AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಎರಡು ವಿಶ್ರಾಂತಿ… ಕೊನೆಯ ಟೆಸ್ಟ್​ನಲ್ಲಿ ಕಣಕ್ಕಿಳಿಯಲ್ವಾ ಜಸ್​ಪ್ರೀತ್ ಬುಮ್ರಾ

India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿಯನ್ನು 2-2 ಅಂತರದಿಂದ ಡ್ರಾಗೊಳಿಸಬಹುದು. ಹೀಗಾಗಿ ಈ ಮ್ಯಾಚ್ ಭಾರತ ತಂಡದ ಪಾಲಿಗೆ ನಿರ್ಣಾಯಕ.

IND vs ENG: ಎರಡು ವಿಶ್ರಾಂತಿ... ಕೊನೆಯ ಟೆಸ್ಟ್​ನಲ್ಲಿ ಕಣಕ್ಕಿಳಿಯಲ್ವಾ ಜಸ್​ಪ್ರೀತ್ ಬುಮ್ರಾ
Jasprit Bumrah
ಝಾಹಿರ್ ಯೂಸುಫ್
|

Updated on:Jul 29, 2025 | 11:52 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಜುಲೈ 31 ರಿಂದ ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರಾ? ಎಂಬುದೇ ಈಗ ಕುತೂಹಲ. ಏಕೆಂದರೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಬುಮ್ರಾ ಕೇವಲ 3 ಪಂದ್ಯಗಳನ್ನು ಮಾತ್ರ ಆಡಲಿದ್ದಾರೆ ಎಂದು ಈಗಾಗಲೇ ಬಿಸಿಸಿಐ ತಿಳಿಸಿದೆ.  ಆದರೀಗ ಟೀಮ್ ಇಂಡಿಯಾ ಮುಂದಿರುವುದು ಸರಣಿ ನಿರ್ಣಾಯಕ ಪಂದ್ಯ.

ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಮಾತ್ರ ಸರಣಿಯನ್ನು 2-2 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳಿಸಬಹುದು. ಹೀಗಾಗಿ ಭಾರತ ತಂಡಕ್ಕೆ ಪ್ರಮುಖ ವೇಗಿಯ ಅವಶ್ಯಕತೆಯಿದೆ. ಆದರೆ ಅತ್ತ ಬುಮ್ರಾಗೆ ವಿಶ್ರಾಂತಿ ನೀಡುವ ಯೋಜನೆಯೊಂದು ಬಿಸಿಸಿಐ ಮುಂದಿದೆ.

ಈ ಯೋಜನೆಯ ಬಗ್ಗೆ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರನ್ನು ಪ್ರಶ್ನಿಸಿದಾಗ, ಸ್ಪಷ್ಟ ಉತ್ತರ ದೊರಕಿಲ್ಲ. ಅಂದರೆ ಐದನೇ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಕಣಕ್ಕಿಳಿಯುತ್ತಾರಾ ಎಂಬ ಪ್ರಶ್ನೆಗೆ ಗಂಭೀರ್, ಇನ್ನೂ ಸಹ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂಬ ಉತ್ತರ ನೀಡಿದ್ದಾರೆ. ಹೀಗಾಗಿ ಓವಲ್ ಟೆಸ್ಟ್​ನಲ್ಲಿ ಬುಮ್ರಾ ಕಣಕ್ಕಿಳಿಯುವುದು ಇನ್ನೂ ಸಹ ಖಚಿತವಾಗಿಲ್ಲ ಎನ್ನಬಹುದು.

ಬುಮ್ರಾಗೆ ವಿಶ್ರಾಂತಿ ಏಕೆ?

ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಈ ಸಮಸ್ಯೆಯ ಕಾರಣ ಅವರು ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿದಿರಲಿಲ್ಲ. ಇತ್ತ ಬುಮ್ರಾ ಅವರ ಅನುಪಸ್ಥಿತಿಯ ನಡುವೆಯೂ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಇದಾದ ಬಳಿಕ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಸಂಪೂರ್ಣ ಫಿಟ್ನೆಸ್ನೊಂದಿಗೆ ಕಾಣಿಸಿಕೊಂಡಿದ್ದ ಬುಮ್ರಾ ಅವರನ್ನು ಇಂಗ್ಲೆಂಡ್ ಸರಣಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಅವರ ಮೇಲಿರುವ ಒತ್ತಡವನ್ನು ಕಡಿಮೆ ಮಾಡುವ ಸಲುವಾಗಿ ಇಂಗ್ಲೆಂಡ್​ ವಿರುದ್ಧದ ಸರಣಿ ನಡುವೆ ಬುಮ್ರಾಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ.

ಇದನ್ನೂ ಓದಿ: ಗೌತಮ್ ಗಂಭೀರ್​ ಬಲಗೈ ಬಂಟರಿಗೆ ಗೇಟ್​ ಪಾಸ್?

ಒಂದು ವೇಳೆ ಬುಮ್ರಾ ಅವರನ್ನು ಎಲ್ಲಾ ಪಂದ್ಯಗಳಲ್ಲಿ ಕಣಕ್ಕಿಳಿಸಿದರೆ ಅವರು ಮತ್ತೆ ನೋವಿನ ಸಮಸ್ಯೆಗೆ ಸಿಲುಕಬಹುದು. ಅದು ಅವರ ಟೆಸ್ಟ್ ವೃತ್ತಿಜೀವನದ ಗಂಭೀರ ಪರಿಣಾಮ ಬೀರಬಹುದು. ಇದನ್ನು ತಪ್ಪಿಸಲು ಇಂಗ್ಲೆಂಡ್ ವಿರುದ್ಧದ ಸರಣಿಯ ನಡುವೆ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗುತ್ತಿದೆ. ಇದೇ ಕಾರಣದಿಂದಾಗಿ ಅವರು ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವಾಡಿರಲಿಲ್ಲ. ಆ ಬಳಿಕ ಬ್ಯಾಕ್ ಟು ಬ್ಯಾಕ್ 2 ಮ್ಯಾಚ್​ಗಳನ್ನಾಡಿರುವ ಜಸ್​ಪ್ರೀತ್ ಬುಮ್ರಾಗೆ 5ನೇ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ನೀಡಿದರೂ ಅಚ್ಚರಿಪಡಬೇಕಿಲ್ಲ.

Published On - 10:55 am, Tue, 29 July 25

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ