AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸನ್​ರೈಸರ್ಸ್’ ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?

Abrar Ahmed: ಅಬ್ರಾರ್ ಅಹ್ಮದ್ ಪಾಕಿಸ್ತಾನ್ ಮೂಲದ ಕ್ರಿಕೆಟಿಗ. ಈ ಹಿಂದೆ ಭಾರತವನ್ನು ಅಣಕಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದರು. ಇತ್ತ ವಿರೋಧಿ ಮನಸ್ಥಿತಿ ಹೊಂದಿದ್ದರೂ ಪಾಕ್ ಮೂಲದ ಆಟಗಾರನನ್ನು ಸನ್​ರೈಸರ್ಸ್ ಹೈದರಾಬಾದ್ ಒಡೆತನದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿ ಖರೀದಿಸಿರುವುದು ಇದೀಗ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

'ಸನ್​ರೈಸರ್ಸ್' ​ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್?
Abrar Ahmed
ಝಾಹಿರ್ ಯೂಸುಫ್
|

Updated on: Mar 14, 2026 | 10:54 AM

Share

ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕಿಸ್ತಾನ್ ಆಟಗಾರ ಅಬ್ರಾರ್ ಅಹ್ಮದ್​ ಅವರನ್ನು ಖರೀದಿಸಿ ಇದೀಗ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಇಕ್ಕಟಿಗೆ ಸಿಲುಕಿದೆ.  ಮಾರ್ಚ್ 12, 2026 ರಂದು ನಡೆದ ಹರಾಜಿನಲ್ಲಿ ಅಬ್ರಾರ್ ಅಹ್ಮದ್ ಅವರನ್ನುಎಸ್​ಆರ್​ಹೆಚ್ ಮಾಲೀಕತ್ವದ ಸನ್​ರೈಸರ್ಸ್ ಲೀಡ್ಸ್ ಫ್ರಾಂಚೈಸಿಯು ಬರೋಬ್ಬರಿ £1,90,000 (ಸುಮಾರು ₹2.34 ಕೋಟಿ) ಮೊತ್ತಕ್ಕೆ ಖರೀದಿಸಿದೆ.

ಇತ್ತ ಭಾರತೀಯ ವಿರೋಧಿ ಮನಸ್ಥಿತಿ ಹೊಂದಿರುವ ಪಾಕ್ ಆಟಗಾರನನ್ನು ಖರೀದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಈ ಆಕ್ರೋಶದೊಂದಿಗೆ ಸನ್​ರೈಸರ್ಸ್​ ಲೀಡ್ಸ್‌ನ ‘X’ (ಟ್ವಿಟರ್) ಖಾತೆಯನ್ನು ರಿಪೋರ್ಟ್ ಮಾಡಿದ್ದ ಪರಿಣಾಮ ಎಸ್​ಆರ್​ಎಲ್​ ತಂಡದ ಸೋಷಿಯಲ್ ಮೀಡಿಯಾ ಖಾತೆಯು ತಾತ್ಕಾಲಿಕ ಸ್ಥಗಿತವಾಗಿತ್ತು.

ಇದೀಗ ಭಾರತ ಸೇರಿದಂತೆ ಎಲ್ಲೆಡೆಯಿಂದ ಎಸ್​ಆರ್​ಹೆಚ್​ ಅಭಿಮಾನಿಗಳ ಒತ್ತಡ ಹೆಚ್ಚಾಗುತ್ತಿರುವುದರಿಂದ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಪಾಕ್ ಆಟಗಾರನನ್ನು ಕೈ ಬಿಡುವ ಬಗ್ಗೆ ಚಿಂತಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದಕ್ಕೂ ಮುನ್ನ ಒಂದಷ್ಟು ನಿಯಮಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಎಸ್​ಆರ್​ಹೆಚ್ ಫ್ರಾಂಚೈಸಿ ಮುಂದಿದೆ.

ಕೈಬಿಡಲು ಇರುವ ಕಾರಣಗಳು:

  • ಭಾರತೀಯ ಅಭಿಮಾನಿಗಳ ಆಕ್ರೋಶ: ಸನ್‌ರೈಸರ್ಸ್ ಹೈದರಾಬಾದ್ (SRH) ಭಾರತೀಯ ಮೂಲದ ಫ್ರಾಂಚೈಸಿ. ಅಬ್ರಾರ್ ಅವರ ಹಳೆಯ ವಿವಾದಾತ್ಮಕ ಪೋಸ್ಟ್‌ಗಳಿಂದಾಗಿ ಭಾರತೀಯ ಅಭಿಮಾನಿಗಳು ತಂಡವನ್ನು ಬಹಿಷ್ಕರಿಸುವಂತೆ  ಒತ್ತಾಯಿಸುತ್ತಿದ್ದಾರೆ. ಇದು ಫ್ರಾಂಚೈಸಿಯ ಬ್ರ್ಯಾಂಡ್ ಮೌಲ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
  • ಪ್ರಾಯೋಜಕರ ಒತ್ತಡ: ಅಭಿಮಾನಿಗಳ ಆಕ್ರೋಶ ಹೆಚ್ಚಾದರೆ, ತಂಡಕ್ಕೆ ಬೆಂಬಲ ನೀಡುವ ಕಂಪನಿಗಳು ತಮ್ಮ ಹೆಸರಿಗೆ ಧಕ್ಕೆ ಬರುತ್ತದೆ ಎಂದು ಒಪ್ಪಂದದಿಂದ ಹಿಂದೆ ಸರಿಯಬಹುದು. ಅಂತಹ ಸಂದರ್ಭದಲ್ಲಿ ಮಾಲೀಕರು ಅನಿವಾರ್ಯವಾಗಿ ಅಬ್ರಾರ್ ಅವರನ್ನು ಕೈಬಿಡಬೇಕಾಗುತ್ತದೆ.

ಕೈಬಿಡಲು ಇರುವ ಅಡೆತಡೆಗಳು:

  • ಕಾನೂನು ಮತ್ತು ಆರ್ಥಿಕ ಸಮಸ್ಯೆ: ಅಬ್ರಾರ್ ಅಹ್ಮದ್ ಅವರನ್ನು ಹರಾಜಿನಲ್ಲಿ £190,000 (ಸುಮಾರು ₹2.34 ಕೋಟಿ) ನೀಡಿ ಅಧಿಕೃತವಾಗಿ ಖರೀದಿಸಲಾಗಿದೆ. ಯಾವುದೇ ಬಲವಾದ ಶಿಸ್ತುಕ್ರಮದ ಕಾರಣವಿಲ್ಲದೆ ಅವರನ್ನು ಕೈಬಿಟ್ಟರೆ, ಫ್ರಾಂಚೈಸಿ ಅವರಿಗೆ ಪೂರ್ಣ ಹಣವನ್ನು ನೀಡಬೇಕಾಗುತ್ತದೆ.
  • ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ನಿಯಮ: ‘ದಿ ಹಂಡ್ರೆಡ್’ ಟೂರ್ನಿಯು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ನಿಯಮದಡಿ ನಡೆಯುತ್ತದೆ. ಕೇವಲ ಸೋಶಿಯಲ್ ಮೀಡಿಯಾ ಆಕ್ರೋಶದ ಕಾರಣಕ್ಕೆ ಆಟಗಾರನನ್ನು ತೆಗೆದುಹಾಕಲು ಇಸಿಬಿ ಅನುಮತಿ ನೀಡುತ್ತದೆಯೇ ಎಂಬುದು ಮುಖ್ಯ.

ಸದ್ಯದ ಪರಿಸ್ಥಿತಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್  ಮೌನವಾಗಿದ್ದಾರೆ. ಅಲ್ಲದೆ ಫ್ರಾಂಚೈಸಿ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಸನ್​ರೈಸರ್ಸ್ ಫ್ರಾಂಚೈಸಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಜೊತೆ ಕೂಡ ಚರ್ಚಿಸಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Jitesh Sharma: ನನ್ನ ತಂದೆಗೆ ವಿಶ್ವಕಪ್‌ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು!

ಒಂದು ವೇಳೆ ಐಪಿಎಲ್ ಆರಂಭಕ್ಕೂ ಮುನ್ನ ‘ಸನ್​ರೈಸರ್ಸ್’​ ಫ್ರಾಂಚೈಸಿ ಮೇಲೆ ಪ್ರಾಯೋಜಕರ ಒತ್ತಡ ಹೆಚ್ಚಾದರೆ  “ವೈಯಕ್ತಿಕ ಕಾರಣ” ಅಥವಾ “ಗಾಯದ ಸಮಸ್ಯೆ” ಎಂಬ ಕಾರಣ ನೀಡಿ ಅಬ್ರಾರ್ ಅಹ್ಮದ್ ಅವರನ್ನು ದಿ ಹಂಡ್ರೆಡ್  ಟೂರ್ನಿಯಿಂದ ಕೈಬಿಡಲು ಚಿಂತಿಸಲಾಗಿದೆ. ಹೀಗಾಗಿ ದಿ ಹಂಡ್ರೆಡ್ ಟೂರ್ನಿ ಆರಂಭಕ್ಕೂ ಮುನ್ನವೇ ಸನ್​ರೈಸರ್ಸ್​ ಲೀಡ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ಸಿಗುವ ಸಾಧ್ಯತೆ ಹೆಚ್ಚಿದೆ.

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​