AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR ಮಿಚೆಲ್ ಸ್ಟಾರ್ಕ್​ರನ್ನು 24.75 ಕೋಟಿಗೆ ಖರೀದಿಸಿದ್ದೇಕೆ? ಇಲ್ಲಿದೆ ಕಾರಣ

IPL 2024: 2018 ರಲ್ಲಿ ಮಿಚೆಲ್ ಸ್ಟಾರ್ಕ್ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 9.40 ಕೋಟಿಗೆ ಕೆಕೆಆರ್​ ತಂಡವೇ ಖರೀದಿಸಿತ್ತು. ಆದರೆ ಗಾಯದ ಕಾರಣ ಅವರು ಟೂರ್ನಿ ಆಡಿರಲಿಲ್ಲ. ಇದೀಗ ಮತ್ತೆ ಆಸೀಸ್ ವೇಗಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

KKR ಮಿಚೆಲ್ ಸ್ಟಾರ್ಕ್​ರನ್ನು 24.75 ಕೋಟಿಗೆ ಖರೀದಿಸಿದ್ದೇಕೆ? ಇಲ್ಲಿದೆ ಕಾರಣ
Mitchell Starc
TV9 Web
| Edited By: |

Updated on: Dec 21, 2023 | 9:21 AM

Share

ಡಿಸೆಂಬರ್ 19 ರಂದು ದುಬೈನಲ್ಲಿ ನಡೆದ ಐಪಿಎಲ್ (IPL 2024) ಮಿನಿ ಹರಾಜಿನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿತ್ತು. ಕೇವಲ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಆಸ್ಟ್ರೇಲಿಯಾ ವೇಗಿ ಮಿಚೆಲ್ ಸ್ಟಾರ್ಕ್​ ಅವರನ್ನು ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಬರೋಬ್ಬರಿ 24.75 ಕೋಟಿಗೆ ಖರೀದಿಸಿತು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತ ಪಡೆದ ಆಟಗಾರ ಎಂಬ ದಾಖಲೆ ಸ್ಟಾರ್ಕ್​ ಪಾಲಾಯಿತು.

ಇದರ ಬೆನ್ನಲ್ಲೇ ಇಷ್ಟೊಂದು ದುಬಾರಿ ಮೊತ್ತಕ್ಕೆ ಮಿಚೆಲ್ ಸ್ಟಾರ್ಕ್​ ಅವರನ್ನು ಕೆಕೆಆರ್ ಯಾಕಾಗಿ ಖರೀದಿಸಿದೆ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಎಲ್ಲಾ ಪ್ರಶ್ನೆಗಳಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಉತ್ತರ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಗೌತಮ್ ಗಂಭೀರ್, ಕೆಕೆಆರ್ ತಂಡಕ್ಕೆ ಎಕ್ಸ್-ಫ್ಯಾಕ್ಟರ್ ಆಟಗಾರನ ಅವಶ್ಯಕತೆಯಿದೆ. ಅಂತಹ ಬೌಲರ್​ಗಳಲ್ಲಿ ಮಿಚೆಲ್ ಸ್ಟಾರ್ಕ್​ ಕೂಡ ಒಬ್ಬರು. ಹೀಗಾಗಿ ಅವರಿಗಾಗಿ ನಾವು ದುಬಾರಿ ಮೊತ್ತ ನೀಡಲು ಮೊದಲೇ ನಿರ್ಧರಿಸಿದ್ದೆವು.

ಸ್ಟಾರ್ಕ್ ಯಾವುದೇ ಹಂತದಲ್ಲೂ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಬೌಲರ್​ ಎಂಬುದರಲ್ಲಿ ಡೌಟೇ ಇಲ್ಲ. ಆರಂಭದಲ್ಲಿ ಉತ್ತಮವಾಗಿ ಬೌಲಿಂಗ್ ಮಾಡಿ, ಅಂತಿಮ ಓವರ್‌ಗಳಲ್ಲಿ ಒತ್ತಡವನ್ನು ನಿಭಾಯಿಸಿ ಚೆಂಡೆಸೆಯಬಲ್ಲ ಸಾಮರ್ಥ್ಯ ಸ್ಟಾರ್ಕ್​​ಗೆ ಇದೆ. ಅಷ್ಟೇ ಅಲ್ಲದೆ ತಂಡದ ಬೌಲಿಂಗ್ ವಿಭಾಗವನ್ನು ಮುನ್ನಡೆಸುವ ಜವಾಬ್ದಾರಿಯನ್ನು ವಹಿಸುತ್ತಾರೆ. ಹೀಗಾಗಿಯೇ ಕೆಕೆಆರ್ ದುಬಾರಿ ಮೊತ್ತ ನೀಡಿ ಸ್ಟಾರ್ಕ್ ಅವರನ್ನು ಖರೀದಿಸಿದೆ ಎಂದು ಗಂಭೀರ್ ತಿಳಿಸಿದ್ದಾರೆ.

ಇಲ್ಲಿ ಸ್ಟಾರ್ಕ್​ ಅವರಂತಹ ಅನುಭವಿ ಬೌಲರ್ ಇದ್ದರೆ, ದೇಶೀಯ ಬೌಲರ್​ಗಳಿಗೂ ಹೆಚ್ಚಿನ ಅನುಕೂಲವಾಗಲಿದೆ. ಕಠಿಣ ಸಂದರ್ಭಗಳಲ್ಲಿ ಅವರಿಗೆ ಮಾರ್ಗದರ್ಶನ ನೀಡಲು ನಿಮಗೆ ಯಾರಾದರೂ ಬೇಕು. ಆ ಪಾತ್ರವನ್ನು ಸ್ಟಾರ್ಕ್ ನಿರ್ವಹಿಸಲಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿಯೇ ನಾವು ಮಿಚೆಲ್ ಸ್ಟಾರ್ಕ್​ ಖರೀದಿಗೆ ಹೆಚ್ಚಿನ ಒತ್ತು ನೀಡಿದ್ದೆವು ಎಂದು ಗಂಭೀರ್ ತಿಳಿಸಿದ್ದಾರೆ.

ವಿಶೇಷ ಎಂದರೆ 2018 ರಲ್ಲಿ ಮಿಚೆಲ್ ಸ್ಟಾರ್ಕ್ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ 9.40 ಕೋಟಿಗೆ ಕೆಕೆಆರ್​ ತಂಡವೇ ಖರೀದಿಸಿತ್ತು. ಆದರೆ ಗಾಯದ ಕಾರಣ ಅವರು ಟೂರ್ನಿ ಆಡಿರಲಿಲ್ಲ. ಇದೀಗ ಮತ್ತೆ ಆಸೀಸ್ ವೇಗಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಕೆಕೆಆರ್ ಯಶಸ್ವಿಯಾಗಿದೆ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ಅತ್ಯಧಿಕ ವೇತನ ಪಡೆಯುವ 10 ಆಟಗಾರರು: ಲಿಸ್ಟ್​ನಲ್ಲಿಲ್ಲ ವಿರಾಟ್ ಕೊಹ್ಲಿ..!

ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಜೇಸನ್ ರಾಯ್, ಅನುಕುಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಸುಯ್ಯಾಶ್ ಶರ್ಮಾ, ಹರ್ಷಿತ್ ರಾಣಾ, ಸುನಿಲ್ ನರೈನ್, ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ.

ಕೆಕೆಆರ್​ ಹರಾಜಿನಲ್ಲಿ ಖರೀದಿಸಿದ ಆಟಗಾರರು:

  • ಕೆಎಸ್ ಭರತ್- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಚೇತನ್ ಸಕರಿಯಾ- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಮಿಚೆಲ್ ಸ್ಟಾರ್ಕ್ – 24.75 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಆಂಗ್ಕ್ರಿಶ್ ರಘುವಂಶಿ – 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ರಮಣದೀಪ್ ಸಿಂಗ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
  • ಶೆರ್ಫಾನ್ ರುದರ್‌ಫೋರ್ಡ್- 1.50 ಕೋಟಿ (ಮೂಲ ಬೆಲೆ 1.50 ಕೋಟಿ ರೂ.)
  • ಮನೀಶ್ ಪಾಂಡೆ- 50 ಲಕ್ಷ (ಮೂಲ ಬೆಲೆ 50 ಲಕ್ಷ ರೂ.)
  • ಮುಜೀಬ್ ಉರ್ ರೆಹಮಾನ್- 2 ಕೋಟಿ (ಮೂಲ ಬೆಲೆ 2 ಕೋಟಿ ರೂ.)
  • ಗಸ್ ಅಟ್ಕಿನ್ಸನ್- 1 ಕೋಟಿ (ಮೂಲ ಬೆಲೆ 1 ಕೋಟಿ ರೂ.)
  • ಶಾಕಿಬ್ ಹುಸೇನ್- 20 ಲಕ್ಷ (ಮೂಲ ಬೆಲೆ 20 ಲಕ್ಷ ರೂ.)
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ