AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಪಾಕ್ ಮಂಡಳಿಯಿಂದಾಗಿ ವಿಶ್ವಕಪ್ ವೇಳಾಪಟ್ಟಿ ವಿಳಂಬ; ಗರಂ ಆದ ಬಿಸಿಸಿಐ

World Cup 2023: ವಿಶ್ವಕಪ್‌ನ ಕರಡು ವೇಳಾಪಟ್ಟಿಯನ್ನು ಐಸಿಸಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳಿಗೆ ಕಳುಹಿಸಿದ್ದು, ಪಿಸಿಬಿ ಎರಡು ಆಕ್ಷೇಪಣೆಗಳನ್ನು ಎತ್ತಿದೆ.

World Cup 2023: ಪಾಕ್ ಮಂಡಳಿಯಿಂದಾಗಿ ವಿಶ್ವಕಪ್ ವೇಳಾಪಟ್ಟಿ ವಿಳಂಬ; ಗರಂ ಆದ ಬಿಸಿಸಿಐ
ಏಕದಿನ ವಿಶ್ವಕಪ್Image Credit source: insidesport
ಪೃಥ್ವಿಶಂಕರ
|

Updated on:Jun 21, 2023 | 11:59 AM

Share

ಮುಂದಿನ ಅಕ್ಟೋಬರ್‌ ಹಾಗೂ ನವೆಂಬರ್​​ನಲ್ಲಿ ಏಕದಿನ ವಿಶ್ವಕಪ್ (World Cup 2023) ನಡೆಯಲಿದೆ. ಮೊದಲ ಬಾರಿಗೆ ಭಾರತ ಒಂದೇ ಏಕದಿನ ವಿಶ್ವಕಪ್‌ಗೆ ಆತಿಥ್ಯವಹಿಸುತ್ತಿದೆ. ಇದಕ್ಕಾಗಿ ಬಿಸಿಸಿಐ (BCCI) ಕೂಡ ಸಿದ್ಧತೆ ಆರಂಭಿಸಿದೆ. ಆದರೆ, ಇದಕ್ಕೂ ಮುನ್ನ ವಿಶ್ವಕಪ್ ವೇಳಾಪಟ್ಟಿಗಾಗಿ (World Cup 2023 Schedule) ಕಾಯಲಾಗುತ್ತಿದೆ. ಈ ಹಿಂದೆಯೇ ಜೂನ್ ಆರಂಭದಲ್ಲಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ ಕ್ರಿಕೆಟ್ ಮಂಡಳಿಗಳು ಮತ್ತು ಆಟಗಾರರು ಸಹ ವೇಳಾಪಟ್ಟಿಗಾಗಿ ಕಾಯುತ್ತಿದ್ದಾರೆ. ಆದರೆ, ಈ ನಡುವೆ ಏಕದಿನ ವಿಶ್ವಕಪ್ ವೇಳಾಪಟ್ಟಿ ವಿಳಂಬವಾಗಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯೇ (PCB) ನೇರ ಹೊಣೆ ಎಂದು ಭಾರತೀಯ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಪಿಸಿಬಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದ ಅಂಗಳದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸಿದ್ಧತೆಯಲ್ಲಿ ಬಿಸಿಸಿಐ ನಿರತವಾಗಿದೆ. ಐಪಿಎಲ್ 2023 ಮುಗಿಯುತ್ತಿದ್ದಂತೆ ಭಾರತೀಯ ಕ್ರಿಕೆಟ್ ಮಂಡಳಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಆದರೆ ವಿಶ್ವಕಪ್ ವೇಳಾಪಟ್ಟಿಯಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡುವಂತೆ ಪಾಕಿಸ್ತಾನ ಒತ್ತಾಯಿಸುತ್ತಿದೆ. ಹೀಗಾಗಿ ವೇಳಾಪಟ್ಟಿ ಘೋಷಣೆ ವಿಳಂಬವಾಗುತ್ತಿದೆ.

ಏಕದಿನ ವಿಶ್ವಕಪ್​ನಲ್ಲಿ ಕಾಶ್ಮೀರ್ ವಿಲೋ ಬ್ಯಾಟ್​ಗಳಿಗೆ ಹೆಚ್ಚಿದ ಬೇಡಿಕೆ; ಈ ಬ್ಯಾಟ್​ಗಳ ವಿಶೇಷತೆ ಏನು ಗೊತ್ತಾ?

ಅಹಮದಾಬಾದ್ ನಂತರ ಈಗ ಚೆನ್ನೈ

ಏಷ್ಯಾಕಪ್​ನಿಂದ ಆರಂಭವಾದ ಪಿಸಿಬಿ ಹಾಗೂ ಬಿಸಿಸಿಐ ನಡುವಿನ ಶೀತಲ ಸಮರಕ್ಕೆ ಸದ್ಯಕ್ಕೆ ಕೊನೆ ಸಿಗುತ್ತಿಲ್ಲ. ಈ ಮೊದಲು ಅಹಮದಾಬಾದ್​ನಲ್ಲಿ ಪಾಕಿಸ್ತಾನ ಪಂದ್ಯವನ್ನಾಡಲು ಚಕಾರ ಎತ್ತಿತ್ತು. ಅಹಮದಾಬಾದ್‌ನ ವಿಶ್ವದ ಅತಿದೊಡ್ಡ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲ್ಲ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು. ಆರಂಭದಲ್ಲಿ ಅಹಮದಾಬಾದ್‌ನಲ್ಲಿ ಆಡಲು ನಿರಾಕರಿಸಿದ ಪಾಕಿಸ್ತಾನ ಇದೀಗ ಚೆನ್ನೈನಲ್ಲಿ ಆಡಲು ಆಕ್ಷೇಪ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್ ಸ್ಪೋರ್ಟ್ಸ್ ಜೊತೆ ಮಾತನಾಡಿದ್ದಾರೆ.

‘ಪಿಸಿಬಿ ಅದಕ್ಕೆ ಇಷ್ಟಬಂದಂತೆ ಮಾತನಾಡಬಹುದು. ಆದರೆ ವೇಳಾಪಟ್ಟಿ ವಿಳಂಬಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯೇ ಹೊಣೆ ಎನ್ನುವುದು ಸತ್ಯ. ಮೊದಲು ಪಾಕಿಸ್ತಾನ ಅಹಮದಾಬಾದ್‌ನಲ್ಲಿ ಆಡಲು ಸಿದ್ಧವಿರಲಿಲ್ಲ, ಈಗ ಚೆನ್ನೈನಲ್ಲಿ ಆಡಲು ಸಿದ್ಧವಾಗಿಲ್ಲ. ಈ ಹಿಂದೆ ಅಹಮದಾಬಾದ್‌ನಲ್ಲಿ ಭಾರತದ ವಿರುದ್ಧ ಆಡುವುದಕ್ಕೆ ಪಿಸಿಬಿ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಇದೀಗ ಚೆನ್ನೈನಲ್ಲಿ ಆಡಲು ಪಾಕ್ ಆಕ್ಷೇಪ ಮಾಡುತ್ತಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಾಕ್ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ.

ಕರಡು ವೇಳಾಪಟ್ಟಿಯ ನಂತರ ಆಕ್ಷೇಪಣೆ

ವಿಶ್ವಕಪ್‌ನ ಕರಡು ವೇಳಾಪಟ್ಟಿಯನ್ನು ಐಸಿಸಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳಿಗೆ ಕಳುಹಿಸಿದ್ದು, ಪಿಸಿಬಿ ಎರಡು ಆಕ್ಷೇಪಣೆಗಳನ್ನು ಎತ್ತಿದೆ. ಇದನ್ನು ಬದಲಾಯಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ಮನವಿ ಮಾಡಿದೆ. ಇದರಿಂದಾಗಿ ಈಗ ವೇಳಾಪಟ್ಟಿ ವಿಳಂಬವಾಗುತ್ತಿದೆ.

ಚೆನ್ನೈನಲ್ಲಿ ಸ್ಪಿನ್ನರ್‌ಗಳ ಅನುಕೂಲಕರ ಪಿಚ್‌ನಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಬೆಂಗಳೂರಿನ ಬದಲು ಚೆನ್ನೈನಲ್ಲಿ ಆಯೋಜಿಸಬೇಕು ಎಂದು ಪಾಕ್ ಒತ್ತಾಯಿಸುತ್ತಿದೆ. ಹಾಗೆಯೇ ಚೆನ್ನೈನಲ್ಲಿ ನಿಗದಿ ಮಾಡಿರುವ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಬೆಂಗಳೂರಿನಲ್ಲಿ ಏರ್ಪಡಿಸುವಂತೆ ಒತ್ತಾಯಿಸಿದೆ. ಆದರೆ, ಈ ಮನವಿಯನ್ನು ಬಿಸಿಸಿಐ ತಿರಸ್ಕರಿಸಿದೆ. ಈಗ ಈ ಸಮಸ್ಯೆಯನ್ನು ಬಗೆಹರಿಸುವ ಜವಬ್ದಾರಿ ಐಸಿಸಿ ಮೇಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Wed, 21 June 23

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?