AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್ ತಂಡವನ್ನು ಲಘುವಾಗಿ ಪರಿಗಣಿಸಿ ವಿಕೆಟ್ ಕೈಚೆಲ್ಲಿದ ಸ್ಮೃತಿ

Women's Asia Cup 2026: ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಭಾರತ ಮತ್ತು ಥೈಲ್ಯಾಂಡ್ ಮಹಿಳಾ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಸೋತು ಬ್ಯಾಟಿಂಗ್‌ಗಿಳಿದ ಭಾರತ ಸ್ಮೃತಿ ಮಂಧಾನ ಅವರ ತ್ವರಿತ 19 ರನ್‌ಗಳ ಬಳಿಕ ರನೌಟ್‌ನಿಂದ ವಿಕೆಟ್ ಕಳೆದುಕೊಂಡಿತು. ಶಫಾಲಿ ವರ್ಮಾ ಮತ್ತು ಪ್ರತೀಕಾ ತಂಡಕ್ಕೆ ಉತ್ತಮ ಬೆಂಬಲ ನೀಡಿದ್ದು, ಮೂರು ಓವರ್‌ಗಳಲ್ಲಿ 38 ರನ್ ಕಲೆಹಾಕುವ ಮೂಲಕ ಭಾರತ ಬಲಿಷ್ಠ ಆರಂಭ ಪಡೆದಿದೆ.

ಥೈಲ್ಯಾಂಡ್ ತಂಡವನ್ನು ಲಘುವಾಗಿ ಪರಿಗಣಿಸಿ ವಿಕೆಟ್ ಕೈಚೆಲ್ಲಿದ ಸ್ಮೃತಿ
Smriti Mandhana
ಪೃಥ್ವಿಶಂಕರ
|

Updated on:Aug 30, 2026 | 8:43 PM

Share

ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ(Women’s Asia Cup 2026) ಭಾರತ ಮತ್ತು ಥೈಲ್ಯಾಂಡ್ ಮಹಿಳಾ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಟೂರ್ನಿಯಲ್ಲಿ ಭಾರತ ತಂಡಕ್ಕೆ ಇದು ಮೊದಲ ಪಂದ್ಯವಾದರೆ, ಥೈಲ್ಯಾಂಡ್ ತಂಡಕ್ಕೆ ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಚೀನಾ ತಂಡವನ್ನು ಮಣಿಸಿರುವ ಥೈಲ್ಯಾಂಡ್ ಗೆಲುವಿನ ಆತ್ಮವಿಶ್ವಾಸದೊಂದಿಗೆ ಟೀಂ ಇಂಡಿಯಾ ವಿರುದ್ಧ ಕಣಕ್ಕಿಳಿದಿದೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಬ್ಯಾಟಿಂಗ್‌ ಮಾಡುತ್ತಿದ್ದು, ಉಪನಾಯಕಿ ಸ್ಮೃತಿ ಮಂಧಾನ (Smriti Mandhana) ಅವರ ವಿಕೆಟ್ ಕಳೆದುಕೊಂಡಿದೆ.

ಭಾರತಕ್ಕೆ ಸ್ಫೋಟಕ ಆರಂಭ

ಟೀಂ ಇಂಡಿಯಾ ಪರ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಇನ್ನಿಂಗ್ಸ್ ಆರಂಭಿಸಿದರು. ಸ್ಮೃತಿ ಮೊದಲ ಓವರ್​ನಲ್ಲೇ 3 ಬೌಂಡರಿಗಳನ್ನು ಬಾರಿಸುವ ಮೂಲಕ ಉತ್ತಮ ಆರಂಭ ಪಡೆದುಕೊಂಡರು. ಎರಡನೇ ಓವರ್​ನಲ್ಲಿ ಶಫಾಲಿ ವರ್ಮಾ 2 ಬೌಂಡರಿಗಳನ್ನು ಬಾರಿಸಿದರು. ಮೂರನೇ ಓವರ್​ನಲ್ಲಿ ಸ್ಮೃತಿ 1 ಬೌಂಡರ ಬಾರಿಸಿದರೆ, ಶಫಾಲಿ 1 ಸಿಕ್ಸರ್ ಬಾರಿಸಿದರು. ಹೀಗಾಗಿ ಟೀಂ ಇಂಡಿಯಾ ಮೊದಲ ಮೂರು ಓವರ್​ಗಳಲ್ಲಿ 38 ರನ್ ಕಲೆಹಾಕಿತು. ಆದರೆ ಇದೇ ಮೂರನೇ ಓವರ್​ನ ಕೊನೆಯ ಎಸೆತದಲ್ಲಿ ಸ್ಮೃತಿ ಮಂಧಾನ ತೊರಿದ ನಿರ್ಲಕ್ಷ್ಯತನ ಅವರ ವಿಕೆಟ್ ಉರುಳುವಂತೆ ಮಾಡಿತು.

ರನೌಟ್​ಗೆ ಬಲಿಯಾದ ಸ್ಮೃತಿ

ಮೂರನೇ ಓವರ್​ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಶಫಾಲಿ, ಕೊನೆಯ ಎಸೆತವನ್ನು ಲಾಂಗ್ ಆನ್ ಕಡೆಗೆ ಆಡಿ ರನ್​ಗಾಗಿ ಓಡಿದರು. ಇಬ್ಬರು ಮೊದಲ ರನ್ ಅನ್ನು ಸುಲಭವಾಗಿ ಪೂರ್ಣಗೊಳಿಸಿದರು. ಇತ್ತ ಮೊದಲ ರನ್ ವೇಗವಾಗಿ ಓಡಿದ ಸ್ಮೃತಿ ಎರಡನೇ ರನ್​ಗಾಗಿ ಓಡಲು ಆರಂಭಿಸಿದರು. ಆದರೆ ಲಾಂಗ್ ಆನ್​ನಿಂದ ಥೈಲ್ಯಾಂಡ್ ಫಿಲ್ಡರ್ ನೇರ ಎಸೆತದಲ್ಲಿ ತನ್ನನ್ನು ರನೌಟ್ ಮಾಡುತ್ತಾರೆ ಎಂಬುದನ್ನು ಕನಸಲ್ಲೂ ಊಹಿಸದ ಮಂಧಾನ ಎರಡನೇ ರನ್ ಅನ್ನು ಕೊಂಚ ನಿಧಾನವಾಗಿ ಓಡಿದರು. ಇದರ ಪರಿಣಾಮವಾಗಿ ಮಂಧಾನ ರನೌಟ್​ಗೆ ಬಲಿಯಾಗಿ ತಮ್ಮ ಇನ್ನಿಂಗ್ಸ್ ಮುಗಿಸಬೇಕಾಯಿತು.

ಶಫಾಲಿ ಅರ್ಧಶತಕ

ಔಟಾಗುವುದಕ್ಕೂ ಮುನ್ನ ಸ್ಮೃತಿ ಮಂಧಾನ 10 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 19 ರನ್ ಬಾರಿಸಿದ್ದರು. ಸ್ಮೃತಿ ಔಟಾದ ಬಳಿಕ ಬಂದ ಪ್ರತೀಕಾ, ಶಫಾಲಿಗೆ ಉತ್ತಮ ಬೆಂಬಲ ನೀಡಿದರು. ಇವರಿಬ್ಬರು ಎರಡನೇ ವಿಕೆಟ್​ಗೆ ತಂಡವನ್ನು ಶತಕದ ಸಮೀಪಕ್ಕೆ ತಂದಿದ್ದಾರೆ. ಈ ಸುದ್ದಿ ಬರೆಯುವ ಹೊತ್ತಿಗೆ 9 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 91 ರನ್ ಕಲೆಹಾಕಿದೆ. ಶಫಾಲಿ ವರ್ಮಾ 26 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದರೆ, ಪ್ರತೀಕಾ 9ನೇ ಓವರ್ ಕೊನೆಯ ಎಸೆತದಲ್ಲಿ ವಿಕೆಟ್ ಕಳೆದುಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:39 pm, Sun, 30 August 26

Follow Us
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಬಿಗ್​​ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
ಕೆಪಿಎಸ್​ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ಪಾವನಾ ಕೊರಳಿಗೆ ತಾಳಿ ಕಟ್ಟಿದ ನಟ ಚಿಕ್ಕಣ್ಣ; ಮದುವೆಯ ಸುಂದರ ವಿಡಿಯೋ ನೋಡಿ..
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ರಾಯರ ಮಠದಲ್ಲಿ ಗುರುರಾಯರ ಮಧ್ಯಾರಾಧನೆ: ವಿಶೇಷ ಪೂಜಾ ಕೈಂಕರ್ಯಗಳು
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ
ಪಾರ್ಕ್​ಗಳ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಕೆ ಖಂಡಿಸಿ ಮೈಸೂರಲ್ಲೂ ಪ್ರತಿಭಟನೆ