Stuart Broad: 1.84 ಕೋಟಿ ರೂ.ಗೆ ಹರಾಜಾಗಿದ್ದರೂ IPL ಆಡದ ಸ್ಟುವರ್ಟ್​ ಬ್ರಾಡ್..!

Stuart Broad Records: ಇಂಗ್ಲೆಂಡ್ ಪರ 167 ಟೆಸ್ಟ್ ಪಂದ್ಯಗಳನ್ನಾಡಿರುವ ಬ್ರಾಡ್ ಇದುವರೆಗೆ 602 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 121 ಏಕದಿನ ಪಂದ್ಯಗಳಿಂದ 178 ವಿಕೆಟ್ ಹಾಗೂ 56 ಟಿ20 ಪಂದ್ಯಗಳಿಂದ 65 ವಿಕೆಟ್​​ಗಳನ್ನು ಪಡೆದಿದ್ದಾರೆ.

Stuart Broad: 1.84 ಕೋಟಿ ರೂ.ಗೆ ಹರಾಜಾಗಿದ್ದರೂ IPL ಆಡದ ಸ್ಟುವರ್ಟ್​ ಬ್ರಾಡ್..!
Stuart Broad
Follow us
| Updated By: ಝಾಹಿರ್ ಯೂಸುಫ್

Updated on: Jul 30, 2023 | 5:13 PM

Stuart Broad: ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್​ ಬ್ರಾಡ್ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್​ಗೆ ವಿದಾಯ ಹೇಳಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆದ ಆ್ಯಶಸ್ ಸರಣಿಯ ಅಂತಿಮ ಪಂದ್ಯದ ಮೂಲಕ ಬ್ರಾಡ್ ಕ್ರಿಕೆಟ್​ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ 17 ವರ್ಷಗಳಿಂದ ಇಂಗ್ಲೆಂಡ್ ತಂಡದ ಭಾಗವಾಗಿರುವ ಬಲಗೈ, ಕೆಲ ಲೀಗ್​ಗಳಲ್ಲಿ ಕಾಣಿಸಿಕೊಂಡರೂ ಐಪಿಎಲ್​ನಿಂದ ಮಾತ್ರ ದೂರವೇ ಉಳಿದಿದ್ದರು.

ಇದಕ್ಕೆ ಒಂದು ಕಾರಣ 2009 ರಲ್ಲಿ ಸ್ಟುವರ್ಟ್ ಬ್ರಾಡ್ ನೀಡಿದ್ದ ಹೇಳಿಕೆ ಎನ್ನಬಹುದು. ಅಂದು ಟೆಸ್ಟ್ ಕ್ರಿಕೆಟ್​ನತ್ತ ಹೆಚ್ಚಿನ ಗಮನ ಹರಿಸಲು ಯಾವುದೇ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಬ್ರಾಡ್ ತಿಳಿಸಿದ್ದರು.

ಇದಾಗ್ಯೂ 2011 ರಲ್ಲಿ ಸ್ಟುವರ್ಟ್ ಬ್ರಾಡ್ ಅವರ ಹೆಸರು ಐಪಿಎಲ್ ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತು. ಅಂದಿನ ಯಂಗ್ ಅ್ಯಂಡ್ ಎನರ್ಜಿಟಿಕ್ ವೇಗಿಯನ್ನು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿಯು ಬರೋಬ್ಬರಿ 1.84 ಕೋಟಿಗೆ ಖರೀದಿಸಿದ್ದರು.

ಇತ್ತ ಕೋಟಿ ಮೊತ್ತಕ್ಕೆ ಹರಾಜಾದರೂ ಸ್ಟುವರ್ಟ್ ಬ್ರಾಡ್ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಪಾರ್ಶ್ವದ ಒತ್ತಡದ ಸಮಸ್ಯೆಯ ಕಾರಣ ಬ್ರಾಡ್ 2011 ರ ಐಪಿಎಲ್​ನಿಂದ ಹೊರಗುಳಿದಿದ್ದರು. ಇದಾಗ್ಯೂ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಅವರನ್ನು ಐಪಿಎಲ್ 2012 ಕ್ಕಾಗಿ ತಂಡದಲ್ಲೇ ಉಳಿಸಿಕೊಂಡಿತ್ತು.

ಆದರೆ 2012 ರಲ್ಲಿ ಪಕ್ಕೆಲುಬಿನ ಗಾಯದ ಸಮಸ್ಯೆಯ ಕಾರಣ ಸ್ಟುವರ್ಟ್ ಬ್ರಾಡ್ ಐಪಿಎಲ್​ನಲ್ಲಿ ಭಾಗವಹಿಸಲಾಗಲಿಲ್ಲ. ಇದಾದ ಬಳಿಕ ಮತ್ತೆ ಬ್ರಾಡ್ ಐಪಿಎಲ್​ನತ್ತ ಮುಖ ಮಾಡಿಲ್ಲ.

ಈ ಹಿಂದಿನ ತಮ್ಮ ಹೇಳಿಕೆಯಂತೆ ಟೆಸ್ಟ್ ಕ್ರಿಕೆಟ್​ನತ್ತ ಗಮನ ಕೇಂದ್ರೀಕರಿಸಿದರು. ಇದಾಗಿ ವರ್ಷಗಳ ಬಳಿಕ ಅವರು ನಿವೃತ್ತಿ ಘೋಷಿಸುವಾಗ ತಮ್ಮ ಬತ್ತಳಿಕೆಯಲ್ಲಿ 600 ಕ್ಕೂ ಅಧಿಕ ಟೆಸ್ಟ್ ವಿಕೆಟ್​ಗಳಿದ್ದವು. ಈ ಸಾಧನೆ ಮಾಡಿದ ವಿಶ್ವದ 2ನೇ ವೇಗದ ಬೌಲರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು ಎಂಬುದು ವಿಶೇಷ.

ಇದನ್ನೂ ಓದಿ: Stuart Broad: 151 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ಸ್ಟುವರ್ಟ್ ಬ್ರಾಡ್

ಇಂಗ್ಲೆಂಡ್ ಪರ 167 ಟೆಸ್ಟ್ ಪಂದ್ಯಗಳನ್ನಾಡಿರುವ ಬ್ರಾಡ್ ಇದುವರೆಗೆ 602 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 121 ಏಕದಿನ ಪಂದ್ಯಗಳಿಂದ 178 ವಿಕೆಟ್ ಹಾಗೂ 56 ಟಿ20 ಪಂದ್ಯಗಳಿಂದ 65 ವಿಕೆಟ್​​ಗಳನ್ನು ಪಡೆದಿದ್ದಾರೆ.

ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಆಂಧ್ರಪ್ರದೇಶದಲ್ಲಿ 16ನೇ ಶತಮಾನದ ಆಂಜನೇಯ ದೇವಾಲಯಕ್ಕೆ ಹಾನಿ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಮಿತಿ ಮೀರಿದ ದರ್ಶನ್ ಬೆನ್ನು ನೋವು; ಬಳ್ಳಾರಿ ಜೈಲಿಗೆ ಬಂತು ಮೆಡಿಕಲ್ ಬೆಡ್
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ಬಿಜೆಪಿ, ಜೆಡಿಎಸ್ ಸಂಸದರು ಕೇಂದ್ರದ ಮುಂದೆ ತುಟಿಬಿಚ್ಚಲ್ಲ: ಸಿದ್ದರಾಮಯ್ಯ
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ನೂರೈವತ್ತು ಜನಕ್ಕೆ ತಯಾರಿಸಿದ ಬಾಡೂಟ ಸೀಜ್ ಮಾಡಿದ ಚುನಾವಣಾಧಿಕಾರಿಗಳು
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಮುಡಾ ಪ್ರಕರಣ ಮತ್ತು ಈಡಿ ನಡುವೆ ಎಲ್ಲಿಯ ಸಂಬಂಧ? ಸಂತೋಷ್ ಲಾಡ್, ಸಚಿವ
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ