ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಹಾರ್ದಿಕ್ ಪಡೆಯ ಮಾಸ್ಟರ್ ಪ್ಲಾನ್ ಏನು?

India vs West Indies 3rd T20I: ವೆಸ್ಟ್ ಇಂಡೀಸ್ ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಹಾರ್ದಿಕ್ ಪಡೆ ಮಾನ ಉಳಿಸಿಕೊಳ್ಳಬೇಕಾದರೆ ಉಳಿದಿರುವ ಮೂರು ಪಂದ್ಯವನ್ನು ಗೆಲ್ಲಲೇ ಬೇಕಿದೆ. ಅತ್ತ ಕೆರಿಬಿಯನ್ ಪಡೆ ಇತಿಹಾಸ ಸೃಷ್ಟಿಸಲು ಕೇವಲ ಒಂದು ಪಂದ್ಯ ಗೆದ್ದರೆ ಸಾಕು.

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ: ಹಾರ್ದಿಕ್ ಪಡೆಯ ಮಾಸ್ಟರ್ ಪ್ಲಾನ್ ಏನು?
WI vs IND 3rd T20I
Follow us
|

Updated on: Aug 08, 2023 | 7:05 AM

ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ದ್ವಿತೀಯ ಪಂದ್ಯ ನಡೆದಿದ್ದ ಗಯಾನದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲೇ ಈ ಪಂದ್ಯ ಕೂಡ ನಡೆಯಲಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ (Team India) ಸರಣಿ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಇಂದಿನದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆದುಕೊಂಡಿದೆ. ಹಾರ್ದಿಕ್ (Hardik Pandya) ಪಡೆ ಮಾನ ಉಳಿಸಿಕೊಳ್ಳಬೇಕಾದರೆ ಉಳಿದಿರುವ ಮೂರು ಪಂದ್ಯವನ್ನು ಗೆಲ್ಲಲೇ ಬೇಕಿದೆ. ಅತ್ತ ಕೆರಿಬಿಯನ್ ಪಡೆ ಇತಿಹಾಸ ಸೃಷ್ಟಿಸಲು ಕೇವಲ ಒಂದು ಪಂದ್ಯ ಗೆದ್ದರೆ ಸಾಕು.

ಭಾರತದಲ್ಲಿ ಬದಲಾವಣೆ ಖಚಿತ:

ಇಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಬದಲಾವಣೆ ಖಚಿತ ಎಂದೇ ಹೇಳಬಹುದು. ಯಾಕೆಂದರೆ ಹಿಂದಿನ ಎರಡೂ ಪಂದ್ಯದಲ್ಲಿ ಭಾರತ ಉತ್ತಮ ಆರಂಭ ಪಡೆದುಕೊಳ್ಳಲಿಲ್ಲ. ಪವರ್ ಪ್ಲೇನಲ್ಲಿ ಭಾರತದ ಬ್ಯಾಟರ್​ಗಳಿಂದ ಪವರ್ ಇರಲೇ ಇಲ್ಲ. ಹೀಗಾಗಿ ಸತತ ವೈಫಲ್ಯ ಅನುಭವಿಸುತ್ತಿರುವ ಶುಭ್​ಮನ್ ಗಿಲ್ ಅವರನ್ನು ಕೈಬಿಟ್ಟು ಯಶಸ್ವಿ ಜೈಸ್ವಾಲ್​ಗೆ ಅವಕಾಶ ಸಿಗುವ ಸಂಭವವಿದೆ. ಬ್ಯಾಟಿಂಗ್​ನಲ್ಲಿ ಹೆಚ್ಚಿನ ಆಯ್ಕೆ ಇಲ್ಲದ ಕಾರಣ ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ ಎಡವುತ್ತಿದ್ದರೂ ಆಡಿಸಲೇ ಬೇಕಿದೆ.

Babar Azam: ಸಿಡಿಲಬ್ಬರದ ಶತಕ ಸಿಡಿಸಿದ ಬಾಬರ್ ಆಝಂ

ಇದನ್ನೂ ಓದಿ
Image
IND vs WI: ಭಾರತ ತಂಡದಲ್ಲಿ ಒಂದು ಬದಲಾವಣೆ ಸಾಧ್ಯತೆ: ಹೀಗಿರಲಿದೆ ಪ್ಲೇಯಿಂಗ್ 11
Image
Babar Azam: ಭರ್ಜರಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಬಾಬರ್
Image
ಪೂರನ್ ಪವರ್​ಗೆ ಹಳೆಯ ದಾಖಲೆ ಉಡೀಸ್​: ಟೀಮ್ ಇಂಡಿಯಾ ವಿರುದ್ದ ಹೊಸ ರೆಕಾರ್ಡ್
Image
ಆರಂಭಿಕರ ವೈಫಲ್ಯ: ಪವರ್​ಪ್ಲೇನಲ್ಲೇ ಪವರ್​ ಕಳೆದುಕೊಂಡ ಟೀಮ್ ಇಂಡಿಯಾ

ಹಾರ್ದಿಕ್ ಪಾಂಡ್ಯ ಕಡೆಯಿಂದ ನಾಯಕನ ಆಟ ಬರುತ್ತಿಲ್ಲ. ಕೇವಲ ಎರಡೇ ಎರಡು ಅಂತರರಾಷ್ಟ್ರೀಯ ಪಂದ್ಯವನ್ನಾಡಿರುವ ತಿಲಕ್ ವರ್ಮಾ ಮಾತ್ರ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಅಕ್ಷರ್ ಪಟೇಲ್ ಆಲ್ರೌಂಡ್ ಆಟ ಕೂಡ ಸದ್ದು ಮಾಡುತ್ತಿಲ್ಲ. ಬೌಲರ್​ಗಳು ಜಯಕ್ಕಾಗಿ ಕೆಚ್ಚೆದೆಯ ಹೋರಾಟ ನಡೆಸಬೇಕಿದೆ. ಯುಜ್ವೇಂದ್ರ ಚಹಲ್ ಸ್ಪಿನ್ ಜಾದು ಕೆಲಸ ಮಾಡಬೇಕಿದೆ. ಅರ್ಶ್​ದೀಪ್ ಸಿಂಗ್, ಮುಖೇಶ್ ಕುಮಾರ್ ಮತ್ತು ಉಮ್ರಾನ್ ಮಲಿಕ್ ಇನ್ನಷ್ಟು ಮಾರಕವಾಗಬೇಕಿದೆ.

ಬಲಿಷ್ಠವಾಗಿದೆ ಕೆರಿಬಿಯನ್ ಪಡೆ:

ಟೆಸ್ಟ್ ಹಾಗೂ ಏಕದಿನ ಸರಣಿ ಕಳೆದುಕೊಂಡಿದ್ದ ವೆಸ್ಟ್ ಇಂಡೀಸ್ ತಂಡ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದಂತಿದೆ. ನಾಯಕ ರೋವ್ಮನ್ ಪೊವೆಲ್, ಬ್ರಾಂಡನ್ ಕಿಂಗ್ ಮತ್ತು ಅನುಭವಿ ನಿಕೋಲಸ್ ಪೂರನ್ ಭರ್ಜರಿ ಫಾರ್ಮ್​ನಲ್ಲಿದ್ದು, ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಮ್ಯಾಚ್ ವಿನ್ನಿಂಗ್ ಪ್ರದರ್ಶನ ತೋರುತ್ತಿರುವ ಪೂರನ್ ಕಟ್ಟಿಹಾಕಲು ಟೀಮ್ ಇಂಡಿಯಾ ಪ್ಲಾನ್ ರೂಪಿಸಬೇಕಿದೆ. ಇವರೊಂದಿಗೆ ಖೈಲ್ ಮೇಯರ್ಸ್, ಚಾರ್ಲೆಸ್ ಮತ್ತು ಹೆಟ್ಮೇರ್ ಅಬ್ಬರಿಸಿದರೆ ವಿಂಡೀಸ್ ದೊಡ್ಡ ಮೊತ್ತ ಕಲೆಹಾಕುವುದು ಖಚಿತ. ಬೌಲಿಂಗ್​ನಲ್ಲಿ ಒಬೆಡ್ ಮೆಕಾಯ್, ರೊಮಾರಿಯೋ ಶೆಫೆರನ್ ಮತ್ತು ಜೇಸನ್ ಹೋಲ್ಡರ್ ಮಾರಕವಾಗಿದ್ದಾರೆ. ಕೆರಿಬಿಯನ್ ಪಡೆಯಲ್ಲಿ ಇಂದಿನ ಪಂದ್ಯಕ್ಕೆ ಬದಲಾವಣೆ ಅನುಮಾನ.

ಭಾರತ-ವೆಸ್ಟ್ ಇಂಡೀಸ್ ನಡುವಣ ತೃತೀಯ ಟಿ20 ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8 ಗಂಟೆಗೆ ಶುರುವಾಗಲಿದೆ. ದೂರದರ್ಶನ ಸ್ಪೋರ್ಟ್ಸ್ (ಡಿಡಿ ಸ್ಪೋರ್ಟ್ಸ್) ಚಾನೆಲ್‌ನಲ್ಲಿ ನೇರ ಪ್ರಸಾರವಾಗಲಿದೆ. ಜೊತೆಗೆ ಲೈವ್ ಸ್ಟ್ರೀಮಿಂಗ್ ಫ್ಯಾನ್ ಮತ್ತು ಜಿಯೋ ಸಿನಿಮಾದಲ್ಲಿ ಲಭ್ಯವಿರುತ್ತದೆ.

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್, ರವಿ ಬಿಷ್ಣೋಯ್.

ವೆಸ್ಟ್ ಇಂಡೀಸ್ ಟಿ20 ತಂಡ: ರೋವ್ಮನ್ ಪೊವೆಲ್ (ನಾಯಕ), ಕೈಲ್ ಮೇಯರ್ಸ್ (ಉಪ ನಾಯಕ), ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ನಿಕೋಲಸ್ ಪೂರನ್, ಶಿಮ್ರೋನ್ ಹೆಟ್ಮೆರ್, ಶಾಯ್ ಹೋಪ್, ಬ್ರಾಂಡನ್ ಕಿಂಗ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫೆರನ್ ಓಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ಅಕೆಲ್ ಹೊಸೈನ್, ಒಬೆಡ್ ಮೆಕಾಯ್, ಒಶಾನೆ ಥೋಮಸ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ