AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಏಕದಿನ ವಿಶ್ವಕಪ್​ನಲ್ಲಿ ಒಂದೇ ದಿನ 3 ಪಂದ್ಯಗಳು..!

World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

World Cup 2023: ಏಕದಿನ ವಿಶ್ವಕಪ್​ನಲ್ಲಿ ಒಂದೇ ದಿನ 3 ಪಂದ್ಯಗಳು..!
IND vs PAK
TV9 Web
| Edited By: |

Updated on: Jul 31, 2023 | 6:11 PM

Share

World Cup 2023: ಏಕದಿನ ವಿಶ್ವಕಪ್​ಗಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಕ್ರಿಕೆಟ್ ಮಹಾಸಮರದ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ ಅಕ್ಟೋಬರ್ 5 ರಂದು ಟೂರ್ನಿಗೆ ಚಾಲನೆ ಸಿಗಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ. ಆದರೆ ಇದೀಗ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ದಿನಾಂಕ ಬದಲಾಗುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 15 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೈದಾನದಲ್ಲಿ ನಡೆಯಬೇಕಿರುವ ಭಾರತ-ಪಾಕಿಸ್ತಾನ್ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಆಯೋಜಿಸಲಿದ್ದಾರೆ. ಅಂದರೆ ಅಕ್ಟೋಬರ್ 14 ರಂದು ಇಂಡೊ-ಪಾಕ್ ಹೈವೋಲ್ಟೇಜ್ ಕದನ ನಡೆಯಲಿದೆ.

ಇದಕ್ಕೆ ಮುಖ್ಯ ಕಾರಣ ಅಕ್ಟೋಬರ್ 15 ರಿಂದ ನವರಾತ್ರಿ ಶುರುವಾಗುತ್ತಿರುವುದು. ಅದೇ ದಿನದಂದು ಭಾರತ-ಪಾಕಿಸ್ತಾನ್ ಮ್ಯಾಚ್ ಕೂಡ ನಡೆದರೆ ಸೂಕ್ತ ಪೊಲೀಸ್​ ವ್ಯವಸ್ಥೆ ಕಲ್ಪಿಸಲು ತೊಡಕುಂಟಾಗುತ್ತದೆ ಎಂದು ಅಹಮದಾಬಾದ್ ಪೊಲೀಸ್ ಇಲಾಖೆ ತಿಳಿಸಿದೆ.

ಹೀಗಾಗಿ ಭಾನುವಾರದ ಬದಲು ಶನಿವಾರ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅಂದರೆ ಭಾರತ-ಪಾಕಿಸ್ತಾನ್ ಅಕ್ಟೋಬರ್ 14 ರಂದು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಒಂದೇ ದಿನ 3 ಪಂದ್ಯಗಳು:

ಭಾರತ-ಪಾಕಿಸ್ತಾನ್ ತಂಡಗಳು ಅಕ್ಟೋಬರ್ 14 ರಂದು ಕಣಕ್ಕಿಳಿದರೆ, ಒಂದೇ ದಿನ ಮೂರು ಪಂದ್ಯಗಳು ಜರುಗಲಿದೆ. ಅಂದರೆ ಈಗಾಗಲೇ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 14 ರಂದು ಚೆನ್ನೈನಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಹಾಗೆಯೇ ಅದೇ ದಿನದಂದು ದೆಹಲಿಯಲ್ಲಿ ಅಫ್ಘಾನಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳು ಸೆಣಸಲಿದೆ. ಅಂದರೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯಗಳನ್ನು ಹೊರತುಪಡಿಸಿ ಇನ್ನೆರಡು ಪಂದ್ಯಗಳು ಕೂಡ ಅಕ್ಟೋಬರ್ 14 ರಂದೇ ನಡೆಯಲಿದೆ. ಹೀಗಾಗಿ ಅಕ್ಟೋಬರ್ 14 ರಂದು ಮೂರು ಪಂದ್ಯಗಳನ್ನು ಆಯೋಜಿಸಲಿದ್ದಾರಾ? ಅಥವಾ ಇದರಲ್ಲಿ ಒಂದು ಪಂದ್ಯದ ವೇಳಾಪಟ್ಟಿ ಬದಲಿಸಲಿದ್ದಾರಾ ಕಾದು ನೋಡಬೇಕಿದೆ.

Follow Us
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!