AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ದುರ್ಬಲ ಸ್ಕಾಟ್ಲೆಂಡ್ ಮುಂದೆ ಮಂಡಿಯೂರಿದ ಪಾಕಿಸ್ತಾನ

T20 World Cup 2024: ಮಹಿಳಾ ಟಿ20 ವಿಶ್ವಕಪ್ ಮುಂದಿನ ತಿಂಗಳು ಅಕ್ಟೋಬರ್ 3 ರಿಂದ ಯುಎಇನಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಅದರಂತೆ ನಡೆದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ, ಕ್ರಿಕೆಟ್ ಶಿಶು ಸ್ಕಾಟ್ಲೆಂಡ್ ಮಹಿಳಾ ತಂಡದ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದೆ.

T20 World Cup 2024: ದುರ್ಬಲ ಸ್ಕಾಟ್ಲೆಂಡ್ ಮುಂದೆ ಮಂಡಿಯೂರಿದ ಪಾಕಿಸ್ತಾನ
ಪಾಕಿಸ್ತಾನ- ಸ್ಕಾಟ್ಲೆಂಡ್
ಪೃಥ್ವಿಶಂಕರ
|

Updated on: Sep 29, 2024 | 4:47 PM

Share

ಮಹಿಳಾ ಟಿ20 ವಿಶ್ವಕಪ್ ಮುಂದಿನ ತಿಂಗಳು ಅಕ್ಟೋಬರ್ 3 ರಿಂದ ಯುಎಇನಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಅದರಂತೆ ನಡೆದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ, ಕ್ರಿಕೆಟ್ ಶಿಶು ಸ್ಕಾಟ್ಲೆಂಡ್ ಮಹಿಳಾ ತಂಡದ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದೆ. ಟಿ20 ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ತಂಡ ಸ್ಕಾಟ್ಲೆಂಡ್‌ನಂತಹ ದುರ್ಬಲ ತಂಡದ ವಿರುದ್ಧ ಸೋತಿರುವುದು ತಂಡಕ್ಕೆ ಆರಂಭಿಕ ಆಘಾತ ನೀಡಿದೆ.

ಈ ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿತು. ತಂಡದ ಪರ ಅಗ್ರ ಕ್ರಮಾಂಕ ರನ್ ಕಲೆಹಾಕುವಲ್ಲಿ ಎಡವಿತು. ಇದರಿಂದಾಗಿ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ತಂಡದ ಪರ ಹೋರಾಟದ ಇನ್ನಿಂಗ್ಸ್ ಕಟ್ಟಿದ ಮುನಿಬಾ ಮತ್ತು ಒಮೈಮಾ ತಂಡಕ್ಕೆ ಉತ್ತಮ ಜೊತೆಯಾಟ ನೀಡಿದರು. ಈ ಪಂದ್ಯದಲ್ಲಿ ಒಮೈಮಾ 30 ರನ್ ಮತ್ತು ಮುನಿಬಾ 27 ರನ್ ಗಳಿಸಿದರು.

ಸುಲಭವಾಗಿ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್

133 ರನ್​ಗಳ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡು 18 ಓವರ್​ಗಳಲ್ಲೇ ಸುಲಭವಾಗಿ ಜಯದ ನಗೆ ಬೀರಿತು. ಸ್ಕಾಟ್ಲೆಂಡ್ ಪರ ಅದ್ಭುತ ಬ್ಯಾಟಿಂಗ್ ಮಾಡಿದ ಸಾರಾ 52 ಎಸೆತಗಳಲ್ಲಿ 60 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರೆ, ಹೋರ್ಲಿ ಕೂಡ 48 ರನ್​ಗಳ ಗೆಲುವಿನ ಕಾಣಿಕೆ ನೀಡಿದರು.

ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 8 ಬೌಲರ್‌ಗಳನ್ನು ಬಳಸಿತು. ಆದರೆ, ಅದರಲ್ಲಿ ಒಬ್ಬರಿಗೆ ಮಾತ್ರ ಏಕೈಕ ವಿಕೆಟ್ ಪಡೆಯಲು ಸಾಧ್ಯವಾಯಿತು. ಉಳಿದ ಇನ್ನೊಂದು ವಿಕೆಟ್ ರನೌಟ್‌ನಿಂದ ಸಿಕ್ಕಿತು. ಒಟ್ಟಿನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಆಡಿದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಮಾತ್ರವಲ್ಲದೆ ಬೌಲಿಂಗ್ ಕೂಡ ವಿಫಲವಾಗಿದೆ.

ಇಂದು ಟೀಂ ಇಂಡಿಯಾ ಪಂದ್ಯ

ಭಾರತ ಮಹಿಳಾ ಕ್ರಿಕೆಟ್ ತಂಡ ಇಂದು ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿದೆ. ಹರ್ಮನ್‌ಪ್ರೀತ್ ಕೌರ್ ಪಡೆ ಇಂದು ವೆಸ್ಟ್ ಇಂಡೀಸ್‌ ವಿರುದ್ಧ ಸೆಣಸಲಿದೆ. ಈ ಅಭ್ಯಾಸ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್‌ಗೆ ತನ್ನ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸಲು ಬಯಸುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ