AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB: ವಿರಾಟ್ ಕೊಹ್ಲಿಗೆ ಏಕೆ ಕೊಡಲಿಲ್ಲ ಕ್ಯಾಪ್ಟನ್ ಪಟ್ಟ? ವಿವರಿಸಿದ ಆರ್​ಸಿಬಿ

ಭಾರತೀಯ ಆಟಗಾರನಿಗೆ ನಾಯಕತ್ವ ಕೊಡಬೇಕು ಎಂಬುದು ಆರ್ಸಿಬಿ ಆಲೋಚನೆ ಆಗಿತ್ತು. ವಿರಾಟ್ ಅವರು ಕೂಡ ಲಿಸ್ಟ್ನಲ್ಲಿ ಇದ್ದರು. ಇತ್ತೀಚೆಗೆ ವಿರಾಟ್, ಆರ್ಸಿಬಿ ವ್ಯವಹಾರಗಳ ನಿರ್ದೇಶಕ ಮೊ ಬೊಬಾಟ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಒಟ್ಟಾಗಿ ಸಭೆ ನಡೆಸಿದ್ದರು. ಈ ವೇಳೆ ರಜತ್ ಅವರ ಹೆಸರು ಫೈನಲ್ ಆಗಿದೆ.

RCB: ವಿರಾಟ್ ಕೊಹ್ಲಿಗೆ ಏಕೆ ಕೊಡಲಿಲ್ಲ ಕ್ಯಾಪ್ಟನ್ ಪಟ್ಟ? ವಿವರಿಸಿದ ಆರ್​ಸಿಬಿ
ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Feb 14, 2025 | 1:08 PM

Share

2025ರ ಐಪಿಎಲ್​ನಲ್ಲಿ ಆರ್​​ಸಿಬಿ ತಂಡವನ್ನು ಯಾರು ಮುನ್ನಡೆಸುತ್ತಾರೆ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ರಾಯಲ್ ಚಾಲೆಂಜರ್ಸ್ ತಂಡಕ್ಕೆ ರಜತ್​ ಪಾಟಿದಾರ್ ಅವರು ಕ್ಯಾಪ್ಟನ್ ಆಗಿದ್ದಾರೆ. ಬಹುತೇಕರು ವಿರಾಟ್ ಕೊಹ್ಲಿ ನಾಯಕನಾಗಬಹುದು ಎಂದು ಊಹಿಸಿದ್ದರು. ಆದರೆ, ಅದು ಸುಳ್ಳಾಗಿದೆ. ವಿರಾಟ್​ಗೆ ನಾಯಕತ್ವ ಏಕೆ ನೀಡಿಲ್ಲ ಎಂಬ ಬಗ್ಗೆ ಆರ್​ಸಿಬಿ ಸ್ಪಷ್ಟನೆ ಕೊಟ್ಟಿದೆ.

ಭಾರತೀಯ ಆಟಗಾರನಿಗೆ ನಾಯಕತ್ವ ಕೊಡಬೇಕು ಎಂಬುದು ಆರ್​ಸಿಬಿ ಆಲೋಚನೆ ಆಗಿತ್ತು. ವಿರಾಟ್ ಅವರು ಕೂಡ ಲಿಸ್ಟ್​​ನಲ್ಲಿ ಇದ್ದರು. ಇತ್ತೀಚೆಗೆ ವಿರಾಟ್, ಆರ್​ಸಿಬಿ ವ್ಯವಹಾರಗಳ ನಿರ್ದೇಶಕ ಮೊ ಬೊಬಾಟ್ ಹಾಗೂ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಒಟ್ಟಾಗಿ ಸಭೆ ನಡೆಸಿದ್ದರು. ಈ ವೇಳೆ ರಜತ್ ಅವರ ಹೆಸರು ಫೈನಲ್ ಆಗಿದೆ.

‘ಭಾರತದ ಆಟಗಾರರನ್ನು ನಾಯಕನನ್ನಾಗಿ ಮಾಡಬೇಕು ಎಂಬುದು ನಮ್ಮ ಆಲೋಚನೆ ಆಗಿತ್ತು. ಇದು ಭಾರತೀಯ ಲೀಗ್ ಆಗಿರುವುದರಿಂದ, ಸ್ಥಳೀಯ ವಿಚಾರಗಳ ಬಗ್ಗೆ ಹೆಚ್ಚು ಮಾಹಿತಿ ಇರುವ ಭಾರತೀಯ ಆಟಗಾರನಿಗೆ ನಾವು ಮೊದಲ ಆದ್ಯತೆ ನೀಡುವ ಉದ್ದೇಶ ಹೊಂದಿದ್ದೆವು’ ಎಂದು ಬೊಬಾಟ್ ಹೇಳಿದ್ದಾರೆ.

‘ವಿರಾಟ್ ಅವರ ಹೆಸರೂ ಲಿಸ್ಟ್​ನಲ್ಲಿ ಇತ್ತು. ವಿರಾಟ್ ಅವರಿಗೆ ತಂಡವನ್ನು ಮುನ್ನಡೆಸಲು ನಾಯಕತ್ವವೇ ಬೇಕಾಗಿಲ್ಲ. ಕಳೆದ ಬಾರಿ ಫಾಪ್ ಡುಪ್ಲೆಸಿಸ್ ಕ್ಯಾಪ್ಟನ್ ಆಗಿದ್ದರು. ಈ ವೇಳೆ ಕೊಹ್ಲಿ ಹಿಂದಿನಿಂದ ತಂಡವನ್ನು ಮುನ್ನಡೆಸುತ್ತಿದ್ದರು. ರಜತ್ ಅವರ ಸ್ಟ್ರೈಕ್ ರೇಟ್ ಚೆನ್ನಾಗಿದೆ. ಅವರು ಹಿಂದಿನ ಸೀಸನ್​ನಲ್ಲಿ ಉತ್ತಮವಾಗಿ ಆಡಿದ್ದಾರೆ’ ಎಂದು ಬೊಬಾಟ್ ಹೇಳಿದ್ದಾರೆ.

ಕ್ಯಾಪ್ಟನ್ ಹೌದೋ ಅಥವಾ ಅಲ್ಲವೋ ಕೊಹ್ಲಿ ಯಾವಾಗಲೂ ತಂಡದ ನಾಯಕನಾಗಿರುತ್ತಾರೆ. ಈಗಾಗಲೇ ಅವರು ಪಾಟಿದಾರ್​ಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ಫಾಪ್ ಕ್ಯಾಪ್ಟನ್ ಆಗುವುದಕ್ಕೂ ಮೊದಲು ಕೊಹ್ಲಿ ಅವರೇ ಸ್ವತಃ ನಾಯಕತ್ವದಿಂದ ಹಿಂದೆ ಸರಿದಿದ್ದರು. ಆ ಬಳಿಕ ಫಾಪ್​ ಅವರು ನಾಯಕತ್ವ ಪಡೆದುಕೊಂಡಿದ್ದರು.

ಇದನ್ನೂ ಓದಿ: ಕೊಹ್ಲಿಯಿಂದ ವಿಶೇಷ ವಸ್ತು ಪಡೆದು ಮಗನಿಗೆ ಗಿಫ್ಟ್ ಕೊಟ್ಟ ಸ್ಟಾರ್ ಆಟಗಾರ

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಆರ್​ಸಿಬಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಪೋಸ್ಟ್​​ನಲ್ಲಿ ಮಹಾಭಾರತದ ಹೋಲಿಕೆ ಮಾಡಲಾಗಿದೆ. ಕೊಹ್ಲಿ ಅವರು ಕೃಷ್ಣನಂತೆ ಮುಂದಿದ್ದರೆ, ರಜತ್ ಅವರು ಅರ್ಜುನ್ ರೀತಿ ಹಿಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:07 pm, Fri, 14 February 25

Follow Us
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ