AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Asia Cup Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ

Women's Asia Cup 2024: ಈ ಬಾರಿಯ ಮಹಿಳಾ ಏಷ್ಯಾಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಟಿ20 ಸ್ವರೂಪದಲ್ಲಿ ನಡೆಯಲಿರುವ ಈ ಪಂದ್ಯಗಳಿಗೆ ಶ್ರೀಲಂಕಾದ ಡಂಬುಲ್ಲಾದ ಕ್ರಿಕೆಟ್​ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇನ್ನು ಈ ಟೂರ್ನಿಯಲ್ಲಿ 6ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

Women's Asia Cup Schedule: ಏಷ್ಯಾಕಪ್ ವೇಳಾಪಟ್ಟಿ ಪ್ರಕಟ
Asia Cup 2024
TV9 Web
| Edited By: |

Updated on: Mar 27, 2024 | 10:50 AM

Share

ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮಹಿಳಾ ಏಷ್ಯಾಕಪ್ (Asia Cup 2024) ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಈ ಬಾರಿಯ ಏಷ್ಯಾಕಪ್​ ಜುಲೈ 19 ರಿಂದ ಶುರುವಾಗಲಿದೆ. ಟಿ20 ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ಜುಲೈ 28 ರಂದು ನಡೆಯಲಿದೆ. ಎಂಟು ತಂಡಗಳ ನಡುವಣ ಈ ಕದನದ ಮೊದಲ ದಿನವೇ ಭಾರತ ತಂಡ ಕೂಡ ಕಣಕ್ಕಿಳಿಯಲಿದೆ.

ಜುಲೈ 19 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನೇಪಾಳ ತಂಡಗಳು ಮುಖಾಮಜಖಿಯಾಗಲಿದೆ.  ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲಿ ಯುಎಇ ತಂಡವನ್ನು ಎದುರಿಸಲಿದೆ. ಹಾಗೆಯೇ ಜುಲೈ 21 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯದಲ್ಲಿ ಸಾಂಪ್ರಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.

ಇದನ್ನೂ ಓದಿ: IPL 2024: ಹಾರ್ದಿಕ್ ಪಾಂಡ್ಯರ ಚಿಂತೆ ಹೆಚ್ಚಿಸಿದ ಶಿವಂ ದುಬೆ

2 ಗ್ರೂಪ್​:

ಈ ಬಾರಿಯ ಏಷ್ಯಾಕಪ್​ನಲ್ಲಿ ಕಣಕ್ಕಿಳಿಯುವ 8 ತಂಡಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಮೊದಲ ಗ್ರೂಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಬಲಿಷ್ಠವಾಗಿ ಕಾಣಿಸಿಕೊಂಡರೆ, ಎರಡನೇ ಗ್ರೂಪ್​ನಲ್ಲಿ ಬಾಂಗ್ಲಾದೇಶ್ ಶ್ರೀಲಂಕಾ ತಂಡಗಳಿವೆ.

ಗ್ರೂಪ್ A ಗ್ರೂಪ್ B
ಭಾರತ ಬಾಂಗ್ಲಾದೇಶ್
ಪಾಕಿಸ್ತಾನ್ ಶ್ರೀಲಂಕಾ
ಯುಎಇ ಮಲೇಷ್ಯಾ
ನೇಪಾಳ ಥಾಯ್ಲೆಂಡ್

ಏಷ್ಯಾಕಪ್ 2024 ವೇಳಾಪಟ್ಟಿ:

ದಿನಾಂಕ ಪಂದ್ಯ 1 ಪಂದ್ಯ 2
ಜುಲೈ 19, 2024 ಪಾಕಿಸ್ತಾನ್ vs ನೇಪಾಳ ಭಾರತ vs ಯುಎಇ
ಜುಲೈ 20, 2024 ಮಲೇಷ್ಯಾ vs ಥಾಯ್ಲೆಂಡ್ ಶ್ರೀಲಂಕಾ vs ಬಾಂಗ್ಲಾದೇಶ್
ಜುಲೈ 21, 2024 ನೇಪಾಳ vs ಯುಎಇ ಭಾರತ vs ಪಾಕಿಸ್ತಾನ್
ಜುಲೈ 22 2024 ಶ್ರೀಲಂಕಾ vs ಮಲೇಷ್ಯಾ ಬಾಂಗ್ಲಾದೇಶ್ vs ಥಾಯ್ಲೆಂಡ್
ಜುಲೈ 23, 2024 ಪಾಕಿಸ್ತಾನ್ vs ಯುಎಇ ಭಾರತ vs ನೇಪಾಳ
ಜುಲೈ 24, 2024 ಬಾಂಗ್ಲಾದೇಶ್ vs ಮಲೇಷ್ಯಾ ಶ್ರೀಲಂಕಾ vs ಥಾಯ್ಲೆಂಡ್
ಜುಲೈ 26, 2024 ಮೊದಲ ಸೆಮಿಫೈನಲ್ ಎರಡನೇ ಸೆಮಿಫೈನಲ್
ಜುಲೈ 28, 2024 ಫೈನಲ್​
Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​