AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪರ ಮತ್ತೆ ಆಡ್ತಾರಾ ABD? ಕೊನೆಗೂ ಮೌನ ಮುರಿದ ಡಿವಿಲಿಯರ್ಸ್

AB de Villiers: ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು.

IPL 2023: RCB ಪರ ಮತ್ತೆ ಆಡ್ತಾರಾ ABD? ಕೊನೆಗೂ ಮೌನ ಮುರಿದ ಡಿವಿಲಿಯರ್ಸ್
Ab de Villiers
TV9 Web
| Edited By: |

Updated on: Oct 05, 2022 | 3:55 PM

Share

ಕ್ರಿಕೆಟ್ ಅಂಗಳದ ಸಿಡಿಲಮರಿ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಅಲಿಯಾಸ್ ಎಬಿಡಿ (AB de Villiers) ಐಪಿಎಲ್​ಗೆ ಕಂಬ್ಯಾಕ್ ಮಾಡ್ತಾರಾ? ಇಂತಹದೊಂದು ಪ್ರಶ್ನೆ ಕಳೆದ ಒಂದು ವರ್ಷದಿಂದ ಕೇಳಿ ಬರುತ್ತಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಕಿಚ್ಚು ಹಚ್ಚುವಂತೆ ಎಬಿಡಿ ಕೂಡ ಐಪಿಎಲ್ 2023 ರ (IPL 2023) ವೇಳೆ ನಾನು ಬೆಂಗಳೂರಿಗೆ ಬರಲಿದ್ದೇನೆ ಎಂದು ತಿಳಿಸಿದ್ದರು. ಹೀಗಾಗಿಯೇ ಈ ಕುತೂಹಲ ಇಮ್ಮಡಿಯಾಗಿತ್ತು. ಆದರೀಗ ಈ ಎಲ್ಲಾ ಕುತೂಹಲಕ್ಕೂ ಖುದ್ದು ಎಬಿಡಿಯೇ ತೆರೆ ಎಳೆದಿದ್ದಾರೆ. ಐಪಿಎಲ್ 2023 ರಲ್ಲಿ ಆಡಲಿದ್ದಾರಾ? ಎಂಬ ಪ್ರಶ್ನೆಗೂ ಉತ್ತರಿಸಿದ್ದಾರೆ.

2021 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಎಬಿಡಿ ಐಪಿಎಲ್ 2023 ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

ನಾನು ಆರ್​ಸಿಬಿ ಪರ ಒಂದು ದಶಕಗಳ ಕಾಲ ಆಡಿದ್ದೇನೆ. ಆದರೆ ಆ ವೇಳೆ ಐಪಿಎಲ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದಾಗ್ಯೂ ನನ್ನನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ಮುಂದಿನ ಐಪಿಎಲ್​ ವೇಳೆ ನಾನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಲಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?

ಇದೇ ವೇಳೆ ಯಾವುದೇ ಮಾದರಿಯ ಕ್ರಿಕೆಟ್​ಗೆ ಕಂಬ್ಯಾಕ್ ಮಾಡುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಎಬಿಡಿ ಕಣ್ಣಿನ ಸರ್ಜರಿ ಮಾಡಿಸಿಕೊಂಡಿರುವುದು. ಬಲಗಣ್ಣಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಕಾರಣ ಇನ್ಮುಂದೆ ಆಡಲು ಸಾಧ್ಯವಾಗುವುದಿಲ್ಲ. ಈಗಾಗಲೇ ನನಗೆ ಲೆಜೆಂಡ್ಸ್ ಲೀಗ್​ನಿಂದ ಆಫರ್ ಬಂದಿತ್ತು. ಆದರೆ ಕಣ್ಣಿನ ಆಪರೇಷನ್ ನಡೆದಿದ್ದರಿಂದ ನಾನು ಆಹ್ವಾನವನ್ನು ತಿರಸ್ಕರಿಸಿದ್ದೆ ಎಂದು ಎಬಿಡಿ ತಿಳಿಸಿದ್ದಾರೆ.

ನಾನು ಒಂದೇ ಕಣ್ಣಿನಲ್ಲಿ ಆಡಬಹುದೆಂದು ನಿಮಗೆ ಅನಿಸಬಹುದು. ಆದರೆ ನಾನು ಅಂತಹ ಸಾಹಸಕ್ಕೆ ಮುಂದಾಗುವುದಿಲ್ಲ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ. ಈ ಮೂಲಕ ಕ್ರಿಕೆಟ್ ಅಂಗಳಕ್ಕೆ ಮತ್ತೆ ಕಂಬ್ಯಾಕ್ ಮಾಡುವ ಎಲ್ಲಾ ವದಂತಿಗಳನ್ನು ಖುದ್ದು ಎಬಿಡಿ ತಳ್ಳಿಹಾಕಿದ್ದಾರೆ. ಇದರೊಂದಿಗೆ ಆರ್​ಸಿಬಿಗೆ ಎಬಿಡಿ ಕಂಬ್ಯಾಕ್ ಮಾಡಲಿದ್ದಾರೆ ಎನ್ನುವ ನಿರೀಕ್ಷೆ ಕೂಡ ಕಮರಿದೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಪರ 11 ವರ್ಷಗಳ ಕಾಲ ಆಡಿದ್ದ ಎಬಿಡಿ ಹಲವು ಬಾರಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು. ಅಲ್ಲದೆ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಒಟ್ಟು 184 ಪಂದ್ಯಗಳಿಂದ ಒಟ್ಟು 5162 ರನ್‌ ಕಲೆಹಾಕಿದ್ದರು. ಈ ವೇಳೆ 3 ಭರ್ಜರಿ ಶತಕಗಳು, 40 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಆರ್​ಸಿಬಿ ಪರ ಅತೀ ಹೆಚ್ಚು ಪಂದ್ಯವಾಡಿದ ಹಾಗೂ ಅತೀ ಹೆಚ್ಚು ಕಾಲ ಆಡಿದ ವಿದೇಶಿ ಆಟಗಾರ ಎಂಬ ದಾಖಲೆ ಕೂಡ ಎಬಿಡಿ ಹೆಸರಿನಲ್ಲಿದೆ.

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ