Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತವನ್ನು ಬಗ್ಗು ಬಡಿಯುವುದಕ್ಕಿಂತ ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಮುಖ್ಯ: ಪಾಕ್ ಉಪನಾಯಕ

Champions Trophy 2025: 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಹಾಗೆಯೇ ಫೈನಲ್ ಪಂದ್ಯ ಮಾರ್ಚ್ 9 ರಂದು ನಡೆಯಲಿದೆ. ಹೈಬ್ರಿಡ್ ಮಾದರಿಯಲ್ಲಿ ಜರುಗಲಿರುವ ಈ ಟೂರ್ನಿಯ ಬಹುತೇಕ ಮ್ಯಾಚ್​ಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಭಾರತ ತಂಡದ ಪಂದ್ಯಗಳಿಗೆ ದುಬೈ ಆತಿಥ್ಯವಹಿಸಲಿದೆ.

ಭಾರತವನ್ನು ಬಗ್ಗು ಬಡಿಯುವುದಕ್ಕಿಂತ ಚಾಂಪಿಯನ್ಸ್ ಟ್ರೋಫಿ ಗೆಲ್ಲೋದು ಮುಖ್ಯ: ಪಾಕ್ ಉಪನಾಯಕ
Ind Vs Pak
Follow us
ಝಾಹಿರ್ ಯೂಸುಫ್
|

Updated on: Feb 16, 2025 | 3:12 PM

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 19 ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆತಿಥ್ಯವಹಿಸುತ್ತಿದೆ. ಇದಾಗ್ಯೂ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅದರಂತೆ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆದರೆ, ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದೆ.

ಇನ್ನು ಫೆಬ್ರವರಿ 23 ರಂದು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಈಗ ಕುತೂಹಲ. ಹೀಗಾಗಿಯೇ ಈ ಬಾರಿಯ ಟೂರ್ನಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ಗೆಲ್ಲಲಿದೆಯಾ ಎಂಬ ಪ್ರಶ್ನೆಯನ್ನು ಪಾಕ್ ತಂಡದ ಉಪನಾಯಕ ಸಲ್ಮಾನ್ ಅಲಿ ಅಘಾ ಅವರಲ್ಲಿ ಕೇಳಲಾಗಿತ್ತು.

ಭಾರತವನ್ನು ಸೋಲಿಸುವುದೇ ಅಥವಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದೇ? ಪಾಕಿಸ್ತಾನ್ ತಂಡದ ಮುಖ್ಯ ಗುರಿ ಎಂಬ ಪ್ರಶ್ನೆಯನ್ನು ಪಿಸಿಬಿ ಪಾಡ್​ಕಾಸ್ಟ್​ನಲ್ಲಿ ಸಲ್ಮಾನ್ ಅಘಾ ಮುಂದಿಡಲಾಗಿತ್ತು. ಇದಕ್ಕೆ ಉತ್ತರಿಸಿದ ಪಾಕ್ ತಂಡದ ಉಪನಾಯಕ, ಪಾಕಿಸ್ತಾನ್-ಭಾರತ ಪಂದ್ಯ ಬಹಳ ಮುಖ್ಯವಾದದ್ದೇ/ ಆದರೆ ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ಅದಕ್ಕಿಂತ ಮುಖ್ಯವಾದ ವಿಷಯ ಎಂದಿದ್ದಾರೆ.

ನಾವು ಭಾರತವನ್ನು ಸೋಲಿಸಿ ಪಂದ್ಯಾವಳಿಯನ್ನು ಗೆಲ್ಲದಿದ್ದರೆ, ಆ ಗೆಲುವಿಗೆ ಯಾವುದೇ ಮೌಲ್ಯವಿಲ್ಲ. ಆದಾಗ್ಯೂ, ನಾವು ಭಾರತ ವಿರುದ್ಧ ಸೋತರೂ ಟ್ರೋಫಿಯನ್ನು ಎತ್ತಿ ಹಿಡಿದರೆ, ಅದು ದೊಡ್ಡ ಸಾಧನೆಯಾಗಲಿದೆ. ಹೀಗಾಗಿ ನನ್ನ ಪ್ರಕಾರ, ಭಾರತ ತಂಡವನ್ನು ಬಗ್ಗು ಬಡಿಯುವುದಕ್ಕಿಂತ, ಚಾಂಪಿಯನ್ಸ್ ಟ್ರೋಫಿ ಗೆಲ್ಲುವುದು ನಮಗೆ ಮುಖ್ಯ ಎಂದು ಸಲ್ಮಾನ್ ಅಲಿ ಅಘಾ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೆ ಇಂಡೊ-ಪಾಕ್ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಇದನ್ನೂ ಓದಿ: IPL 2025: ಎಲ್ ಕ್ಲಾಸಿಕೊ ಪಂದ್ಯಕ್ಕೆ ದಿನಾಂಗ ನಿಗದಿ

ಪಾಕಿಸ್ತಾನ್ ತಂಡ: ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಝ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್