AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ವಿರಾಟ್ ಕೊಹ್ಲಿಗೆ ಏಕೆ ಕೊಡಲಿಲ್ಲ ಕ್ಯಾಪ್ಟನ್ ಪಟ್ಟ? ವಿವರಿಸಿದ ಆರ್​ಸಿಬಿ

ಭಾರತೀಯ ಆಟಗಾರನಿಗೆ ನಾಯಕತ್ವ ಕೊಡಬೇಕು ಎಂಬುದು ಆರ್ಸಿಬಿ ಆಲೋಚನೆ ಆಗಿತ್ತು. ವಿರಾಟ್ ಅವರು ಕೂಡ ಲಿಸ್ಟ್ನಲ್ಲಿ ಇದ್ದರು. ಇತ್ತೀಚೆಗೆ ವಿರಾಟ್, ಆರ್ಸಿಬಿ ವ್ಯವಹಾರಗಳ ನಿರ್ದೇಶಕ ಮೊ ಬೊಬಾಟ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಒಟ್ಟಾಗಿ ಸಭೆ ನಡೆಸಿದ್ದರು. ಈ ವೇಳೆ ರಜತ್ ಅವರ ಹೆಸರು ಫೈನಲ್ ಆಗಿದೆ.

RCB: ವಿರಾಟ್ ಕೊಹ್ಲಿಗೆ ಏಕೆ ಕೊಡಲಿಲ್ಲ ಕ್ಯಾಪ್ಟನ್ ಪಟ್ಟ? ವಿವರಿಸಿದ ಆರ್​ಸಿಬಿ
ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Feb 14, 2025 | 1:08 PM

Share

2025ರ ಐಪಿಎಲ್​ನಲ್ಲಿ ಆರ್​​ಸಿಬಿ ತಂಡವನ್ನು ಯಾರು ಮುನ್ನಡೆಸುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ರಾಯಲ್ ಚಾಲೆಂಜರ್ಸ್ ತಂಡಕ್ಕೆ ರಜತ್​ ಪಾಟಿದಾರ್ ಅವರು ಕ್ಯಾಪ್ಟನ್ ಆಗಿದ್ದಾರೆ. ಬಹುತೇಕರು ವಿರಾಟ್ ಕೊಹ್ಲಿ ನಾಯಕನಾಗಬಹುದು ಎಂದು ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ವಿರಾಟ್​ಗೆ ನಾಯಕತ್ವ ಏಕೆ ನೀಡಿಲ್ಲ ಎಂಬ ಬಗ್ಗೆ ಆರ್​ಸಿಬಿ ಸ್ಪಷ್ಟನೆ ಕೊಟ್ಟಿದೆ.

ಭಾರತೀಯ ಆಟಗಾರನಿಗೆ ನಾಯಕತ್ವ ಕೊಡಬೇಕು ಎಂಬುದು ಆರ್​ಸಿಬಿ ಆಲೋಚನೆ ಆಗಿತ್ತು. ವಿರಾಟ್ ಅವರು ಕೂಡ ಲಿಸ್ಟ್​​ನಲ್ಲಿ ಇದ್ದರು. ಇತ್ತೀಚೆಗೆ ವಿರಾಟ್, ಆರ್​ಸಿಬಿ ವ್ಯವಹಾರಗಳ ನಿರ್ದೇಶಕ ಮೊ ಬೊಬಾಟ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಒಟ್ಟಾಗಿ ಸಭೆ ನಡೆಸಿದ್ದರು. ಈ ವೇಳೆ ರಜತ್ ಅವರ ಹೆಸರು ಫೈನಲ್ ಆಗಿದೆ.

‘ಭಾರತದ ಆಟಗಾರರನ್ನು ನಾಯಕನನ್ನಾಗಿ ಮಾಡಬೇಕು ಎಂಬುದು ನಮ್ಮ ಆಲೋಚನೆ ಆಗಿತ್ತು. ಇದು ಭಾರತೀಯ ಲೀಗ್ ಆಗಿರುವುದರಿಂದ, ಸ್ಥಳೀಯ ವಿಚಾರಗಳ ಬಗ್ಗೆ ಹೆಚ್ಚು ಮಾಹಿತಿ ಇರುವ ಭಾರತೀಯ ಆಟಗಾರನಿಗೆ ನಾವು ಮೊದಲ ಆದ್ಯತೆ ನೀಡುವ ಉದ್ದೇಶ ಹೊಂದಿದ್ದೆವು’ ಎಂದು ಬೊಬಾಟ್ ಹೇಳಿದ್ದಾರೆ.

‘ವಿರಾಟ್ ಅವರ ಹೆಸರೂ ಲಿಸ್ಟ್​ನಲ್ಲಿ ಇತ್ತು. ವಿರಾಟ್ ಅವರಿಗೆ ತಂಡವನ್ನು ಮುನ್ನಡೆಸಲು ನಾಯಕತ್ವವೇ ಬೇಕಾಗಿಲ್ಲ. ಕಳೆದ ಬಾರಿ ಫಾಪ್ ಡುಪ್ಲೆಸಿಸ್ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಕೊಹ್ಲಿ ಹಿಂದಿನಿಂದ ತಂಡವನ್ನು ಮುನ್ನಡೆಸುತ್ತಿದ್ದರು. ರಜತ್ ಅವರ ಸ್ಟ್ರೈಕ್ ರೇಟ್ ಚೆನ್ನಾಗಿದೆ. ಅವರು ಹಿಂದಿನ ಸೀಸನ್​ನಲ್ಲಿ ಉತ್ತಮವಾಗಿ ಆಡಿದ್ದಾರೆ’ ಎಂದು ಬೊಬಾಟ್ ಹೇಳಿದ್ದಾರೆ.

ಕ್ಯಾಪ್ಟನ್ ಹೌದೋ ಅಥವಾ ಅಲ್ಲವೋ ಕೊಹ್ಲಿ ಯಾವಾಗಲೂ ತಂಡದ ನಾಯಕನಾಗಿರುತ್ತಾರೆ. ಈಗಾಗಲೇ ಅವರು ಪಾಟಿದಾರ್​ಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ಫಾಪ್ ಕ್ಯಾಪ್ಟನ್ ಆಗುವುದಕ್ಕೂ ಮೊದಲು ಕೊಹ್ಲಿ ಅವರೇ ಸ್ವತಃ ನಾಯಕತ್ವದಿಂದ ಹಿಂದೆ ಸರಿದಿದ್ದರು. ಆ ಬಳಿಕ ಫಾಪ್​ ಅವರು ನಾಯಕತ್ವ ಪಡೆದುಕೊಂಡಿದ್ದರು.

ಇದನ್ನೂ ಓದಿ: ಕೊಹ್ಲಿಯಿಂದ ವಿಶೇಷ ವಸ್ತು ಪಡೆದು ಮಗನಿಗೆ ಗಿಫ್ಟ್ ಕೊಟ್ಟ ಸ್ಟಾರ್ ಆಟಗಾರ

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಆರ್​ಸಿಬಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​​ನಲ್ಲಿ ಮಹಾಭಾರತದ ಹೋಲಿಕೆ ಮಾಡಲಾಗಿದೆ. ಕೊಹ್ಲಿ ಅವರು ಕೃಷ್ಣನಂತೆ ಮುಂದಿದ್ದರೆ, ರಜತ್ ಅವರು ಅರ್ಜುನ್ ರೀತಿ ಹಿಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:07 pm, Fri, 14 February 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್