿದೆ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್