AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Asia Cup 2022 Final: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಫೈನಲ್​ ಗೆಲ್ಲಲು ಸಾಧಾರಣ ಸವಾಲು

Women's Asia Cup 2022 Final: ಟೀಮ್ ಇಂಡಿಯಾ ಪರ ರೇಣುಕಾ ಸಿಂಗ್ 3 ಓವರ್​ಗಳಲ್ಲಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ ಹಾಗೂ ಸ್ನೇಹ್ ರಾಣಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

Women's Asia Cup 2022 Final: ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್: ಫೈನಲ್​ ಗೆಲ್ಲಲು ಸಾಧಾರಣ ಸವಾಲು
Team India
TV9 Web
| Edited By: |

Updated on: Oct 15, 2022 | 2:55 PM

Share

Women’s Asia Cup 2022 Final: ಬಾಂಗ್ಲಾದೇಶದ ಸಿಲ್ಹೆಟ್​ನಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್​ ಫೈನಲ್​ನಲ್ಲಿ ಭಾರತದ ವನಿತೆಯರ ವಿರುದ್ಧ ಶ್ರೀಲಂಕಾ (India W vs Srilanka W)  ಮಹಿಳಾ ತಂಡವು ಅತ್ಯಲ್ಪ ಮೊತ್ತ ಕಲೆಹಾಕಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕಿ ಚಾಮರಿ ಅಟ್ಟಾಪಟ್ಟು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಟೀಮ್ ಇಂಡಿಯಾ ವನಿತೆಯರ ಸಾಂಘಿಕ ದಾಳಿಯಿಂದಾಗಿ ಲಂಕಾ ತಂಡವು ಉತ್ತಮ ಆರಂಭ ಪಡೆಯಲು ಸಾಧ್ಯವಾಗಿರಲಿಲ್ಲ. ರನೌಟ್ ಮೂಲಕ ಮೊದಲ ವಿಕೆಟ್ ಪಡೆದ ಟೀಮ್ ಇಂಡಿಯಾ ಆ ಬಳಿಕ ಅತ್ಯುತ್ತಮ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು. ಪರಿಣಾಮ ಕೇವಲ 18 ರನ್​ಗಳಿಗೆ ಶ್ರೀಲಂಕಾ ತಂಡವು ಅಗ್ರ ಕ್ರಮಾಂಕದ 6 ಬ್ಯಾಟರ್​ಗಳನ್ನು ಕಳೆದುಕೊಂಡಿತು.

ಚಮೇರಿ ಅಟ್ಟಾಪಟ್ಟು (8), ಅನುಷ್ಕಾ (2), ಮಾದವಿ (1), ನಿಲಾಕ್ಷಿ (6), ಹಾಸಿನಿ (0) ಹಾಗು ಕವಿಶಾ (1) ಒಂದಂಕಿ ರನ್​ಗಳಿಸಿ ಪೆವಿಲಿಯನ್​ಗೆ ಮರಳಿದರು. ಇತ್ತ ಭರ್ಜರಿ ದಾಳಿ ಸಂಘಟಿಸಿದ ರೇಣುಕಾ ಸಿಂಗ್ 3 ವಿಕೆಟ್ ಉರುಳಿಸಿ ಮಿಂಚಿದ್ದರು. ಪರಿಣಾಮ ಮೊದಲ 10 ಓವರ್​ಗಳಲ್ಲಿ ಶ್ರೀಲಂಕಾ ತಂಡದ ಮೊತ್ತ 30 ರ ಗಡಿದಾಟಿರಲಿಲ್ಲ.

ಅಂತಿಮ ಹಂತದಲ್ಲಿ ರಣಸಿಂಘೆ ಅಜೇಯ 18 ಹಾಗೂ ಅಚಿನಿ ಅಜೇಯ 6 ರನ್​ ಬಾರಿಸುವ ಮೂಲಕ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ ತಂಡದ ಮೊತ್ತವನ್ನು 69 ಕ್ಕೆ ತಂದು ನಿಲ್ಲಿಸಿದರು.

ಟೀಮ್ ಇಂಡಿಯಾ ಪರ ರೇಣುಕಾ ಸಿಂಗ್ 3 ಓವರ್​ಗಳಲ್ಲಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರೆ, ರಾಜೇಶ್ವರಿ ಗಾಯಕ್ವಾಡ್ ಹಾಗೂ ಸ್ನೇಹ್ ರಾಣಾ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.

ಭಾರತ ಪ್ಲೇಯಿಂಗ್ 11: ಶಫಾಲಿ ವರ್ಮಾ , ಸ್ಮೃತಿ ಮಂಧಾನ , ಜೆಮಿಮಾ ರಾಡ್ರಿಗಸ್ , ದಯಾಲನ್ ಹೇಮಲತಾ , ಹರ್ಮನ್​ಪ್ರೀತ್ ಕೌರ್ (ನಾಯಕಿ) , ದೀಪ್ತಿ ಶರ್ಮಾ , ರಿಚಾ ಘೋಷ್ , ಪೂಜಾ ವಸ್ತ್ರಾಕರ್ , ಸ್ನೇಹ ರಾಣಾ , ರೇಣುಕಾ ಸಿಂಗ್ , ರಾಜೇಶ್ವರಿ ಗಾಯಕ್ವಾಡ್

ಶ್ರೀಲಂಕಾ ಪ್ಲೇಯಿಂಗ್ 11:  ಚಾಮರಿ ಅಟ್ಟಾಪಟ್ಟು (ನಾಯಕಿ) , ಅನುಷ್ಕಾ ಸಂಜೀವನಿ, ಹರ್ಷಿತಾ ಮಾದವಿ , ಹಾಸಿನಿ ಪೆರೇರಾ , ನೀಲಾಕ್ಷಿ ಡಿ ಸಿಲ್ವಾ , ಕವಿಶಾ ದಿಲ್ಹಾರಿ , ಮಲ್ಶಾ ಶೆಹಾನಿ , ಓಷದಿ ರಣಸಿಂಗ್ , ಸುಗಂದಿಕಾ ಕುಮಾರಿ , ಇನೋಕಾ ರಣವೀರ , ಅಚಿನಿ ಕುಲಸ್.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!