AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಸೋಲಿಗೆ ಇದುವೇ ಅಸಲಿ ಕಾರಣ..!

India vs South Africa: ರಾಯ್​ಪುರದಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 358 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ 49.2 ಓವರ್​ಗಳಲ್ಲಿ 362 ರನ್ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಟೀಮ್ ಇಂಡಿಯಾ ಸೋಲಿಗೆ ಇದುವೇ ಅಸಲಿ ಕಾರಣ..!
Team India
ಝಾಹಿರ್ ಯೂಸುಫ್
|

Updated on:Dec 04, 2025 | 8:32 AM

Share

ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಅದು ಕೂಡ ಬರೋಬ್ಬರಿ 358 ರನ್​ಗಳಿಸಿದ ಬಳಿಕ. ರಾಯ್​ಪುರದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರುತುರಾಜ್ ಗಾಯಕ್ವಾಡ್ (105) ಹಾಗೂ ವಿರಾಟ್ ಕೊಹ್ಲಿ (102) ಶತಕ ಸಿಡಿಸಿದರು. ಈ ಶತಕಗಳ ನೆರವಿನೊಂದಿಗೆ ಭಾರತ ತಂಡವು 5 ವಿಕೆಟ್ ನಷ್ಟಕ್ಕೆ 358 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ (110) ಶತಕ ಸಿಡಿಸಿದರೆ, ಮ್ಯಾಥ್ಯೂ ಬ್ರೀಟ್ಝ್ಕೆ (68) ಹಾಗೂ ಡೆವಾಲ್ಡ್ ಬ್ರೆವಿಸ್ (54) ಅರ್ಧಶತಕಗಳನ್ನು ಬಾರಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವು 49.2 ಓವರ್​ಗಳಲ್ಲಿ 362 ರನ್​ಗಳಿಸಿ 4 ವಿಕೆಟ್​ಗಳ ಜಯ ಸಾಧಿಸಿತು.

ಇತ್ತ ಟೀಮ್ ಇಂಡಿಯಾ ಬೃಹತ್ ಮೊತ್ತ ಪೇರಿಸಿದರೂ ಸೋಲಲು ಮುಖ್ಯ ಕಾರಣ ಬೌಲಿಂಗ್ ಮಾತ್ರ ಅಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರೆ ರಾಯ್​ಪುರದಲ್ಲಿರುವುದು ಬ್ಯಾಟಿಂಗ್​ ಪಿಚ್​. ಹೀಗಾಗಿ ಬೃಹತ್ ಮೊತ್ತ ಪೇರಿಸುವುದು ಅನಿವಾರ್ಯವಾಗಿತ್ತು. ಆದರೆ ಟೀಮ್ ಇಂಡಿಯಾ ಬ್ಯಾಟರ್​ಗಳು ಅಂತಿಮ ಓವರ್​ಗಳಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಇದರಿಂದ ಸೌತ್ ಆಫ್ರಿಕಾ ತಂಡಕ್ಕೆ ಕಷ್ಟಸಾಧ್ಯವಾದಂತಹ ಗುರಿ ನೀಡಲು ಸಾಧ್ಯವಾಗಿಲ್ಲ.

ಏಕೆಂದರೆ 40 ಓವರ್​ಗಳವರೆಗೆ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಅನ್ನೇ ಪ್ರದರ್ಶಿಸಿದ್ದರು. ಇದರಿಂದ ಟೀಮ್ ಇಂಡಿಯಾ ಸ್ಕೋರ್ 400ರ ಗಡಿಮುಟ್ಟುವ ಸೂಚನೆ ಕೂಡ ಸಿಕ್ಕಿತ್ತು. ಆದರೆ ವಿರಾಟ್ ಕೊಹ್ಲಿ ಔಟಾಗುತ್ತಿದ್ದಂತೆ ಭಾರತ ತಂಡದ ಲೆಕ್ಕಾಚಾರಗಳು ತಲೆ ಕೆಳಗಾದವು.

ಕಿಂಗ್ ಕೊಹ್ಲಿ ಔಟಾದಾಗ ಭಾರತ ತಂಡದ ಸ್ಕೋರ್ 39.1 ಓವರ್​ಗಳಲ್ಲಿ 284 ರನ್. ಅಲ್ಲದೆ ಇನ್ನೂ 6 ವಿಕೆಟ್​ಗಳಿದ್ದವು. ಹೀಗಾಗಿ ಕೊನೆಯ ಹತ್ತು ಓವರ್​ಗಳಲ್ಲಿ  9ರ ಸರಾಸರಿಯಲ್ಲಿ ರನ್ ಗಳಿಸಿದ್ದರೂ ಭಾರತ ತಂಡದ ಸ್ಕೋರ್ 375 ಆಗಿರುತ್ತಿತ್ತು. ಆದರೆ ಕೊನೆಯ 66 ಎಸೆತಗಳಲ್ಲಿ ಟೀಮ್ ಇಂಡಿಯಾ ಬ್ಯಾಟರ್​ಗಳು ಕಲೆಹಾಕಿದ್ದು ಕೇವಲ 74 ರನ್​ಗಳು ಮಾತ್ರ.

ಅಂದರೆ ವಿರಾಟ್ ಕೊಹ್ಲಿ ಔಟಾದ ಬಳಿಕ ಭಾರತ ತಂಡವು 300 ರನ್​ಗಳ ಗಡಿದಾಟಲು 27 ಎಸೆತಗಳನ್ನು ತೆಗೆದುಕೊಂಡಿದ್ದರು. ಇನ್ನು ಲುಂಗಿ ಎನ್​ಗಿಡಿ ಎಸೆದ 49ನೇ ಓವರ್​ನಲ್ಲಿ ರವೀಂದ್ರ ಜಡೇಜಾ ಹಾಗೂ ಕೆಎಲ್ ರಾಹುಲ್ ಜೊತೆಗೂಡಿ ಕಲೆಹಾಕಿದ್ದು ಕೇವಲ 4 ರನ್​ ಮಾತ್ರ.

ಇನ್ನು ಫಿನಿಶಿಂಗ್ ಪಾತ್ರ ನಿರ್ವಹಿಸಬೇಕಿದ್ದ ರವೀಂದ್ರ ಜಡೇಜಾ ಅಂತಿಮ 27 ಎಸೆತಗಳನ್ನು ಎದುರಿಸಿ ಬಾರಿಸಿದ್ದು ಕೇವಲ 24 ರನ್​​ಗಳು ಮಾತ್ರ. ಇದರ ನಡುವೆ ಅವರ ಬ್ಯಾಟ್​ನಿಂದ ಕೇವಲ 2 ಫೋರ್​ಗಳು ಮಾತ್ರ ಮೂಡಿಬಂದಿದ್ದವು. ಪರಿಣಾಮ ಬೃಹತ್ ಮೊತ್ತದತ್ತ ಸಾಗಿದ್ದ ಟೀಮ್ ಇಂಡಿಯಾ ರನ್​ ಗತಿ ಅಂತಿಮ ಹಂತದಲ್ಲಿ ಕುಂಠಿತಗೊಂಡಿತು.

ಹೀಗೆ ಕೊನೆಯ 66 ಎಸೆತಗಳಲ್ಲಿ ಕೇವಲ 74 ರನ್ ಮಾತ್ರ ಕಲೆಹಾಕುವ ಮೂಲಕ ಟೀಮ್ ಇಂಡಿಯಾ ಸೌತ್ ಆಫ್ರಿಕಾ ತಂಡಕ್ಕೆ ಸಾಧಾರಣ ಗುರಿ ನೀಡಿತು. ಈ ಗುರಿಯನ್ನು ಬೆನ್ತತ್ತಲು ಆಗಮಿಸಿದ ಸೌತ್ ಆಫ್ರಿಕಾ ಪಡೆಯು ಅನಾನುಭವಿ ಪ್ರಸಿದ್ಧ್ ಕೃಷ್ಣ ಹಾಗೂ ಹರ್ಷಿತ್ ರಾಣಾ ಅವರ ಲೂಸ್ ಬಾಲ್​ಗಳ ಲಾಭ ಪಡೆದುಕೊಂಡರು.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ಅದರಲ್ಲೂ ಪ್ರಸಿದ್ಧ್ ಕೃಷ್ಣ 8.2 ಓವರ್​ಗಳಲ್ಲಿ 85 ರನ್ ನೀಡಿದ್ದು ಕೂಡ ಟೀಮ್ ಇಂಡಿಯಾ ಪಾಲಿಗೆ ದುಬಾರಿಯಾಯಿತು. ಇದರಿಂದಾಗಿ ಬೃಹತ್ ಮೊತ್ತ ಪೇರಿಸಿದರೂ ಭಾರತ ತಂಡಕ್ಕೆ ಎರಡನೇ ಪಂದ್ಯ ಗೆಲ್ಲಲು ಸಾಧ್ಯವಗಲಿಲ್ಲ. ಈ ಸೋಲಿನೊಂದಿಗೆ 3 ಪಂದ್ಯಗಳ ಸರಣಿಯು 1-1 ಅಂತರದಿಂದ ಸಮಗೊಂಡಿದೆ. ಅಲ್ಲದೆ ಶನಿವಾರ ನಡೆಯಲಿರುವ ಮೂರನೇ ಏಕದಿನ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

Published On - 8:32 am, Thu, 4 December 25

ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​