AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಏಕದಿನ ವಿಶ್ವಕಪ್​ನಲ್ಲಿ ಒಂದೇ ದಿನ 3 ಪಂದ್ಯಗಳು..!

World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

World Cup 2023: ಏಕದಿನ ವಿಶ್ವಕಪ್​ನಲ್ಲಿ ಒಂದೇ ದಿನ 3 ಪಂದ್ಯಗಳು..!
IND vs PAK
TV9 Web
| Edited By: |

Updated on: Jul 31, 2023 | 6:11 PM

Share

World Cup 2023: ಏಕದಿನ ವಿಶ್ವಕಪ್​ಗಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಕ್ರಿಕೆಟ್ ಮಹಾಸಮರದ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ ಅಕ್ಟೋಬರ್ 5 ರಂದು ಟೂರ್ನಿಗೆ ಚಾಲನೆ ಸಿಗಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ. ಆದರೆ ಇದೀಗ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ದಿನಾಂಕ ಬದಲಾಗುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 15 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೈದಾನದಲ್ಲಿ ನಡೆಯಬೇಕಿರುವ ಭಾರತ-ಪಾಕಿಸ್ತಾನ್ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಆಯೋಜಿಸಲಿದ್ದಾರೆ. ಅಂದರೆ ಅಕ್ಟೋಬರ್ 14 ರಂದು ಇಂಡೊ-ಪಾಕ್ ಹೈವೋಲ್ಟೇಜ್ ಕದನ ನಡೆಯಲಿದೆ.

ಇದಕ್ಕೆ ಮುಖ್ಯ ಕಾರಣ ಅಕ್ಟೋಬರ್ 15 ರಿಂದ ನವರಾತ್ರಿ ಶುರುವಾಗುತ್ತಿರುವುದು. ಅದೇ ದಿನದಂದು ಭಾರತ-ಪಾಕಿಸ್ತಾನ್ ಮ್ಯಾಚ್ ಕೂಡ ನಡೆದರೆ ಸೂಕ್ತ ಪೊಲೀಸ್​ ವ್ಯವಸ್ಥೆ ಕಲ್ಪಿಸಲು ತೊಡಕುಂಟಾಗುತ್ತದೆ ಎಂದು ಅಹಮದಾಬಾದ್ ಪೊಲೀಸ್ ಇಲಾಖೆ ತಿಳಿಸಿದೆ.

ಹೀಗಾಗಿ ಭಾನುವಾರದ ಬದಲು ಶನಿವಾರ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅಂದರೆ ಭಾರತ-ಪಾಕಿಸ್ತಾನ್ ಅಕ್ಟೋಬರ್ 14 ರಂದು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಒಂದೇ ದಿನ 3 ಪಂದ್ಯಗಳು:

ಭಾರತ-ಪಾಕಿಸ್ತಾನ್ ತಂಡಗಳು ಅಕ್ಟೋಬರ್ 14 ರಂದು ಕಣಕ್ಕಿಳಿದರೆ, ಒಂದೇ ದಿನ ಮೂರು ಪಂದ್ಯಗಳು ಜರುಗಲಿದೆ. ಅಂದರೆ ಈಗಾಗಲೇ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 14 ರಂದು ಚೆನ್ನೈನಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಹಾಗೆಯೇ ಅದೇ ದಿನದಂದು ದೆಹಲಿಯಲ್ಲಿ ಅಫ್ಘಾನಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳು ಸೆಣಸಲಿದೆ. ಅಂದರೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯಗಳನ್ನು ಹೊರತುಪಡಿಸಿ ಇನ್ನೆರಡು ಪಂದ್ಯಗಳು ಕೂಡ ಅಕ್ಟೋಬರ್ 14 ರಂದೇ ನಡೆಯಲಿದೆ. ಹೀಗಾಗಿ ಅಕ್ಟೋಬರ್ 14 ರಂದು ಮೂರು ಪಂದ್ಯಗಳನ್ನು ಆಯೋಜಿಸಲಿದ್ದಾರಾ? ಅಥವಾ ಇದರಲ್ಲಿ ಒಂದು ಪಂದ್ಯದ ವೇಳಾಪಟ್ಟಿ ಬದಲಿಸಲಿದ್ದಾರಾ ಕಾದು ನೋಡಬೇಕಿದೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ