WI vs IND: ಭಾರತ-ವಿಂಡೀಸ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ

WI vs IND Match Timing: ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದ ಧವನ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಇದಾದ ಬಳಿಕ ಭಾರತ ತಂಡವು 5 ಪಂದ್ಯಗಳ ಟಿ20 ಸರಣಿಯನ್ನು ಕೂಡ ಆಡಲಿದ್ದು, ಈ ಸರಣಿ ವೇಳೆಗೆ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ.

WI vs IND: ಭಾರತ-ವಿಂಡೀಸ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರಪ್ರಸಾರ? ಇಲ್ಲಿದೆ ಸಂಪೂರ್ಣ ಮಾಹಿತಿ
WI vs IND
Follow us
| Updated By: ಝಾಹಿರ್ ಯೂಸುಫ್

Updated on:Jul 21, 2022 | 10:26 PM

ಭಾರತ ಮತ್ತು ವೆಸ್ಟ್ ಇಂಡೀಸ್ (WI vs IND) ನಡುವಣ ಏಕದಿನ ಸರಣಿ ನಾಳೆಯಿಂದ (ಜುಲೈ 22) ಶುರುವಾಗಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ (Team India) 3 ಪಂದ್ಯಗಳನ್ನು ಆಡಲಿದೆ. ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್​ ಓವಲ್​ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯವು ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಏಕೆಂದರೆ ಈ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಹಿರಿಯ ಆಟಗಾರರು ಹೊರಗುಳಿದಿದ್ದಾರೆ. ಹೀಗಾಗಿ ತಂಡದ ನಾಯಕರಾಗಿ ಶಿಖರ್ ಧವನ್ ಆಯ್ಕೆಯಾಗಿದ್ದಾರೆ.

ಅಂದರೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದ ಧವನ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ. ಇದಾದ ಬಳಿಕ ಭಾರತ ತಂಡವು 5 ಪಂದ್ಯಗಳ ಟಿ20 ಸರಣಿಯನ್ನು ಕೂಡ ಆಡಲಿದ್ದು, ಈ ಸರಣಿ ವೇಳೆಗೆ ರೋಹಿತ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ತಂಡವನ್ನು ಕೂಡಿಕೊಳ್ಳಲಿದ್ದಾರೆ. ಹೀಗಾಗಿ ಟಿ20 ಸರಣಿಯಲ್ಲಿ ತಂಡವನ್ನು ಹಿಟ್​​ಮ್ಯಾನ್ ಮುನ್ನಡೆಸಲಿದ್ದಾರೆ. ಇದಾಗ್ಯೂ ಈ 2 ಸರಣಿಗಳಿಂದ ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾ ಸಂಪೂರ್ಣ ವಿಶ್ರಾಂತಿ ಪಡೆದಿದ್ದಾರೆ.

ಈ ಪಂದ್ಯದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ:-

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಭಾರತ vs ವೆಸ್ಟ್ ಇಂಡೀಸ್ ಮೊದಲ ಪಂದ್ಯ ಯಾವಾಗ? ದಿನಾಂಕ ಮತ್ತು ಸಮಯ: ಶುಕ್ರವಾರ, ಜುಲೈ 22, 2022

ಪಂದ್ಯ ಶುರುವಾಗುವುದು ಎಷ್ಟು ಗಂಟೆಗೆ? ಭಾರತೀಯ ಕಾಲಮಾನ ಸಂಜೆ 7 ಗಂಟೆಯಿಂದ ಪಂದ್ಯ ಶುರುವಾಗಲಿದೆ.

ಯಾವ ಚಾನೆಲ್​ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು? ಈ ಪಂದ್ಯಗಳ ನೇರಪ್ರಸಾರ ಡಿಡಿ ನ್ಯಾಷನಲ್ ಚಾನೆಲ್​ನಲ್ಲಿ ಇರಲಿದೆ. ಹಾಗೆಯೇ ಸ್ಪೋರ್ಟ್ಸ್ ಮ್ಯಾಕ್ಸ್​ (SportsMax) ಚಾನೆಲ್​ನಲ್ಲೂ ಲೈವ್ ಇರಲಿದೆ.

ಯಾವ ಆ್ಯಪ್​ನಲ್ಲಿ ಲೈವ್​ ಸ್ಟೀಮಿಂಗ್ ಇರಲಿದೆ? ಫ್ಯಾನ್‌ಕೋಡ್ ಆ್ಯಪ್​ ಮತ್ತು ವೆಬ್​ಸೈಟ್ ಮೂಲಕ ಈ ಪಂದ್ಯಗಳ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು.

ಉಭಯ ತಂಡಗಳಲ್ಲಿ ಯಾರೆಲ್ಲಾ ಇದ್ದಾರೆ?

ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.

ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.

ಭಾರತ ಏಕದಿನ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಈ ಸರಣಿಯ ಸಂಪೂರ್ಣ ವೇಳಾಪಟ್ಟಿ?

ಏಕದಿನ ಸರಣಿಯ ವೇಳಾಪಟ್ಟಿ

  • ಜುಲೈ 22- ಮೊದಲ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 24- 2ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)
  • ಜುಲೈ 27- 3ನೇ ಏಕದಿನ ಪಂದ್ಯ (ಕ್ವೀನ್ಸ್ ಪಾರ್ಕ್​ ಓವಲ್)

ಟಿ20 ಸರಣಿ ವೇಳಾಪಟ್ಟಿ:

  • ಜುಲೈ 29 – ಮೊದಲ ಟಿ20 ಪಂದ್ಯ (ಲಾರಾ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 1​- 2ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್ ಸ್ಟೇಡಿಯಂ)
  • ಆಗಸ್ಟ್​ 2- 3ನೇ ಟಿ20 ಪಂದ್ಯ (ವಾರ್ನರ್ ಪಾರ್ಕ್)
  • ಆಗಸ್ಟ್​ 6- 4ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)
  • ಆಗಸ್ಟ್ 7- 5ನೇ ಟಿ20 ಪಂದ್ಯ (ಕೌಂಟಿ ಕ್ರಿಕೆಟ್ ಸ್ಟೇಡಿಯಂ)

Published On - 1:10 pm, Thu, 21 July 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?