AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿಗೆ ಬಂತು ಆನೆ ಬಲ; 8 ಸಿಕ್ಸರ್, 7 ಬೌಂಡರಿ ಸಹಿತ 92 ರನ್ ಚಚ್ಚಿದ ವಿಲ್ ಜ್ಯಾಕ್ಸ್..!

ತಮ್ಮ ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಅವರು 8 ಸಿಕ್ಸರ್ ಮತ್ತು 7 ಬೌಂಡರಿಗಳನ್ನು ಬಾರಿಸಿದರು. ಈ ಇನ್ನಿಂಗ್ಸ್‌ನ ಪರಿಣಾಮವಾಗಿ ಪ್ರಿಟೋರಿಯಾ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 216 ರನ್ ಗಳಿಸಿತು.

ಆರ್​ಸಿಬಿಗೆ ಬಂತು ಆನೆ ಬಲ; 8 ಸಿಕ್ಸರ್, 7 ಬೌಂಡರಿ ಸಹಿತ 92 ರನ್ ಚಚ್ಚಿದ ವಿಲ್ ಜ್ಯಾಕ್ಸ್..!
ವಿಲ್ ಜ್ಯಾಕ್ಸ್
TV9 Web
| Edited By: |

Updated on:Jan 15, 2023 | 10:55 AM

Share

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಟಿ20 ಲೀಗ್​ನ (South Africa T20) ಚೊಚ್ಚಲ ಆವೃತ್ತಿ ದಿನದಿಂದ ದಿನಕ್ಕೆ ಅಚ್ಚರಿಯ ಫಲಿತಾಂಶಗಳನ್ನು ಕಾಣುವುದರೊಂದಿಗೆ ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡುತ್ತಿದೆ. ಅದರಲ್ಲೂ ಇಡೀ ಟೂರ್ನಿಯಲ್ಲಿ ಯುವ ಪ್ರತಿಭೆಗಳು ತಮ್ಮ ಪರಾಕ್ರಮ ತೋರುತ್ತಿರುವುದು ಇಲ್ಲಿ ಮತ್ತೊಂದು ವಿಶೇಷವಾಗಿದೆ. ಅದಕ್ಕೆ ಪೂರಕವೆಂಬಂತೆ ಎಸ್​ಎ20 (SA20) ಲೀಗ್​ನಲ್ಲಿ 24ರ ಹರೆಯದ ಬ್ಯಾಟ್ಸ್​ಮನ್ ಏಕಾಂಗಿಯಾಗಿ ಬೌಲರ್​ಗಳನ್ನು ಸದೆಬಡಿಯುವ ಮೂಲಕ ತಂಡಕ್ಕೆ ಜಯ ತಂದುಕೊಟ್ಟಿದ್ದಾನೆ. ಇದರೊಂದಿಗೆ ಆರ್​ಸಿಬಿ ಅಭಿಮಾನಿಗಳಿಗೂ ಈ ಭಾರಿ ಕಪ್ ಗೆಲ್ಲುವ ಭರವಸೆಯನ್ನು ನೀಡಿದ್ದಾನೆ. ಅಷ್ಟಕ್ಕೂ ಈ SA20 ನಲ್ಲಿ ಭಯ ಹುಟ್ಟಿಸಿದ ಈ ಬ್ಯಾಟ್ಸ್‌ಮನ್ ಹೆಸರು ವಿಲ್ ಜ್ಯಾಕ್ಸ್ (Will Jacks). ಇಂಗ್ಲೆಂಡ್‌ನ ಈ ಸುನಾಮಿ ಬ್ಯಾಟ್ಸ್​ಮನ್​ನ ಹೆಸರು ಐಪಿಎಲ್ 2023 (IPL 2023) ರಲ್ಲೂ ಪ್ರತಿಧ್ವನಿಸಲಿದ್ದು, ಈ ಸ್ಫೋಟಕ ಬ್ಯಾಟ್ಸ್​ಮನ್ ಈ ಬಾರಿ ಆರ್​ಸಿಬಿ (RCB) ಪರ ಕಣಕ್ಕಿಳಿಯುವುದನ್ನು ನಾವು ಕಾಣಬಹುದಾಗಿದೆ.

ವಾಸ್ತವವಾಗಿ, ಈ ಬಾರಿಯ ಐಪಿಎಲ್ ಮಿನಿ ಹರಾಜಿನಲ್ಲಿ ವಿಲ್ ಜ್ಯಾಕ್ಸ್ 1.50 ಕೋಟಿ ರೂ. ಮೂಲ ಬೆಲೆಯೊಂದಿಗೆ ಹರಾಜಿಗೆ ಎಂಟ್ರಿಕೊಟ್ಟಿದ್ದರು. ಅವರನ್ನು ಖರೀದಿಸಲು ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಬಾರಿ ಪೈಪೋಟಿ ನಡೆದಿತ್ತು. ಅಂತಿಮವಾಗಿ, ಆರ್​ಸಿಬಿ 3.20 ಕೋಟಿಗೆ ಬಿಡ್ ಮಾಡುವ ಮೂಲಕ ಅವರನ್ನು ತಮ್ಮ ಬುಟ್ಟಿಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಇದೀಗ ಐಪಿಎಲ್ ಆರಂಭಕ್ಕೂ ಮುನ್ನವೆ ತನ್ನ ಬ್ಯಾಟಿಂಗ್ ಪರಾಕ್ರಮ ತೋರಿರುವ ವಿಲ್ ಜ್ಯಾಕ್ಸ್ SA20 ಲೀಗ್​ನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದಾರೆ.

Virat Kohli: ‘ನಯಾ ಶೇರ್’ ರ್‍ಯಾಪ್ ಸಾಂಗ್​ನಲ್ಲಿ ಕಿಂಗ್ ಕೊಹ್ಲಿ ಡಾನ್ಸ್! ಟೀಸರ್ ಬಿಡುಗಡೆ ಮಾಡಿದ ಆರ್​ಸಿಬಿ

200ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್

ಎಸ್​ಎ20 ಲೀಗ್​ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಈಸ್ಟರ್ನ್ ಕ್ಯಾಪ್ ನಡುವೆ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 216 ರನ್ ಗಳಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿಲ್ ಜ್ಯಾಕ್ಸ್ 200 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಮಾಡಿ ತಮ್ಮ ಎರಡನೇ ಟಿ0 ಶತಕವನ್ನು ಕೇವಲ 8 ರನ್‌ಗಳಿಂದ ಕಳೆದುಕೊಂಡರು.

ಅಬ್ಬರದ 92 ರನ್ ಚಚ್ಚಿದ ವಿಲ್ ಜ್ಯಾಕ್ಸ್

ಐಪಿಎಲ್ ಮಿನಿ ಹರಾಜಿನಲ್ಲಿ ಆರ್‌ಸಿಬಿಯಿಂದ ಮಿಲಿಯನೇರ್ ಆಗಿರುವ ವಿಲ್ ಜ್ಯಾಕ್ಸ್, ಈ ಪಂದ್ಯದಲ್ಲಿ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ಬೌಲರ್‌ಗಳ ಮೇಲೆ ದಾಳಿ ಮಾಡುವ ಮೂಲಕ ಸಂಚಲನ ಮೂಡಿಸಿದರು. ಈ ಬಲಗೈ ಬ್ಯಾಟ್ಸ್‌ಮನ್ ಕೇವಲ 46 ಎಸೆತಗಳಲ್ಲಿ 92 ರನ್ ಗಳಿಸಿದರು. ತಮ್ಮ ಸ್ಫೋಟಕ ಇನ್ನಿಂಗ್ಸ್‌ನಲ್ಲಿ ಅವರು 8 ಸಿಕ್ಸರ್ ಮತ್ತು 7 ಬೌಂಡರಿಗಳನ್ನು ಬಾರಿಸಿದರು. ಈ ಇನ್ನಿಂಗ್ಸ್‌ನ ಪರಿಣಾಮವಾಗಿ ಪ್ರಿಟೋರಿಯಾ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 216 ರನ್ ಗಳಿಸಿತು.

ವಿಲ್ ಜ್ಯಾಕ್ಸ್ ಪರಾಕ್ರಮ, 37 ರನ್‌ಗಳ ಜಯ

217 ರನ್​ಗಳ ಗುರಿ ಪಡೆದ ಸನ್‌ರೈಸರ್ಸ್ ಈಸ್ಟರ್ನ್ ಕ್ಯಾಪ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 179 ರನ್ ಗಳಿಸಲಷ್ಟೇ ಶಕ್ತವಾಗಿ 37 ರನ್​ಗಳು ಸೋಲು ಅನುಭವಿಸಿತು. ಪ್ರಿಟೋರಿಯಾ ಕ್ಯಾಪಿಟಲ್ಸ್ ಪರ ವೇಯ್ನ್ ಪರ್ನೆಲ್ ಮತ್ತು ಆದಿಲ್ ರಶೀದ್ ತಲಾ 2 ವಿಕೆಟ್ ಪಡೆದರು.

ಟೂರ್ನಿಯಲ್ಲಿ ಆಡಿದ 2 ಪಂದ್ಯಗಳಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್‌ ತಂಡಕ್ಕೆ ಇದು ಸತತ ಎರಡನೇ ಗೆಲುವು. ಈ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ವಿಲ್ ಜ್ಯಾಕ್ಸ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಒಲಿಯಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:52 am, Sun, 15 January 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?