AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ

IPL 2025 LSG vs MI: ಲಕ್ನೋದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ ಕಲೆಹಾಕಿದೆ. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 191 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಲಕ್ನೋ ಪಡೆ 12 ರನ್​ಗಳ ಗೆಲುವು ದಾಖಲಿಸಿದೆ.

Rohit Sharma: ರೋಹಿತ್ ಶರ್ಮಾ ಕಣಕ್ಕಿಳಿಯದಿರಲು ಇದುವೇ ಅಸಲಿ ಕಾರಣ
Rohit Sharma - Mumbai Indians
ಝಾಹಿರ್ ಯೂಸುಫ್
|

Updated on:Apr 05, 2025 | 11:29 AM

Share

IPL 2025: ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ (Rohit Sharma) ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಪಂದ್ಯದ ನಡುವೆ ಹಿಟ್​ಮ್ಯಾನ್ ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

ಟಾಸ್ ಪ್ರಕ್ರಿಯೆ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ ಅವರ ಅಲಭ್ಯತೆಯನ್ನು ಖಚಿತಪಡಿಸಿದ್ದರು. ಮೊಣಕಾಲಿನ ಗಾಯದ ಕಾರಣ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ತಿಳಿಸಿದ್ದರು.

ಆದರೆ ಮುಂಬೈ ಇಂಡಿಯನ್ಸ್ ತಂಡದ ಸ್ಟ್ರಾಟಜಿಕ್ ಟೈಮ್ ಔಟ್ ವೇಳೆ ರೋಹಿತ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ ಯಾವುದೇ ಸಮಸ್ಯೆ ಇಲ್ಲವೆಂಬಂತೆ ಸಹ ಆಟಗಾರರಿಗೆ ಸಲಹೆ ನೀಡುತ್ತಿರುವುದು ಸಹ ಕಂಡು ಬಂದಿತ್ತು. ಹೀಗಾಗಿಯೇ ರೋಹಿತ್ ಶರ್ಮಾ ನಿಜಕ್ಕೂ ಗಾಯಗೊಂಡಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಈ ಕೆಳಗಿನ ವಿಡಿಯೋ.

ಇದನ್ನೂ ಓದಿ
Image
ಹುಡುಗಿಯಾಗಿ ಬದಲಾದ ಟೀಮ್ ಇಂಡಿಯಾದ ಮಾಜಿ ಆಟಗಾರನ ಪುತ್ರ
Image
VIDEO: ವಿರಾಟ್ ಕೊಹ್ಲಿಗೆ ಬೌಲಿಂಗ್: ಭಾವುಕರಾಗಿ ಅರ್ಧದಲ್ಲೇ ನಿಂತ ಸಿರಾಜ್
Image
11ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ವಿಶ್ವ ದಾಖಲೆ ಬರೆದ ನಸೀಮ್ ಶಾ
Image
MS Dhoni: ಕೇವಲ 3 ರನ್​: ಗ್ರೇಟ್​ ಫಿನಿಶರ್ ಫಿನಿಶ್..!

ರೋಹಿತ್ ಶರ್ಮಾ ಗಾಯಗೊಂಡಿರು ವ ವಿಡಿಯೋ:

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ರೋಹಿತ್ ಶರ್ಮಾ ಗಾಯಗೊಂಡಿರುವುದು ನಿಜ. ಮೊಣಕಾಲಿಗೆ ಗಾಯವಾಗಿದ್ದ ಕಾರಣ ಅವರು ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿದ್ದರು. ಅಲ್ಲದೆ ಫಿಸಿಯೋ ಜೊತೆ ಡ್ರೆಸ್ಸಿಂಗ್ ರೂಮ್​ಗೆ ತೆರಳುತ್ತಿರುವ ವಿಡಿಯೋ ಇದಾಗಿದೆ.

ಇದಾಗ್ಯೂ ಅವರ ಗಾಯವು ಗಂಭೀರವಲ್ಲ. ಆದರೆ ಗಾಯದ ನಡುವೆ ಮತ್ತೆ ಕಣಕ್ಕಿಳಿಸಿ ರಿಸ್ಕ್​ ತೆಗೆದುಕೊಳ್ಳಲು ಮುಂಬೈ ಇಂಡಿಯನ್ಸ್ ಮುಂದಾಗಿರಲಿಲ್ಲ. ಹೀಗಾಗಿ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿದ್ದಾರೆ. ಅಲ್ಲದೆ ಮುಂದಿನ ಪಂದ್ಯದ ವೇಳೆಗೆ ಅವರು ಸಂಪೂರ್ಣ ಫಿಟ್​ನೆಸ್ ಹೊಂದಲಿದ್ದು, ಅದರಂತೆ ಏಪ್ರಿಲ್ 7 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಲಕ್ನೋ ತಂಡಕ್ಕೆ ಸೂಪರ್ ಜಯ:

ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆಯ್ದುಕೊ0ಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಿಚೆಲ್ ಮಾರ್ಷ್ (60) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್​ಗಳಲ್ಲಿ 203 ರನ್​ ಕಲೆಹಾಕಿತು.

ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್​ಡೇಟ್ ನೀಡಿದ RCB ಕೋಚ್

204 ರನ್​ಗ:ಳ ಕಠಿಣ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ಸೂರ್ಯಕುಮಾರ್ ಯಾದವ್ (67) ಅರ್ಧಶತಕ ಬಾರಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಿರಲಿಲ್ಲ. ಪರಿಣಾಮ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 191 ರನ್​ಗಳಿಸಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

Published On - 11:23 am, Sat, 5 April 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ