AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಆರ್​ಸಿಬಿ ಕಪ್ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದ ಯುವತಿ! ಪೋಸ್ಟರ್ ಸಖತ್ ವೈರಲ್

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್​ಸಿಬಿ 23 ರನ್​ಗಳಿಂದ ಶರಣಾಗಿದೆ.

IPL 2022: ಆರ್​ಸಿಬಿ ಕಪ್ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದ ಯುವತಿ! ಪೋಸ್ಟರ್ ಸಖತ್ ವೈರಲ್
ಆರ್​ಸಿಬಿ ಅಭಿಮಾನಿ
TV9 Web
| Updated By: ಪೃಥ್ವಿಶಂಕರ|

Updated on: Apr 13, 2022 | 3:44 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವೆ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ (IPL- 2022) ಆರ್​ಸಿಬಿ 23 ರನ್​ಗಳಿಂದ ಶರಣಾಗಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಚೆನ್ನೈ ಖಾತೆ ತೆರೆದಿದೆ. ರವೀಂದ್ರ ಜಡೇಜಾ ಕಪ್ತಾನನಾಗಿ ಮೊದಲ ಗೆಲುವು ಕಂಡಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ ಸಿಎಸ್​ಕೆ ಗೆಲುವು ಸಾಧಿಸಿದ್ದು ಒಂದು ಸಂಗತಿಯಾದರೆ, ಮ್ಯಾಚ್​ ನೋಡಲು ಬಂದಿದ್ದ ಯುವತಿಯೊಬ್ಬಳು ಹಿಡಿದಿದ್ದ ಪೋಸ್ಟರ್ ಸಖತ್ ಸದ್ದು ಮಾಡುತ್ತಿದೆ. ಅಷ್ಟಕ್ಕೂ ಈ ಯುವತಿ, ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ತನ್ನ ನೆಚ್ಚಿನ ತಂಡ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ಬರೆದಿರುವ ಪೋಸ್ಟರ್ ಹಿಡಿದು ತನ್ನ ತಂಡದ ಮೇಲಿರುವ ಅಭಿಮಾನವನ್ನು ವ್ಯಕ್ತಪಡಿಸಿದ್ದಾಳೆ. ಅಷ್ಟಕ್ಕೂ ಈ ಪೋಸ್ಟರ್ ಹಿಡಿದಿರುವ ಯುವತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಅಭಿಮಾನಿಯಾಗಿದ್ದು, ಈ ಫೋಟೋ ಈಗಾಗಲೇ ಅಂತರ್ಜಾಲದಲ್ಲಿ ಎಲ್ಲರ ಗಮನ ಸೆಳೆದಿದೆ. ಮಂಗಳವಾರ ಸಂಜೆ ನವಿ ಮುಂಬೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಪಂದ್ಯದ ವೇಳೆ ಈ ದೃಶ್ಯ ಕಂಡುಬಂದಿದೆ. ‘ಆರ್‌ಸಿಬಿ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ’ ಎಂಬ ಪೋಸ್ಟರ್ ಹಿಡಿದು ಮಹಿಳೆ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಈಗ ಸೋಶೀಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಜೊತೆಗೆ ಯುವತಿಯ ಈ ಪೋಸ್ಟರ್​ಗೆ ಅನೇಕ ನೆಟ್ಟಿಗರು ವ್ಯಂಗ್ಯವಾಗಿ ಟ್ವೀಟ್ ಮಾಡುತ್ತಿದ್ದಾರೆ. ಅವರ ಸಾಲಿಗೆ ಖ್ಯಾತ ಕ್ರಿಕೆಟಿಗ ಅಮಿತ್​ ಮಿಶ್ರಾ ಕೂಡ ಸೇರಿದ್ದಾರೆ.

ಪಂದ್ಯ ಹೀಗಿತ್ತು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್​ಸಿಬಿ, 10ನೇ ಓವರ್ ತನಕ ಪಂದ್ಯದ ಮೇಲೆ ಬಿಗಿ ಹಿಡಿತ ಹೊಂದಿತ್ತು. ಮೊದಲ ಹತ್ತು ಓವರ್​ಗಳಲ್ಲಿ ಚೆನ್ನೈ ಎರಡು ವಿಕೆಟ್ ಕಳೆದುಕೊಂಡು 60 ರನ್​ಗಳನ್ನಷ್ಟೇ ಗಳಿಸಿತ್ತು. ಆಗ ಜತೆಯಾದ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಪಂದ್ಯದ ಗತಿಯನ್ನೇ ಬದಲಿಸಿದರು. ಪರಿಣಾಮವಾಗಿ ಸಿಎಸ್​ಕೆ ನಂತರದ ಹತ್ತು ಓವರ್​ಗಳಲ್ಲಿ ಬರೋಬ್ಬರಿ 165 ರನ್ ಪೇರಿಸಿತು. ಸಿಎಸ್​​ಕೆ ಪರ ರಾಬಿನ್ ಉತ್ತಪ್ಪ 50 ಎಸೆತಗಳಲ್ಲಿ 88 ರನ್ ಚಚ್ಚಿದರು. ಅದರಲ್ಲಿ 4 ಬೌಂಡರಿ ಹಾಗೂ 9 ಸಿಕ್ಸರ್ ಸೇರಿತ್ತು. ಶಿವಂ ದುಬೆ 46 ಎಸೆತಗಳಲ್ಲಿ 95 ರನ್​ಗಳ ಸ್ಫೋಟಕ ಆಟವಾಡಿ ಔಟ್ ಆಗದೆ ಉಳಿದರು. ಈ ಇನ್ನಿಂಗ್ಸ್​ನಲ್ಲಿ ದುಬೆ ಅವರಿಂದ 5 ಫೋರ್ ಹಾಗೂ 8 ಸಿಕ್ಸರ್ ಸಿಡಿಸಲ್ಪಟ್ಟವು. ದುಬೆ- ಉತ್ತಪ್ಪ ಜತೆಯಾಟ ಸಾಗುತ್ತಿದ್ದಾಗ ಈರ್ವರೂ ಶತಕ ಗಳಿಸುವ ನಿರೀಕ್ಷೆ ಇತ್ತು. ಕೊನೆಯ ಓವರ್​ಗಳಲ್ಲಿ ಆರ್​ಸಿಬಿ ತುಸು ಪ್ರತಿರೋಧ ಒಡ್ಡಿದ ಪರಿಣಾಮ ಇದು ಸಾಧ್ಯವಾಗಲಿಲ್ಲ. ಒಟ್ಟಾರೆ ಸಿಎಸ್​ಕೆ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಬರೋಬ್ಬರಿ 216 ರನ್​ ಗಳಿಸಿ ಬೃಹತ್ ಗುರಿಯನ್ನು ಆರ್​ಸಿಬಿಗೆ ನೀಡಿತು.

ನಿರೀಕ್ಷಿತ ಪ್ರದರ್ಶನ ತೋರದ ಆರ್​ಸಿಬಿ ಸ್ಟಾರ್​ಗಳು ಆರ್​​ಸಿಬಿಯ ಇತ್ತೀಚಿನ ಪ್ರದರ್ಶಗಳಲ್ಲಿ ಮಧ್ಯಮ ಕ್ರಮಾಂಕದ ಕೊಡುಗೆ ಅದ್ಭುತವಾಗಿ ಮೂಡಿಬರುತ್ತಿದೆ. ಆದರೆ ಮಧ್ಯಮ ಕ್ರಮಾಂಕ ಕ್ಲಿಕ್ ಆಗುವಾಗ ಆರಂಭಿಕರಿಂದ ಉತ್ತಮ ಜತೆಯಾಟ ಸಿಕ್ಕುತ್ತಿಲ್ಲ. ಸಿಎಸ್​ಕೆ ವಿರುದ್ಧವೂ ಆರ್​ಸಿಬಿ ಬ್ಯಾಟಿಂಗ್ ಇದೇ ಸಮಸ್ಯೆ ಎದುರಿಸಿತು. ಕಪ್ತಾನ ಫಾಫು ಡು ಪ್ಲೆಸಿಸ್ 8 ರನ್​ಗಳಿಗೆ, ಅನುಜ್ ರಾವತ್ 12 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಮಹತ್ವದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 1 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಪವರ್​ಪ್ಲೇಯೊಳಗೆ ಆರ್​ಸಿಬಿ 3 ವಿಕೆಟ್ ಕಳೆದುಕೊಂಡಿತ್ತು.

ನಾಲ್ಕನೇ ಕ್ರಮಾಂಕದಲ್ಲಿ ಬಂದ ಮ್ಯಾಕ್ಸ್​ವೆಲ್ ಆರಂಭದಿಂದಲೇ ಅಬ್ಬರಿಸಿದರು. 11 ಎಸೆತಗಳಲ್ಲಿ 26 ರನ್ ಗಳಿಸಿದ್ದ ಅವರು ಅದಾಗಲೇ 2 ಬೌಂಡರಿ, 2 ಸಿಕ್ಸರ್ ಬಾರಿಸಿದ್ದರು. ಆದರೆ ರವೀಂದ್ರ ಜಡೇಜಾ ಮ್ಯಾಕ್ಸಿಗೆ ಪೆವಿಲಿಯನ್ ಹಾದಿ ತೋರಿಸಿದರು. ಸುಯಶ್ ಪ್ರಭುದೇಸಾಯಿ ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿದರು. 18 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 34 ರನ್ ಗಳಿಸಿದರು.

ಶಾಬಾಜ್ ಅಹ್ಮದ್ ಅವರ ಅದ್ಭುತ ಫಾರ್ಮ್ ಈ ಪಂದ್ಯದಲ್ಲೂ ಮುಂದುವರೆಯಿತು. 27 ಎಸೆತಗಳಲ್ಲಿ 41 ರನ್​ಗಳಲ್ಲಿ ಅವರು ಸಿಡಿಸಿದರು. ಆದರೆ ಆರ್​ಸಿಬಿ ಪರ ದೊಡ್ಡ ಜತೆಯಾಟ ಮೂಡಿಬರಲಿಲ್ಲ. ದಿನೇಶ್ ಕಾರ್ತಿಕ್ ಕ್ರೀಸ್​ಗೆ ಇಳಿದಾಗ ಅವರಿದ್ದ ಫಾರ್ಮ್​ನಲ್ಲಿ ಅಭಿಮಾನಿಗಳಿಗೆ ಗೆಲ್ಲುವ ನಿರೀಕ್ಷೆ ಇತ್ತು. 14 ಎಸೆತಗಳಲ್ಲಿ 2 ಬಂಡರಿ 3 ಸಿಕ್ಸರ್ ಮೂಲದ 34 ರನ್​ ಗಳಿಸಿದ್ದ ಡಿಕೆ ಬ್ರಾವೋ ಎಸೆತದಲ್ಲಿ ಔಟ್ ಆದರು. ಅಂತಿಮವಾಗಿ ಆರ್​ಸಿಬಿ 9 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿ, 23 ರನ್​ಗಳಿಂದ ಸಿಎಸ್​ಕೆ ಶರಣಾಯಿತು. ಸಿಎಸ್​ಕೆ ಪರ ಮಹೀಶ್ ತೀಕ್ಷಣ 4 ವಿಕೆಟ್ ಹಾಗೂ ಜಡೇಜಾ 3 ವಿಕೆಟ್ ಪಡೆದರು. ಪಂದ್ಯದ ಗತಿಯನ್ನೇ ಬದಲಿಸಿದ ಶಿವಂ ದುಬೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು.

ಇದನ್ನೂ ಓದಿ:Jasprit Bumrah: ಐಪಿಎಲ್​ನಲ್ಲಿ ದೊಡ್ಡ ತೊಂದರೆಗೆ ಸಿಲುಕಿಕೊಂಡ ಬುಮ್ರಾ- ನಿತೀಶ್ ರಾಣ: ಇವರು ಮಾಡಿದ್ದೇನು?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ