AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suryakumar Yadav: ಸೂರ್ಯಕುಮಾರ್ ಅವರ ನಮಸ್ತೆ ಸೆಲೆಬ್ರೇಷನ್ ಹಿಂದಿದೆ ಒಂದು ಕಾರಣ

Suryakumar Yadav 'Namaste' celebration: ಐವತ್ತು ರನ್​ ಪೂರೈಸಿದ ನಂತರ ಪ್ರೇಕ್ಷಕರನ್ನು ನೋಡುತ್ತಲೇ ಬ್ಯಾಟ್‌ ಎತ್ತಿ ಎರಡೂ ಕೈಗಳನ್ನು ಮೇಲಕ್ಕೆ ತೆಗೆದುಕೊಂಡು ‘ ನಮಸ್ತೆ’ ಎಂದಿದ್ದರು.

Suryakumar Yadav: ಸೂರ್ಯಕುಮಾರ್ ಅವರ ನಮಸ್ತೆ ಸೆಲೆಬ್ರೇಷನ್ ಹಿಂದಿದೆ ಒಂದು ಕಾರಣ
Suryakumar Yadav
TV9 Web
| Updated By: ಝಾಹಿರ್ ಯೂಸುಫ್|

Updated on: Apr 11, 2022 | 8:21 PM

Share

IPL 2022: ಐಪಿಎಲ್ ಸೀಸನ್​ 15 ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸತತ ಸೋಲು ಕಂಡಿರಬಹುದು. ಆದರೆ ತಂಡದ ಪರ ಬಲಗೈ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಮಾತ್ರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ ಎರಡು ಪಂದ್ಯಗಳಲ್ಲಿ ಎರಡು ಅರ್ಧ ಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಸದ್ಯ ಸೂರ್ಯಕುಮಾರ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕೊನೆಯ ಪಂದ್ಯದಲ್ಲಿ ಅವರು 37 ಎಸೆತಗಳಲ್ಲಿ ಅಜೇಯ 68 ರನ್ ಗಳಿಸಿದ್ದರು. ಈ ಅರ್ಧಶತಕವನ್ನು ಸೂರ್ಯಕುಮಾರ್ ಯಾದವ್ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದ್ದರು.

ಐವತ್ತು ರನ್​ ಪೂರೈಸಿದ ನಂತರ ಪ್ರೇಕ್ಷಕರನ್ನು ನೋಡುತ್ತಲೇ ಬ್ಯಾಟ್‌ ಎತ್ತಿ ಎರಡೂ ಕೈಗಳನ್ನು ಮೇಲಕ್ಕೆ ತೆಗೆದುಕೊಂಡು ‘ ನಮಸ್ತೆ’ ಎಂದಿದ್ದರು. ಸೂರ್ಯಕುಮಾರ್ ಯಾದವ್ ಅವರ ಈ ವಿಶೇಷ ಸೆಲೆಬ್ರೇಷನ್​ಗೆ ಕಾರಣವೇನು ಎಂಬುದು ಇದೀಗ ಬಹಿರಂಗವಾಗಿದೆ.

ಮುಂಬೈ ಇಂಡಿಯನ್ಸ್ ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಸೂರ್ಯಕುಮಾರ್ ಅವರ ಫೋಟೋ ಮತ್ತು ಅವರ ಪೋಷಕರ ಫೋಟೋವನ್ನು ಹಂಚಿಕೊಂಡಿದ್ದಾರೆ. ಫ್ರಾಂಚೈಸ್ ಶೀರ್ಷಿಕೆಯಲ್ಲಿ ಬರೆದಿದೆ, ‘ಆಚರಣೆಯ ಹಿಂದಿನ ಕಾರಣ! ಮನೆಯವರ ಮುಂದೆ ಆಡುವುದಕ್ಕಿಂತ ವಿಶೇಷವಾದದ್ದೇನೂ ಇರಲಾರದು. ಸೂರ್ಯಕುಮಾರ್ ಐಪಿಎಲ್ 15ನೇ ಸೀಸನ್‌ನಲ್ಲಿ 164.38 ಸ್ಟ್ರೈಕ್ ರೇಟ್‌ನಲ್ಲಿ 2 ಪಂದ್ಯಗಳಲ್ಲಿ 120 ರನ್ ಗಳಿಸಿದ್ದಾರೆ, ಇದರಲ್ಲಿ ಔಟಾಗದೆ 68 ಅವರ ಅತ್ಯುತ್ತಮ ಸ್ಕೋರ್ ಎಂದು ಬರೆದುಕೊಂಡಿದೆ.

ಅಂದರೆ ತಮ್ಮ ಪೋಷಕರ ಮುಂದೆ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ನಮಸ್ತೆ ಎಂದಿದ್ದರು. ಈ ಮೂಲಕ ತಮ್ಮ ಹಾಫ್ ಸೆಂಚುರಿಯನ್ನು ಪೋಷಕರಿಗೆ ಅರ್ಪಿಸಿದ್ದರು. ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಮಾಡುತ್ತಿದ್ದಾಗ, ಮಗನನ್ನು ಪ್ರೋತ್ಸಾಹಿಸಲು ಅವರ ತಂದೆ ಅಶೋಕ್ ಕುಮಾರ್ ಯಾದವ್ ಮತ್ತು ತಾಯಿ ಸ್ವಪ್ನಾ ಯಾದವ್ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಹಾಜರಿದ್ದರು. ಈ ಬ್ಯಾಟ್ಸ್‌ಮನ್ ತನ್ನ ಪೋಷಕರನ್ನು ನಿರಾಸೆಗೊಳಿಸಲಿಲ್ಲ. ಭರ್ಜರಿ ಅರ್ಧಶತಕ ಬಾರಿಸಿ ಸೂರ್ಯ ಮಿಂಚಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು 7 ವಿಕೆಟ್​ಗಳಿಂದ ಹೀನಾಯವಾಗಿ ಸೋಲನುಭವಿಸಿತು.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?