AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಆಟಗಾರನಿಗಾಗಿ ಚಾಂಪಿಯನ್ಸ್ ಟ್ರೋಫಿ ತಂಡವನ್ನು ಘೋಷಿಸದ ಪಾಕಿಸ್ತಾನ್

ICC Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಸುರುವಾಗಲಿದೆ. ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿ ಟೂರ್ನಿಯ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಇದೇ ವೇಳೆ ಟೀಮ್ ಇಂಡಿಯಾದ ಮ್ಯಾಚ್​ಗಳು ದುಬೈನಲ್ಲಿ ನಡೆಯಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23 ರಂದು ಜರುಗಲಿದೆ.

ಒಬ್ಬ ಆಟಗಾರನಿಗಾಗಿ ಚಾಂಪಿಯನ್ಸ್ ಟ್ರೋಫಿ ತಂಡವನ್ನು ಘೋಷಿಸದ ಪಾಕಿಸ್ತಾನ್
Pakistan
ಝಾಹಿರ್ ಯೂಸುಫ್
|

Updated on: Jan 22, 2025 | 12:53 PM

Share

ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಗಾಗಿ ಈಗಾಗಲೇ 7 ತಂಡಗಳ ಘೋಷಣೆಯಾಗಿದೆ. ಇದಾಗ್ಯೂ ಆತಿಥೇಯ ಪಾಕಿಸ್ತಾನ್ ತಮ್ಮ ತಂಡವನ್ನು ಪ್ರಕಟಿಸಿಲ್ಲ. ಐಸಿಸಿ ಜನವರಿ 12 ರಂದು ಗಡುವು ವಿಧಿಸಿದ್ದರೂ, ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ ಇನ್ನೂ ಸಹ ತನ್ನ 15 ಸದಸ್ಯರ ಬಳಗವನ್ನು ಪ್ರಕಟಿಸದಿರಲು ಮುಖ್ಯ ಕಾರಣ ಯುವ ಆಟಗಾರನ ಗಾಯ.

ಹೌದು, ಪಾಕಿಸ್ತಾನ್ ತಂಡದ ಯುವ ಆರಂಭಿಕ ದಾಂಡಿಗ ಸೈಮ್ ಅಯ್ಯೂಬ್ ಕಣಕಾಲು ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡು ಅವರು ಮೈದಾನ ತೊರೆದಿದ್ದರು.

ಇದೀಗ ವೈದ್ಯಕೀಯ ನಿಗಾದಲ್ಲಿರುವ ಅವರ ಫಿಟ್​ನೆಸ್ ರಿಪೋರ್ಟ್​ಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಕಾಯುತ್ತಿದೆ. ಈ ವೈದ್ಯಕೀಯ ವರದಿ ಬಂದ ಬಳಿಕ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲು ಪಿಸಿಬಿ ಕಾಯುತ್ತಿದೆ.

ಕಾದು ನೋಡುವ ತಂತ್ರ:

ಸೈಮ್ ಅಯ್ಯೂಬ್ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನ ಫಿಟ್​ನೆಸ್ ಸಾಧಿಸುವ ಸಾಧ್ಯತೆಯಿದ್ದರೆ, ಅವರನ್ನೇ ತಂಡಕ್ಕೆ ಆಯ್ಕೆ ಮಾಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದೆ. ಒಂದು ವೇಳೆ ಅವರು ಟೂರ್ನಿ ಆರಂಭಕ್ಕೂ ಮುನ್ನ ಗುಣಮುಖರಾಗುವ ಸಾಧ್ಯತೆಯಿಲ್ಲದಿದ್ದರೆ, ಅನುಭವಿ ಆಟಗಾರ ಫಖರ್ ಝಮಾನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಸೈಮ್ ಅಯ್ಯೂಬ್ ಆಯ್ಕೆಗೆ ಏಕೆ ಮಹತ್ವ?

22 ವರ್ಷದ ಸೈಮ್ ಅಯ್ಯೂಬ್ ಪಾಕಿಸ್ತಾನ್ ತಂಡದ ಭರವಸೆಯ ಯುವ ದಾಂಡಿಗ. ಈಗಾಗಲೇ ಪಾಕ್ ಪರ 9 ಏಕದಿನ ಪಂದ್ಯಗಳನ್ನಾಡಿರುವ ಎಡಗೈ ಬ್ಯಾಟರ್ 3 ಶತಕ ಹಾಗೂ 1 ಅರ್ಧಶತಕದೊಂದಿಗೆ ಒಟ್ಟು 515 ರನ್ ಕಲೆಹಾಕಿದ್ದಾರೆ.

ಅದರಲ್ಲೂ ಕಳೆದ ಸರಣಿಯಲ್ಲಿ ಸೌತ್ ಆಫ್ರಿಕಾ ವೇಗಿಗಳ ಮುಂದೆ ಸೆಟೆದು ನಿಂತ ಸೈಮ್ 3 ಪಂದ್ಯಗಳಲ್ಲಿ 2 ಶತಕಗಳೊಂದಿಗೆ 235 ರನ್ ಬಾರಿಸಿ ಮಿಂಚಿದ್ದರು. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಬೇಕಿದ್ದರೆ ಪಾಕಿಸ್ತಾನ್ ಪಾಲಿಗೆ ಭರ್ಜರಿ ಫಾರ್ಮ್​ನಲ್ಲಿರುವ ಸೈಮ್ ಅಯ್ಯೂಬ್ ಅವರ ಅನಿವಾರ್ಯತೆ ಇದೆ. ಹಾಗಾಗಿಯೇ ಯುವ ದಾಂಡಿಗ ಫಿಟ್​ನೆಸ್ ರಿಪೋರ್ಟ್​ಗಾಗಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕಾದು ಕುಳಿತಿದೆ.

ಇದನ್ನೂ ಓದಿ: ಸಿಕ್ಸ್​ಗಳ ಸುರಿಮಳೆ… ಟಿ20 ಕ್ರಿಕೆಟ್​ನಲ್ಲಿ ಕೀರನ್ ಪೊಲಾರ್ಡ್ ವಿಶ್ವ ದಾಖಲೆ

ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ್ ಸಂಭಾವ್ಯ ತಂಡ: ಮೊಹಮ್ಮದ್ ರಿಝ್ವಾನ್ (ನಾಯಕ), ಬಾಬರ್ ಆಝಂ, ಸಲ್ಮಾನ್ ಅಲಿ ಅಘಾ, ಕಮ್ರಾನ್ ಗುಲಾಮ್, ತಯ್ಯಬ್ ತಾಹಿರ್, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್, ಸುಫ್ಯಾನ್ ಮಕೀಮ್, ಇರ್ಫಾನ್ ಖಾನ್, ಮೊಹಮ್ಮದ್ ಹಸ್ನೈನ್, ಹಸೀಬುಲ್ಲಾ, ಇಮಾಮ್ ಉಲ್ ಹಕ್, ಫಖರ್ ಝಮಾನ್ ಅಥವಾ ಸೈಮ್ ಅಯ್ಯೂಬ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ