AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಮುಝರಬಾನಿಯನ್ನೇ ಆಯ್ಕೆ ಮಾಡಿದ್ಯಾಕೆ ಗೊತ್ತಾ?

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಈವರೆಗೆ ಆಡಿದ 12 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದ್ದು, ಈ ಗೆಲುವುಗಳೊಂದಿಗೆ ಇದೀಗ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಆದರೆ ಪ್ಲೇಆಫ್ ಪಂದ್ಯಕ್ಕೂ ಮುನ್ನ ಆರ್​ಸಿಬಿ ತಂಡಕ್ಕೆ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿ ಎಂಟ್ರಿ ಕೊಟ್ಟಿದ್ದಾರೆ.

IPL 2025: RCB ಮುಝರಬಾನಿಯನ್ನೇ ಆಯ್ಕೆ ಮಾಡಿದ್ಯಾಕೆ ಗೊತ್ತಾ?
Blessing Muzarabani
ಝಾಹಿರ್ ಯೂಸುಫ್
|

Updated on: May 20, 2025 | 10:34 AM

Share

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಝಿಂಬಾಬ್ವೆ ತಂಡದ ಆಟಗಾರ ಕಾಣಿಸಿಕೊಂಡಿದ್ದಾರೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಲ್ಲಿ. ಆರ್​ಸಿಬಿ ತಂಡದ ವೇಗಿ ಲುಂಗಿ ಎನ್​ಗಿಡಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ತಂಡದ ಭಾಗವಾಗಲು ಮೇ 26 ರಂದು ಸೌತ್ ಆಫ್ರಿಕಾಗೆ ತೆರಳಲಿದ್ದಾರೆ. ಇದೀಗ ಅವರ ಬದಲಿಯಾಗಿ ಆರ್​ಸಿಬಿ ಝಿಂಬಾಬ್ವೆ ವೇಗಿ ಬ್ಲೆಸಿಂಗ್ ಮುಝರಬಾನಿಯನ್ನು ಆಯ್ಕೆ ಮಾಡಿಕೊಂಡಿದೆ.

ಅತ್ತ ನ್ಯೂಝಿಲೆಂಡ್, ಶ್ರೀಲಂಕಾ, ಆಸ್ಟ್ರೇಲಿಯಾ ಆಟಗಾರರಿದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಝಿಂಬಾಬ್ವೆಯ ಯುವ ವೇಗಿಗೆ ಮಣೆ ಹಾಕಿದ್ದು ಯಾಕೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕೆ ಮುಖ್ಯ ಕಾರಣವೆಂದರೆ…

  • ಬ್ಲೆಸಿಂಗ್ ಮುಝರಬಾನಿಯ ಪ್ರಸ್ತುತ ಫಾರ್ಮ್​. ಝಿಂಬಾಬ್ವೆ ಪರ ಮುಝರಬಾನಿ 67 ಟಿ20 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಬರೋಬ್ಬರಿ 78 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಅದು ಕೂಡ ಪ್ರತಿ ಓವರ್​ಗೆ 7.03 ಸರಾಸರಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಅಂದರೆ ಬ್ಲೆಸಿಂಗ್ ಮುಝರಬಾನಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಎಕಾನಮಿ ರೇಟ್ ಹೊಂದಿದ್ದಾರೆ.
  • ಇನ್ನು ಬ್ಲೆಸಿಂಗ್ ಮುಝರಬಾನಿಯ ಆಯ್ಕೆಗೆ ಅವರ ಎತ್ತರ ಕೂಡ ಪ್ಲಸ್ ಪಾಯಿಂಟ್ ಆಗಿದೆ. ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದು ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ ಕಣಕ್ಕಿಳಿದ ಹೇಝಲ್​ವುಡ್ ಒಟ್ಟು 18 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹೇಝಲ್​ವುಡ್ ಇಂತಹದೊಂದು ಯಶಸ್ಸು ಸಾಧಿಸಿದ್ದು ಬೌನ್ಸರ್ ಎಸೆತಗಳ ಮೂಲಕ.
  • ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್​ನಲ್ಲಿ ಅತ್ಯುತ್ತಮ ಬೌನ್ಸರ್ ಎಸೆಯುವ ಮೂಲಕ ಜೋಶ್ ಹೇಝಲ್​ವುಡ್ ಪಂದ್ಯದ ಚಿತ್ರಣ ಬದಲಿಸಿದ್ದರು. ಆದರೆ ಭುಜದ ನೋವಿನ ಕಾರಣ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಹೇಝಲ್​ವುಡ್ ಮುಂದಿನ ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುವುದಿಲ್ಲ. ಹೀಗಾಗಿ ಬೌನ್ಸರ್ ಎಸೆಯಬಲ್ಲ ಸಾಮರ್ಥ್ಯವನ್ನು ಹೊಂದಿರುವ ಮತ್ತೋರ್ವ ಬೌಲರ್​​ನ ಆಯ್ಕೆಗೆ ಆರ್​​ಸಿಬಿ ಪ್ಲ್ಯಾನ್ ರೂಪಿಸಿದೆ.
  • ಇದೇ ವೇಳೆ ಆರ್​ಸಿಬಿಗೆ ಸಿಕ್ಕ ಅತ್ಯುತ್ತಮ ಆಯ್ಕೆ 6.8 ಅಡಿ ಎತ್ತರದ ಮುಝರಬಾನಿ. ಅತ್ತ ಝಿಂಬಾಬ್ವೆ ವೇಗಿ ಕೂಡ ಬೌನ್ಸರ್ ಎಸೆತಗಳಿಗೆ ಹೆಸರುವಾಸಿ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬ್ಲೆಸಿಂಗ್ ಮುಝರಬಾನಿಯನ್ನು ಬದಲಿಯಾಗಿ ಆಯ್ಕೆ ಮಾಡಲು ನಿರ್ಧರಿಸಿದೆ.
  • ಇನ್ನು ಈ ಆಯ್ಕೆ ಹಿಂದಿರುವ ಮಾಸ್ಟರ್ ಮೈಂಡ್ ಆರ್​ಸಿಬಿ ತಂಡದ ಕೋಚ್ ಆ್ಯಂಡಿ ಫ್ಲವರ್. ಝಿಂಬಾಬ್ವೆ ಮೂಲದವರಾಗಿರುವ ಫ್ಲವರ್​ಗೆ ಬ್ಲೆಸಿಂಗ್ ಮುಝರಬಾನಿ ಸಾಮರ್ಥ್ಯದ ಬಗ್ಗೆ ತುಂಬಾ ಚೆನ್ನಾಗಿ ಗೊತ್ತಿದೆ. ಈ ಹಿಂದೆ ಆ್ಯಂಡಿ ಫ್ಲವರ್​ ಕೋಚಿಂಗ್​ನಲ್ಲಿ ಇಂಟರ್​ನ್ಯಾಷನಲ್ ಟಿ20 ಲೀಗ್​ನಲ್ಲಿ ಗಲ್ಫ್ ಜೈಂಟ್ಸ್ ಮತ್ತು ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಮುಲ್ತಾನ್ ಸುಲ್ತಾನ್ಸ್ ಪರ ಬ್ಲೆಸಿಂಗ್ ಮುಝರಬಾನಿ ಕಣಕ್ಕಿಳಿದಿದ್ದರು.
  • 2021ರ ಪಿಎಸ್​ಎಲ್​ನಲ್ಲಿ ಆ್ಯಂಡಿ ಫ್ಲವರ್ ಮುಂದಾಳತ್ವದ ಮುಲ್ತಾನ್ ಸುಲ್ತಾನ್ಸ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಬ್ಲೆಸಿಂಗ್ ಮುಝರಬಾನಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿಯೇ ಆ್ಯಂಡಿ ಫ್ಲವರ್ ಝಿಂಬಾಬ್ವೆ ವೇಗಿಗೆ ಮಣೆ ಹಾಕಲು ನಿರ್ಧರಿಸಿದ್ದಾರೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಯ್ಕೆಯಾದ ಮೊದಲ ಝಿಂಬಾಬ್ವೆ ಆಟಗಾರನಾಗಿ ಬ್ಲೆಸಿಂಗ್ ಮುಝರಬಾನಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: 18 ವರ್ಷಗಳಲ್ಲಿ 18 ನಾಯಕರನ್ನು ಕಣಕ್ಕಿಳಿಸಿದ ಪಂಜಾಬ್ ಕಿಂಗ್ಸ್

ಪ್ಲೇಆಫ್ ಪಂದ್ಯವು ಮೇ 29 ರಿಂದ ಶುರುವಾಗಲಿದ್ದು, ಅದಕ್ಕೂ ಮುನ್ನ ಆಸ್ಟ್ರೇಲಿಯಾ ವೇಗಿ ಜೋಶ್ ಹೇಝಲ್​ವುಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳದಿದ್ದರೆ, ಬ್ಲೆಸಿಂಗ್ ಮುಝರಬಾನಿಗೆ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಸಿಗಬಹುದು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ