AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಭಾರತಕ್ಕೆ ತೆರಳಲು ಪಾಕಿಸ್ತಾನ್ ತಂಡಕ್ಕೆ ಗ್ರೀನ್ ಸಿಗ್ನಲ್

World Cup 2023: ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

World Cup 2023: ಭಾರತಕ್ಕೆ ತೆರಳಲು ಪಾಕಿಸ್ತಾನ್ ತಂಡಕ್ಕೆ ಗ್ರೀನ್ ಸಿಗ್ನಲ್
Pakistan Team
TV9 Web
| Edited By: |

Updated on: Aug 06, 2023 | 9:11 PM

Share

ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸಲು ಪಾಕ್ ತಂಡಕ್ಕೆ ಪಾಕಿಸ್ತಾನ್ ಸರ್ಕಾರ ಹಸಿರು ನಿಶಾನೆ ನೀಡಿದೆ. ಈ ಹಿಂದೆ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸುವಿಕೆ ಬಗ್ಗೆ ಚರ್ಚಿಸಲು ಸರ್ಕಾರ 14 ಸದಸ್ಯರ ಸಮಿತಿಯನ್ನು ನೇಮಿಸಲಾಗಿತ್ತು. ಇದೀಗ ಈ ಸಮಿತಿಯು ನೀಡಿದ ವರದಿಯಂತೆ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸಲು ಪಾಕಿಸ್ತಾನ್ ತಂಡಕ್ಕೆ ಅಲ್ಲಿನ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಏಷ್ಯಾಕಪ್​ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ಹಿಂದೇಟು ಹಾಕಿದ್ದ ಪರಿಣಾಮ ಪಾಕ್ ತಂಡ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿತ್ತು. ಆದರೀಗ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ತಮ್ಮ ತಂಡವನ್ನು ಕಳುಹಿಸಲು ಪಾಕ್ ಸರ್ಕಾರ ನಿರ್ಧರಿಸಿದೆ.

ಕ್ರೀಡೆಯನ್ನು ರಾಜಕೀಯದೊಂದಿಗೆ ಬೆರೆಸಬಾರದು. ಹೀಗಾಗಿ ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಭಾಗವಹಿಸಲು ಭಾರತಕ್ಕೆ ತಮ್ಮ ಕ್ರಿಕೆಟ್ ತಂಡವನ್ನು ಕಳುಹಿಸಲು ಅದು ನಿರ್ಧರಿಸಿದ್ದೇವೆ ಎಂದು ಪಾಕಿಸ್ತಾನ್ ವಿದೇಶಾಂಗ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳಲು ಪಾಕಿಸ್ತಾನ್ ತಂಡಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದ್ದು, ಅದರಂತೆ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪಾಕ್​ ತಂಡವು ಭಾರತಕ್ಕೆ ಬರಲಿದೆ.

7 ವರ್ಷಗಳ ಬಳಿಕ ಭಾರತಕ್ಕೆ ಪಾಕ್ ತಂಡ:

2016 ರಲ್ಲಿ ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ಭಾಗವಹಿಸಿತ್ತು. ಇದಾದ ಬಳಿಕ ಉಭಯ ತಂಡಗಳು ಭಾರತದಲ್ಲಿ ಮುಖಾಮುಖಿಯಾಗಿಲ್ಲ. ಇದೀಗ ಬರೋಬ್ಬರಿ 7 ವರ್ಷಗಳ ಬಳಿಕ ಭಾರತ-ಪಾಕಿಸ್ತಾನ್ ಭರತ ಖಂಡದಲ್ಲಿ ಮುಖಾಮುಖಿಯಾಗುತ್ತಿದೆ.

ಭಾರತ-ಪಾಕಿಸ್ತಾನ್ ಮುಖಾಮುಖಿ:

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 15 ರಂದು ನಡೆಯಬೇಕಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ಜರುಗಲಿದೆ. ಅಕ್ಟೋಬರ್ 15 ರಂದು ಗುಜರಾತ್​​ನಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಜರಗುವುದರಿಂದ ಪಂದ್ಯಕ್ಕಾಗಿ ಸೂಕ್ತ ಪೊಲೀಸ್ ವ್ಯವಸ್ಥೆ ಕಲ್ಪಿಸುವುದು ಕಷ್ಟಕರ. ಹೀಗಾಗಿ ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಏಷ್ಯಾಕಪ್​ನಲ್ಲೂ ಸೆಣಸಾಟ:

ಏಕದಿನ ವಿಶ್ವಕಪ್​ಗೂ ಮುನ್ನ ಭಾರತ-ಪಾಕಿಸ್ತಾನ್ ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅಂದರೆ ಆಗಸ್ಟ್ 30 ರಿಂದ ಶುರುವಾಗಲಿರುವ ಏಷ್ಯಾಕಪ್​ನ ಲೀಗ್ ಹಂತದಲ್ಲಿ ಒಂದು ಬಾರಿ ಸೆಣಸುವುದು ಖಚಿತ. ಅದರಂತೆ ಸೆಪ್ಟೆಂಬರ್ 2 ರಂದು ಇಂಡೊ-ಪಾಕ್ ಕಾದಾಟ ನಡೆಯಲಿದೆ. ಇದಾದ ಬಳಿಕ ಉಭಯ ತಂಡಗಳು ಸೂಪರ್​-4 ಹಂತಕ್ಕೇರಿದರೆ 2ನೇ ಬಾರಿ ಮುಖಾಮುಖಿಯಾಗಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ಸ್ ಟೇಬಲ್​ನಲ್ಲಿ ಉಭಯ ತಂಡಗಳು ಮೊದಲೆರಡು ಸ್ಥಾನ ಅಲಂಕರಿಸಿದರೆ ಏಷ್ಯಾಕಪ್​ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಹೀಗಾಗಿ ಏಕದಿನ ವಿಶ್ವಕಪ್​ಗೂ ಮುನ್ನ 3 ಬಾರಿ ಭಾರತ-ಪಾಕಿಸ್ತಾನ್ ನಡುವಣ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಬಹುದು.

ಏಕದಿನ ವಿಶ್ವಕಪ್​ ವೇಳಾಪಟ್ಟಿ:

ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

Follow Us
Web contact
Web contact

TV9 Kannada

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ