AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲೇ ನಮಾಝ್: ಪಾಕ್ ಆಟಗಾರನ ವಿರುದ್ಧ ದೂರು ದಾಖಲು..!

World Cup 2023: ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನಡೆದ ನೆದರ್​ಲ್ಯಾಂಡ್ಸ್ ವಿರುದ್ಧ ವಿಶ್ವಕಪ್​ನ ಪಂದ್ಯದ ವೇಳೆ ಪಾಕಿಸ್ತಾನ್ ಆಟಗಾರ ಮೊಹಮ್ಮದ್ ರಿಝ್ವಾನ್ ಮೈದಾನದಲ್ಲೇ ನಮಾಝ್ ಮಾಡಿದ್ದರು. ಈ ಸಂಬಂಧ ಇದೀಗ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರಿಗೆ ವಿನೀತ್ ಜಿಂದಾಲ್ ದೂರು ಸಲ್ಲಿಸಿದ್ದಾರೆ.

ಮೈದಾನದಲ್ಲೇ ನಮಾಝ್: ಪಾಕ್ ಆಟಗಾರನ ವಿರುದ್ಧ ದೂರು ದಾಖಲು..!
Mohammad Rizwan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 16, 2023 | 10:12 PM

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಕ್ರಿಕೆಟ್ ಮೈದಾನದಲ್ಲಿ ನಮಾಝ್ ಮಾಡಿದ ಪಾಕಿಸ್ತಾನದ ಕ್ರಿಕೆಟಿಗ ಮೊಹಮ್ಮದ್ ರಿಝ್ವಾನ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗೆ ದೂರು ನೀಡಲಾಗಿದೆ. ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ ವಿನೀತ್ ಜಿಂದಾಲ್ ಎಂಬ ದೂರುದಾರ ಐಸಿಸಿಗೆ ಪತ್ರ ಬರೆದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಳ್ಳಲಾಗಿದೆ.

ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನಡೆದ ನೆದರ್​ಲ್ಯಾಂಡ್ಸ್ ವಿರುದ್ಧ ವಿಶ್ವಕಪ್​ನ ಪಂದ್ಯದ ವೇಳೆ ಪಾಕಿಸ್ತಾನ್ ಆಟಗಾರ ಮೊಹಮ್ಮದ್ ರಿಝ್ವಾನ್ ಮೈದಾನದಲ್ಲೇ ನಮಾಝ್ ಮಾಡಿದ್ದರು. ಈ ಸಂಬಂಧ ಇದೀಗ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರಿಗೆ ವಿನೀತ್ ಜಿಂದಾಲ್ ದೂರು ಸಲ್ಲಿಸಿದ್ದಾರೆ.

“ಕ್ರಿಕೆಟ್ ಮೈದಾನದಲ್ಲಿ ಮೊಹಮ್ಮದ್ ರಿಝ್ವಾನ್ ನಮಾಝ್ ಮಾಡಿರುವುದು ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಇದು ಉದ್ದೇಶಪೂರ್ವಕ ಧರ್ಮದ ಚಿತ್ರಣದ ಸಂಕೇತವಾಗಿದೆ” ದೂರಿನಲ್ಲಿ ತಿಳಿಸಲಾಗಿದೆ.

ಪಾಕ್ ಆಟಗಾರನ ಈ ನಡೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಮೊಹಮ್ಮದ್ ರಿಝ್ವಾನ್ ತನ್ನ ಧರ್ಮವನ್ನು ಪ್ರದರ್ಶಿಸುವ ಮೂಲಕ, ಉದ್ದೇಶಪೂರ್ವಕವಾಗಿ ಮುಸ್ಲಿಂ ಎಂಬ ಸಂದೇಶವನ್ನು ನೀಡುತ್ತಿದ್ದಾರೆ. ಇದು ಕ್ರೀಡೆಯ ಉತ್ಸಾಹವನ್ನು ಸೋಲಿಸುವಂತಹ ವಿಚಾರ.

ವಿರಾಮದ ಸಮಯದಲ್ಲಿ ತನ್ನ ತಂಡದ ಸಹ ಆಟಗಾರರು ಪಾನೀಯಕ್ಕಾಗಿ ಕಾಯುತ್ತಿರುವಾಗ ರಿಝ್ವಾನ್ ಮೈದಾನದ ನಡುವೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇಂತಹ ನಡೆಗಳಿಗೆ ಅವಕಾಶ ನೀಡಬಾರದು ಎಂದು ದೂರಿನಲ್ಲಿ ಹೇಳಲಾಗಿದೆ.

ಇದಲ್ಲದೆ ಮೊಹಮ್ಮದ್ ರಿಝ್ವಾನ್ ಶ್ರೀಲಂಕಾ ವಿರುದ್ಧ ಬಾರಿಸಿದ ಶತಕವನ್ನು ಗಾಜಾದ ಜನರಿಗೆ ಅರ್ಪಿಸಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರವನ್ನು ಕೂಡ ಸುಪ್ರೀಂ ಕೋರ್ಟ್​ ವಕೀಲ ವಿನೀತ್ ಜಿಂದಾಲ್ ತಮ್ಮ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು