AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲೇ ನಮಾಝ್: ಪಾಕ್ ಆಟಗಾರನ ವಿರುದ್ಧ ದೂರು ದಾಖಲು..!

World Cup 2023: ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನಡೆದ ನೆದರ್​ಲ್ಯಾಂಡ್ಸ್ ವಿರುದ್ಧ ವಿಶ್ವಕಪ್​ನ ಪಂದ್ಯದ ವೇಳೆ ಪಾಕಿಸ್ತಾನ್ ಆಟಗಾರ ಮೊಹಮ್ಮದ್ ರಿಝ್ವಾನ್ ಮೈದಾನದಲ್ಲೇ ನಮಾಝ್ ಮಾಡಿದ್ದರು. ಈ ಸಂಬಂಧ ಇದೀಗ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರಿಗೆ ವಿನೀತ್ ಜಿಂದಾಲ್ ದೂರು ಸಲ್ಲಿಸಿದ್ದಾರೆ.

ಮೈದಾನದಲ್ಲೇ ನಮಾಝ್: ಪಾಕ್ ಆಟಗಾರನ ವಿರುದ್ಧ ದೂರು ದಾಖಲು..!
Mohammad Rizwan
TV9 Web
| Edited By: |

Updated on: Oct 16, 2023 | 10:12 PM

Share

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಪಂದ್ಯದ ವೇಳೆ ಕ್ರಿಕೆಟ್ ಮೈದಾನದಲ್ಲಿ ನಮಾಝ್ ಮಾಡಿದ ಪಾಕಿಸ್ತಾನದ ಕ್ರಿಕೆಟಿಗ ಮೊಹಮ್ಮದ್ ರಿಝ್ವಾನ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಗೆ ದೂರು ನೀಡಲಾಗಿದೆ. ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿರುವ ವಿನೀತ್ ಜಿಂದಾಲ್ ಎಂಬ ದೂರುದಾರ ಐಸಿಸಿಗೆ ಪತ್ರ ಬರೆದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಳ್ಳಲಾಗಿದೆ.

ಅಕ್ಟೋಬರ್ 6 ರಂದು ಹೈದರಾಬಾದ್‌ನಲ್ಲಿ ನಡೆದ ನೆದರ್​ಲ್ಯಾಂಡ್ಸ್ ವಿರುದ್ಧ ವಿಶ್ವಕಪ್​ನ ಪಂದ್ಯದ ವೇಳೆ ಪಾಕಿಸ್ತಾನ್ ಆಟಗಾರ ಮೊಹಮ್ಮದ್ ರಿಝ್ವಾನ್ ಮೈದಾನದಲ್ಲೇ ನಮಾಝ್ ಮಾಡಿದ್ದರು. ಈ ಸಂಬಂಧ ಇದೀಗ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರಿಗೆ ವಿನೀತ್ ಜಿಂದಾಲ್ ದೂರು ಸಲ್ಲಿಸಿದ್ದಾರೆ.

“ಕ್ರಿಕೆಟ್ ಮೈದಾನದಲ್ಲಿ ಮೊಹಮ್ಮದ್ ರಿಝ್ವಾನ್ ನಮಾಝ್ ಮಾಡಿರುವುದು ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಇದು ಉದ್ದೇಶಪೂರ್ವಕ ಧರ್ಮದ ಚಿತ್ರಣದ ಸಂಕೇತವಾಗಿದೆ” ದೂರಿನಲ್ಲಿ ತಿಳಿಸಲಾಗಿದೆ.

ಪಾಕ್ ಆಟಗಾರನ ಈ ನಡೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಮೊಹಮ್ಮದ್ ರಿಝ್ವಾನ್ ತನ್ನ ಧರ್ಮವನ್ನು ಪ್ರದರ್ಶಿಸುವ ಮೂಲಕ, ಉದ್ದೇಶಪೂರ್ವಕವಾಗಿ ಮುಸ್ಲಿಂ ಎಂಬ ಸಂದೇಶವನ್ನು ನೀಡುತ್ತಿದ್ದಾರೆ. ಇದು ಕ್ರೀಡೆಯ ಉತ್ಸಾಹವನ್ನು ಸೋಲಿಸುವಂತಹ ವಿಚಾರ.

ವಿರಾಮದ ಸಮಯದಲ್ಲಿ ತನ್ನ ತಂಡದ ಸಹ ಆಟಗಾರರು ಪಾನೀಯಕ್ಕಾಗಿ ಕಾಯುತ್ತಿರುವಾಗ ರಿಝ್ವಾನ್ ಮೈದಾನದ ನಡುವೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಇಂತಹ ನಡೆಗಳಿಗೆ ಅವಕಾಶ ನೀಡಬಾರದು ಎಂದು ದೂರಿನಲ್ಲಿ ಹೇಳಲಾಗಿದೆ.

ಇದಲ್ಲದೆ ಮೊಹಮ್ಮದ್ ರಿಝ್ವಾನ್ ಶ್ರೀಲಂಕಾ ವಿರುದ್ಧ ಬಾರಿಸಿದ ಶತಕವನ್ನು ಗಾಜಾದ ಜನರಿಗೆ ಅರ್ಪಿಸಿದ್ದರು. ಇದು ಕೂಡ ವಿವಾದಕ್ಕೆ ಕಾರಣವಾಗಿತ್ತು. ಈ ವಿಚಾರವನ್ನು ಕೂಡ ಸುಪ್ರೀಂ ಕೋರ್ಟ್​ ವಕೀಲ ವಿನೀತ್ ಜಿಂದಾಲ್ ತಮ್ಮ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ