AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಾಟ್ ಎ ಕ್ಯಾಚ್…ಮಿಂಚಿನ ವೇಗದಲ್ಲಿ ಚೆಂಡನ್ನು ಹಿಡಿದ ಹರ್ಮನ್​ಪ್ರೀತ್

Harmanpreet Kaur: ಮೊದಲು ಬ್ಯಾಟ್ ಮಾಡಿದ ಸೂಪರ್ ನೋವಾಸ್ ಪರ ನಾಯಕಿ ಹರ್ಮನ್ 7 ಬೌಂಡರಿ ಹಾಗೂ 3 ಸಿಕ್ಸ್​ಗಳೊಂದಿಗೆ 71 ರನ್​ ಸಿಡಿಸಿದ್ದರು.

Viral Video: ವಾಟ್ ಎ ಕ್ಯಾಚ್...ಮಿಂಚಿನ ವೇಗದಲ್ಲಿ ಚೆಂಡನ್ನು ಹಿಡಿದ ಹರ್ಮನ್​ಪ್ರೀತ್
Harmanpreet Kaur
TV9 Web
| Edited By: |

Updated on: May 25, 2022 | 3:28 PM

Share

ಮಹಿಳಾ ಟಿ20 ಚಾಲೆಂಜ್​ನ 2ನೇ ಪಂದ್ಯದಲ್ಲಿ ವೆಲೋಸಿಟಿ ಹಾಗೂ ಹಾಗೂ ಸೂಪರ್​ನೋವಾಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಯುವ ಆರಂಭಿಕರಾದ ಶಫಾಲಿ ವರ್ಮಾ (51) ಮತ್ತು ಲಾರಾ ವೂಲ್ವಾರ್ಡ್ಟ್ (ಔಟಾಗದೆ 51) ಅವರ ನೆರವಿನಿಂದ ವೆಲೋಸಿಟಿ ತಂಡವು ಸೂಪರ್​ನೋವಾಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಶಫಾಲಿ ಅವರ 33 ಎಸೆತಗಳ ಇನ್ನಿಂಗ್ಸ್‌ನಲ್ಲಿ ಒಂದು ಸಿಕ್ಸರ್ ಮತ್ತು ಒಂಬತ್ತು ಬೌಂಡರಿಗಳನ್ನು ಬಾರಿಸಿದರೆ, ವೂಲ್ವಾರ್ಡ್ ಅಜೇಯ 35 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 1 ಸಿಕ್ಸರ್ ಬಾರಿಸಿ ಮಿಂಚಿದರು. ಇನ್ನು ಈ ಪಂದ್ಯದದ ಸೋಲಿನ ಹೊರತಾಗಿಯೂ ಸೂಪರ್‌ನೋವಾಸ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಹಿಡಿದ ಕ್ಯಾಚ್‌ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.

ವೆಲೋಸಿಟಿ ತಂಡದ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ, ಸೂಪರ್​ನೋವಾಸ್ ಬೌಲರ್ ಡಿಯಾಂಡ್ರಾ ಡಾಟಿನ್ ಆಫ್-ಸ್ಟಂಪ್‌ನ ಹೊರಗೆ ಶಾರ್ಟ್ ಬಾಲ್ ಬೌಲ್ ಮಾಡಿದರು. ಈ ಚೆಂಡನ್ನು ಶಫಾಲಿ ವರ್ಮಾ ಬಲವಾಗಿ ಹೊಡೆದರು. ಚೆಂಡು ಹರ್ಮನ್‌ಪ್ರೀತ್ ಕೌರ್ ಫೀಲ್ಡಿಂಗ್ ಮಾಡುತ್ತಿದ್ದ ಶಾರ್ಟ್ ಥರ್ಡ್ ಮ್ಯಾನ್ ಕಡೆಗೆ ಚಿಮ್ಮಿತು. ಕ್ಷಣಾರ್ಧದಲ್ಲೇ ಹರ್ಮನ್‌ಪ್ರೀತ್ ಗಾಳಿಯಲ್ಲಿ ಡೈವ್ ಮಾಡುವ ಮೂಲಕ ಅದ್ಭುತವಾಗಿ ಕ್ಯಾಚ್ ಹಿಡಿದರು. ಹರ್ಮನ್‌ಪ್ರೀತ್ ಕೌರ್​ ಅವರ ಈ ಅದ್ಭುತ ಕ್ಯಾಚ್‌ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇನ್ನು ಈ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ 51 ಎಸೆತಗಳಲ್ಲಿ 71 ರನ್ ಬಾರಿಸಿ ಮಿಂಚಿದ್ದರು. ಮೊದಲು ಬ್ಯಾಟ್ ಮಾಡಿದ ಸೂಪರ್ ನೋವಾಸ್ ಪರ ನಾಯಕಿ ಹರ್ಮನ್ 7 ಬೌಂಡರಿ ಹಾಗೂ 3 ಸಿಕ್ಸ್​ಗಳೊಂದಿಗೆ 71 ರನ್​ ಸಿಡಿಸಿದ್ದರು. ಈ ಅರ್ಧಶತಕದ ನೆರವಿನಿಂದ ಸೂಪರ್​ನೋವಾಸ್ ಐದು ವಿಕೆಟ್‌ ಕಳೆದುಕೊಂಡು 150 ರನ್ ಗಳಿಸಿತು. ಈ ಗುರಿಯನ್ನು ವೆಲೋಸಿಟಿ ತಂಡ 10 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್‌ ಕಳೆದುಕೊಂಡು ಸುಲಭವಾಗಿ ಚೇಸ್ ಮಾಡಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ