AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RR Final: ಹಾರ್ದಿಕ್ ಸುಳ್ಳು ಹೇಳುತ್ತಿದ್ದಾನೆ ಎಂದ ನೆಹ್ರಾ! ಪ್ರಶಸ್ತಿ ಬಳಿಕ ಪಾಂಡ್ಯ- ನೆಹ್ರಾ ಮನದಾಳದ ಮಾತು ಹೀಗಿತ್ತು

GT vs RR Final: ಆರಂಭದಲ್ಲಿ ಗುಜರಾತ್‌ನ ಬ್ಯಾಟಿಂಗ್-ಬೌಲಿಂಗ್ ದುರ್ಬಲವಾಗಿದೆ ಎಂದು ಜನರು ಹೇಳುತ್ತಿದ್ದರು. ಆದರೆ ನಮ್ಮ ಹುಡುಗರು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದರು.

GT vs RR Final: ಹಾರ್ದಿಕ್ ಸುಳ್ಳು ಹೇಳುತ್ತಿದ್ದಾನೆ ಎಂದ ನೆಹ್ರಾ! ಪ್ರಶಸ್ತಿ ಬಳಿಕ ಪಾಂಡ್ಯ- ನೆಹ್ರಾ ಮನದಾಳದ ಮಾತು ಹೀಗಿತ್ತು
ಆಶಿಶ್ ನೆಹ್ರಾ, ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on:May 30, 2022 | 3:59 PM

Share

ಗುಜರಾತ್ ಟೈಟಾನ್ಸ್ ತನ್ನ ಮೊದಲ ಸೀಸನ್​ನಲ್ಲೇ ಅದ್ಭುತ ಪ್ರದರ್ಶನ ನೀಡುವ ಮೂಲಕ 15ನೇ ಆವೃತ್ತಿಯ ಚಾಂಪಿಯನ್ (IPL 2022 Final)) ಆಗಿ ಹೊರಹೊಮ್ಮಿತು. ಭಾನುವಾರ ಅಹಮದಾಬಾದ್‌ನಲ್ಲಿ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಗುಜರಾತ್ ತಂಡ ರಾಜಸ್ಥಾನ್ ರಾಯಲ್ಸ್ (Gujarat defeated Rajasthan Royals) ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಕೇವಲ 131 ರನ್​ಗಳ ಗುರಿ ಬೆನ್ನತ್ತಿದ ಗುಜರಾತ್ ತಂಡ 11 ಎಸೆತಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಹಾರ್ದಿಕ್ ಪಾಂಡ್ಯ ತಮ್ಮ ನಾಯಕತ್ವವನ್ನು ಸಾಬೀತುಪಡಿಸಿದರು. ಮೊದಲ ಬಾರಿಗೆ ಐಪಿಎಲ್‌ನಂತಹ ದೊಡ್ಡ ಟೂರ್ನಿಯಲ್ಲಿ ನಾಯಕರಾಗಿದ್ದ ಪಾಂಡ್ಯ ಬ್ಯಾಟ್ ಮತ್ತು ಬಾಲ್‌ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದರು. ಆದರೆ, ಗುಜರಾತ್ ತಂಡದ ನಾಯಕ ಈ ಗೆಲುವನ್ನು ಮುಖ್ಯ ಕೋಚ್ ಆಶಿಶ್ ನೆಹ್ರಾ ಅವರಿಗೆ ತೊಡಿಸಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ಪಾಂಡ್ಯ, ನೆಹ್ರಾ ತಂಡದೊಂದಿಗೆ ಹೇಗೆ ಶ್ರಮಿಸಿದರು ಎಂಬುದನ್ನು ವಿವರಿಸಿದರು.

IPL 2022 ಚಾಂಪಿಯನ್ ಆದ ನಂತರ, ಗುಜರಾತ್ ಟೈಟಾನ್ಸ್ ಮುಖ್ಯ ಕೋಚ್ ಆಶಿಶ್ ನೆಹ್ರಾ ನಾಯಕ ಪಾಂಡ್ಯ ಅವರೊಂದಿಗೆ ಮಾತನಾಡಿದರು. ಐಪಿಎಲ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಈ ವಿಡಿಯೋದಲ್ಲಿ, ಆಶಿಶ್ ನೆಹ್ರಾ, ನಾಯಕ ಹಾರ್ದಿಕ್ ಪಾಂಡ್ಯ ಬಳಿ ಈ ಐಪಿಎಲ್ ಜರ್ನಿಯ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುವಂತೆ ಕೇಳಿಕೊಂಡರು. ಇದಕ್ಕೆ ಪಾಂಡ್ಯ ಆಸಕ್ತಿದಾಯಕ ಉತ್ತರವನ್ನು ಸಹ ನೀಡಿದ್ದರು. ಆರಂಭದಲ್ಲಿ ಗುಜರಾತ್‌ನ ಬ್ಯಾಟಿಂಗ್-ಬೌಲಿಂಗ್ ದುರ್ಬಲವಾಗಿದೆ ಎಂದು ಜನರು ಹೇಳುತ್ತಿದ್ದರು. ಆದರೆ ನಮ್ಮ ಹುಡುಗರು ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದು ಹಾರ್ದಿಕ್ ಪಾಂಡ್ಯ ಹೇಳಿದರು. ಹಾರ್ದಿಕ್ ಪಾಂಡ್ಯ, ‘ನಾನು ಮೊದಲ ವರ್ಷದಲ್ಲಿಯೇ ಸಿಕ್ಸರ್ ಬಾರಿಸಿದ್ದೇನೆ. ನಾನು ತುಂಬಾ ಸಂತೋಷವಾಗಿದ್ದೇನೆ. ಮೊದಮೊದಲು ಜನರು ಈ ತಂಡದಲ್ಲಿ ಅಂತ ಹೇಳಿಕೊಳ್ಳುವಂತಹ ಬ್ಯಾಟಿಂಗ್, ಹಾಗೂ ಬೌಲಿಂಗ್ ಇಲ್ಲ ಎಂದಿದ್ದರು. ಆದರೆ ನಾವು ಚಾಂಪಿಯನ್ ಆಗಿದ್ದೇವೆ, ಇದು ಹೆಮ್ಮೆಯ ವಿಚಾರ ಎಂದಿದ್ದಾರೆ.

ಇದನ್ನೂ ಓದಿ
Image
GT vs RR Final: ಆರೆಂಜ್ ಕ್ಯಾಪ್ ಜೊತೆಗೆ ಮೋಸ್ಟ್ ವ್ಯಾಲ್ಯುಬಲ್ ಪ್ಲೇಯರ್ ಪ್ರಶಸ್ತಿ ಗೆದ್ದ ಜೋಸ್ ಬಟ್ಲರ್..!
Image
GT vs RR, IPL 2022: ಐಪಿಎಲ್ 2022 ಫೈನಲ್ ಪಂದ್ಯ ಫಿಕ್ಸಿಂಗ್?: ಅನುಮಾನ ಹುಟ್ಟುಹಾಕಿದೆ ಫೋಟೋಗಳು ಎಂದ ಫ್ಯಾನ್ಸ್

ಟ್ರೋಫಿ ಗೆಲ್ಲುವುದಕ್ಕಿಂತ ಹೆಚ್ಚು ಸಂತೋಷವಿಲ್ಲ- ನೆಹ್ರಾ

ಗುಜರಾತ್ ಟೈಟಾನ್ಸ್ ತಂಡದ ಮುಖ್ಯ ಕೋಚ್ ಆಶಿಶ್ ನೆಹ್ರಾ ಮಾತನಾಡಿ, ಗುಜರಾತ್ ತಂಡ ಆಡುವ ರೀತಿ ನನಗೆ ತುಂಬಾ ಖುಷಿ ತಂದಿದೆ. ಟ್ರೋಫಿ ಗೆದ್ದಿರುವುದು ಸರಿಯೇ ಆದರೆ ನಮ್ಮ ತಂಡ ಆಡುವ ರೀತಿ ನನಗೆ ಅತ್ಯಂತ ಖುಷಿ ತಂದಿದೆ ಎಂದರು. ಹುಡುಗರು ಆಟ ತೋರಿದ ರೀತಿ, ಪರಸ್ಪರ ಬೆರೆತ ರೀತಿ. ಮೊದಲ ಸೀಸನ್‌ನಲ್ಲಿ ಚಾಂಪಿಯನ್ ಆಗಿರುವುದು ಅದ್ಭುತವಾಗಿದೆ ಎಂದಿದ್ದಾರೆ.

ಪಾಂಡ್ಯಗೆ ನೆಹ್ರಾ ಹೇಳಿದ ಸುಳ್ಳು!

ಐಪಿಎಲ್ ಗೆಲ್ಲುವಲ್ಲಿ ಯಶಸ್ವಿಯಾದ ಮೊದಲ ಭಾರತೀಯ ಮುಖ್ಯ ಕೋಚ್ ಆಶಿಶ್ ನೆಹ್ರಾ ಎಂಬುದು ಇಲ್ಲಿ ಹೆಗ್ಗಳಿಕೆಯಾಗಿದೆ. ಆಶಿಶ್ ನೆಹ್ರಾ ಗುಜರಾತ್‌ನ ಪ್ರತಿಯೊಬ್ಬ ಆಟಗಾರರೊಂದಿಗೆ ಹೇಗೆ ಶ್ರಮಿಸಿದರು ಎಂಬುದನ್ನು ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ತಿಳಿಸಿದರು. ಆಶಿಶ್ ನೆಹ್ರಾಗೆ ಗೆಲುವಿನ ಮುಖ ಒಲಿದಿದೆ, ಏಕೆಂದರೆ ಅವರು ಪ್ರತಿಯೊಬ್ಬ ಆಟಗಾರನೊಂದಿಗೆ ತುಂಬಾ ಕಠಿಣವಾಗಿ ಕೆಲಸ ಮಾಡಿದರು. ಅವರು ಪ್ರತಿಯೊಬ್ಬ ಬ್ಯಾಟ್ಸ್‌ಮನ್, ಬೌಲರ್‌ನತ್ತ ಗಮನ ಹರಿಸಿದರು. ನೆಹ್ರಾ ಕೋಚಿಂಗ್​ನಲ್ಲಿ ಅಭ್ಯಾಸ ಮಾಡುತ್ತಿದ್ದ ಪ್ರತಿಯೊಬ್ಬ ಆಟಗಾರನೂ ಅಭ್ಯಾಸದ ನಂತರ ಕ್ರೀಸ್‌ಗೆ ಹೋಗಿ ಬಾಲನ್ನು ಬ್ಯಾಟ್‌ ಮಧ್ಯದಲ್ಲಿ ಆಡಿ ಸಿಕ್ಸರ್ ಬಾರಿಸುವೆ ಎಂದು ಯೋಚಿಸುತ್ತಿದ್ದರು ಎಂಬ ಹೊಗಳಿಕೆಯ ಮಾತನ್ನು ಪಾಂಡ್ಯ ನೆಹ್ರಾ ಬಗ್ಗೆ ಹೇಳಿದ್ದರು. ಈ ಮಾತು ಕೇಳಿದ ಆಶಿಶ್ ನೆಹ್ರಾ ಈ ವಿಚಾರದಲ್ಲಿ ಸ್ವಲ್ಪ ನಾಚಿಕೆಪಟ್ಟು ಹಾರ್ದಿಕ್ ಪಾಂಡ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದ್ದರು. ಇದಾದ ಬಳಿಕ ಆಶಿಶ್ ನೆಹ್ರಾ ಅಲ್ಲಿಂದ ಎದ್ದು ಹೋದರು.

Published On - 3:59 pm, Mon, 30 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ