AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಎಲ್ಲವೂ ಅಚ್ಚರಿ… ಏನಾಗ್ತಿದೆ ಟೀಮ್ ಇಂಡಿಯಾದಲ್ಲಿ?

Virat Kohli - Rohit Sharma retires: ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್​ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದರು.

Team India: ಎಲ್ಲವೂ ಅಚ್ಚರಿ... ಏನಾಗ್ತಿದೆ ಟೀಮ್ ಇಂಡಿಯಾದಲ್ಲಿ?
Virat Kohli - Rohit Sharma
ಝಾಹಿರ್ ಯೂಸುಫ್
|

Updated on:May 13, 2025 | 1:01 PM

Share

ಏಪ್ರಿಲ್ 2025… ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ನಡೆಸಿಕೊಡುವ ಬಿಯಾಂಡ್23 ಪಾಡ್ ಕಾಸ್ಟ್​ನಲ್ಲಿ ರೋಹಿತ್ ಶರ್ಮಾ (Rohit Sharma) ಕಾಣಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಹಿಟ್​ಮ್ಯಾನ್, ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದೇನೆ. ಅಲ್ಲದೆ ಈ ಸರಣಿಯಲ್ಲಿ ನಾನು ನನ್ನ ಕೈಲಾದಷ್ಟು ಅತ್ಯುತ್ತಮ ಪ್ರದರ್ಶನ ನೀಡಲು ಪ್ರಯತ್ನಿಸುತ್ತೇನೆ ಎಂದಿದ್ದರು.

ಈ ಹೇಳಿಕೆ ನೀಡಿ ವಾರಗಳು ಕಳೆಯುವಷ್ಟರಲ್ಲಿ ರೋಹಿತ್ ಶರ್ಮಾ ತಮ್ಮ ಟೆಸ್ಟ್ ಕೆರಿಯರ್ ಅಂತ್ಯಗೊಳಿಸಿದ್ದರು. ಅಲ್ಲದೆ ಮೇ 7 ರಂದು ಸೋಷಿಯಲ್ ಮೀಡಿಯಾ ಪೋಸ್ಟ್​ ಮೂಲಕ ಅದನ್ನು ಅಧಿಕೃತಗೊಳಿಸಿದರು.

ಫೆಬ್ರವರಿ 2025… ಟೀಮ್ ಇಂಡಿಯಾ ಆಟಗಾರರು ರಣಜಿ ಟೂರ್ನಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿತು. ಅದರಂತೆ ವಿರಾಟ್ ಕೊಹ್ಲಿ ದೆಹಲಿ ರಣಜಿ ತಂಡದ ಪರ ಕಣಕ್ಕಿಳಿದಿದ್ದರು. ಈ ವೇಳೆ ದೆಹಲಿ ತಂಡದ ಕೋಚ್ ಆಗಿದ್ದವರು ಸರಣ್‌ದೀಪ್ ಸಿಂಗ್. ರೈಲ್ವೇಸ್ ವಿರುದ್ಧದ ಪಂದ್ಯ ನಡುವೆ ವಿರಾಟ್ ಕೊಹ್ಲಿ ಹಾಗೂ ಸರಣ್‌ದೀಪ್ ಸಿಂಗ್ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದರು.

ಅದರಲ್ಲೂ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕುರಿತಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ಕೊಹ್ಲಿ, ಇಂಗ್ಲೆಂಡ್ ಸರಣಿಗಾಗಿ ಸಜ್ಜಾಗುತ್ತಿರುವುದಾಗಿ ತಿಳಿಸಿದ್ದರು. ಅಲ್ಲದೆ 2018 ರಲ್ಲಿ 3-4 ಶತಕಗಳನ್ನು ಬಾರಿಸಿದ್ದೆ. ಈ ಬಾರಿ ಕೂಡ ಇಂಗ್ಲೆಂಡ್​ನಲ್ಲಿ ಅಂತಹ ಪ್ರದರ್ಶನ ನೀಡಬೇಕೆಂದಿರುವೆ ಎಂದು ವಿರಾಟ್ ಕೊಹ್ಲಿ, ಸರಣ್‌ದೀಪ್ ಸಿಂಗ್ ಅವರಲ್ಲಿ ಹೇಳಿದ್ದರು.

ಆದರೆ ಇದೀಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಮೇ 12 ರಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ದೀರ್ಘಾವಧಿ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಅಂದರೆ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿ ದಿನಗಳು ಕಳೆಯುವ ಮುನ್ನವೇ ವಿರಾಟ್ ಕೊಹ್ಲಿ ಕೂಡ ಟೆಸ್ಟ್​ ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ. ಆದರೆ ಇಬ್ಬರು ಕೂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಆಗ್ರಹಿಸಿದ್ದರು ಎಂಬುದಕ್ಕೆ ಈ ಮೇಲಿನ ಹೇಳಿಕೆಗಳೇ ಸಾಕ್ಷಿ.

ಅತ್ತ ರೋಹಿತ್ ಶರ್ಮಾ ಏಪ್ರಿಲ್​ನಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆಡಲು ಸಜ್ಜಾಗುತ್ತಿರುವುದಾಗಿ ಬಹಿರಂಗ ಹೇಳಿಕೆ ನೀಡಿದ್ದರು. ಇತ್ತ ವಿರಾಟ್ ಕೊಹ್ಲಿ ಕೂಡ ತಮ್ಮ ಟೆಸ್ಟ್ ಕೆರಿಯರ್ ಅನ್ನು ಅಂತ್ಯಗೊಳಿಸುವ ಯಾವುದೇ ಇರಾದೆಯಲ್ಲಿ ಇರಲಿಲ್ಲ. ಇದಾಗ್ಯೂ ಒಂದೇ ವಾರದಲ್ಲಿ ಇಬ್ಬರು ದಿಗ್ಗಜರು ವಿದಾಯ ಹೇಳಿರುವುದೇ ಅಚ್ಚರಿ.

ಇದನ್ನೂ ಓದಿ: IPL 2025: 3 ಬಿಗ್ ಮ್ಯಾಚಸ್: RCB ತಂಡದ ಹೊಸ ವೇಳಾಪಟ್ಟಿ ಇಲ್ಲಿದೆ

ಅದರಲ್ಲೂ ದಶಕಗಳ ಕಾಲ ತಂಡದ ಭಾಗವಾಗಿದ್ದ ಇಬ್ಬರು ಆಟಗಾರರು ವಿದಾಯದ ಪಂದ್ಯವಿಲ್ಲದೇ ನಿವೃತ್ತಿ ಘೋಷಿಸಿರುವುದೇ ಪರಮಾಶ್ಚರ್ಯ. ಇದಾಗ್ಯೂ ಬಿಸಿಸಿಐ ಇಬ್ಬರು ದಿಗ್ಗಜರಿಗೆ ಬೀಳ್ಕೊಡುಗೆ ಪಂದ್ಯವನ್ನು ಆಯೋಜಿಸುವ ಬಗ್ಗೆಯಾಗಲಿ, ಗೌರವಯುತವಾಗಿ ಬೀಳ್ಕೊಡುಗೆ ಏರ್ಪಾಡು ಮಾಡುವುದರ ಬಗ್ಗೆಯಾಗಲಿ ಯಾವುದೇ ಹೇಳಿಕೆ ನೀಡಿಲ್ಲ. ಹೀಗಾಗಿಯೇ ಏನಾಗ್ತಿದೆ ಟೀಮ್ ಇಂಡಿಯಾದಲ್ಲಿ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Published On - 12:56 pm, Tue, 13 May 25

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?