AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Asia Cup 2024 Final: ಹರ್ಮನ್​ ಪಡೆಗೆ ಮುಳುವಾದ ಅತಿ ಆತ್ಮವಿಶ್ವಾಸ; ಶ್ರೀಲಂಕಾಗೆ ಏಷ್ಯನ್ ಕಿರೀಟ

Women's Asia Cup 2024 Final: ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸುವುದರೊಂದಿಗೆ ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತೀವ್ರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಅತಿಯಾದ ಆತ್ಮವಿಶ್ವಾಸ, ಕಳಪೆ ನಾಯಕತ್ವ, ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿದ್ದು ಹಾಗೂ ಕಳಪೆ ಬೌಲಿಂಗ್ ಟೀಂ ಇಂಡಿಯಾದ ಸೋಲಿಗೆ ಪ್ರಮುಖ ಕಾರಣವಾಯಿತು.

Women's Asia Cup 2024 Final: ಹರ್ಮನ್​ ಪಡೆಗೆ ಮುಳುವಾದ ಅತಿ ಆತ್ಮವಿಶ್ವಾಸ; ಶ್ರೀಲಂಕಾಗೆ ಏಷ್ಯನ್ ಕಿರೀಟ
ಶ್ರೀಲಂಕಾ ಮಹಿಳಾ ತಂಡ
ಪೃಥ್ವಿಶಂಕರ
|

Updated on:Jul 28, 2024 | 6:40 PM

Share

ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಿನ ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡ ರೋಚಕ ಜಯ ಸಾಧಿಸುವುದರೊಂದಿಗೆ ಏಷ್ಯಾಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ತೀವ್ರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಅತಿಯಾದ ಆತ್ಮವಿಶ್ವಾಸ, ಕಳಪೆ ನಾಯಕತ್ವ, ಸುಲಭ ಕ್ಯಾಚ್​ಗಳನ್ನು ಕೈಚೆಲ್ಲಿದ್ದು ಹಾಗೂ ಕಳಪೆ ಬೌಲಿಂಗ್ ಟೀಂ ಇಂಡಿಯಾದ ಸೋಲಿಗೆ ಪ್ರಮುಖ ಕಾರಣವಾಯಿತು. ಇಡೀ ಪಂದ್ಯದುದ್ದಕ್ಕೂ ಗೆಲುವಿಗಾಗಿ ಹೋರಾಡಿದ ಶ್ರೀಲಂಕಾ ತಂಡ, ಭಾರತ ಮತ್ತು ಬಾಂಗ್ಲಾದೇಶದ ನಂತರ ಏಷ್ಯಾಕಪ್ ಗೆದ್ದ ಮೂರನೇ ಮಹಿಳಾ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 6 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಲಂಕಾ 19ನೇ ಓವರ್​ನಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

165 ರನ್‌ಗಳ ಟಾರ್ಗೆಟ್

ಈ ಪಂದ್ಯದಲ್ಲಿ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದರು. ಆದರೆ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಕೇವಲ 16 ರನ್ ಗಳಿಸಲಷ್ಟೇ ಶಕ್ತರಾದರು. ಆದರೂ ಸ್ಮೃತಿ ಮಂಧಾನ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ, 47 ಎಸೆತಗಳಲ್ಲಿ 60 ರನ್​ಗಳ ಕಾಣಿಕೆ ನೀಡಿದರು. ಅವರ ಈ ಇನ್ನಿಂಗ್ಸ್​ನಲ್ಲಿ 10 ಬೌಂಡರಿಗಳು ಸೇರಿದ್ದವು. ಕೊನೆಯಲ್ಲಿ ರಿಚಾ ಘೋಷ್ ಕೂಡ ಕೇವಲ 14 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 30 ರನ್​ಗಳ ಕಾಣಿಕೆ ನೀಡಿದರು. ಉಳಿದಂತೆ ಜೆಮಿಮಾ ರೋಡ್ರಿಗಸ್ 16 ಎಸೆತಗಳಲ್ಲಿ 29 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು.

ಗೆಲುವಿನ ಹೋರಾಟ ನೀಡಿದ ಲಂಕಾ

166 ರನ್‌ಗಳಿಗೆ ಉತ್ತರವಾಗಿ ಶ್ರೀಲಂಕಾ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದರು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕೇವಲ 7 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಇದಾದ ನಂತರ ಎರಡನೇ ವಿಕೆಟ್​ಗೆ ಅರ್ಧಶತಕಕ್ಕೂ ಹೆಚ್ಚಿನ ಜೊತೆಯಾಟ ಬಂತು. ಶ್ರೀಲಂಕಾ ಪರ ನಾಯಕಿ ಚಾಮರಿ ಅಟಪಟ್ಟು 43 ಎಸೆತಗಳಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಹಾಯದಿಂದ 61 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇವರಲ್ಲದೆ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹರ್ಷಿತಾ ಕೂಡ 51 ಎಸೆತಗಳಲ್ಲಿ 69 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಎರಡನೇ ಬಾರಿ ಫೈನಲ್ ಸೋಲು

ಇದು ಮಹಿಳೆಯರ ಏಷ್ಯಾಕಪ್‌ನ 9 ನೇ ಆವೃತ್ತಿಯಾಗಿದ್ದು, ಈ ಟೂರ್ನಿಯ ಪ್ರತಿ ಫೈನಲ್‌ ಆಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಇದಕ್ಕೂ ಮುನ್ನ ಆಡಿದ 8 ಏಷ್ಯಾಕಪ್ ಫೈನಲ್ ಪಂದ್ಯಗಳಲ್ಲಿ 7 ಬಾರಿ ಏಷ್ಯಾಕಪ್ ಪ್ರಶಸ್ತಿ ಗೆದ್ದಿದ್ದ ಭಾರತ ಒಮ್ಮೆ ಮಾತ್ರ ಸೋಲನ್ನು ಎದುರಿಸಬೇಕಾಯಿತು. 2018ರಲ್ಲಿ ಬಾಂಗ್ಲಾದೇಶ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿತ್ತು. ಇದಾದ ನಂತರ ಟೀಂ ಇಂಡಿಯಾ ಏಷ್ಯಾಕಪ್ ಪ್ರಶಸ್ತಿ ಗೆಲ್ಲುವುದನ್ನು ತಪ್ಪಿಸಿಕೊಂಡಿರುವುದು ಇದು ಎರಡನೇ ಬಾರಿ. ಈ ಪಂದ್ಯವನ್ನೂ ಸುಲಭವಾಗಿ ಗೆಲ್ಲಬಹುದಾಗಿದ್ದ ಟೀಂ ಇಂಡಿಯಾ ತಾನು ಮಾಡಿಕೊಂಡ ತಪ್ಪುಗಳಿಂದಲೇ ಸೋಲಿನ ಬೆಲೆ ತೆರಬೇಕಾಯಿತು.

Published On - 6:26 pm, Sun, 28 July 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?