AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಎಲಿಮಿನೇಟರ್‌ ಹಂತಕ್ಕೇರಲು RCB ಗೆ ಇನ್ನೂ ಇದೆ ಅವಕಾಶ..!

WPL 2023 RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ) , ರಿಚಾ ಘೋಷ್ (ವಿಕೆಟ್ ಕೀಪರ್) , ಸೋಫಿ ಡಿವೈನ್ , ಎಲ್ಲಿಸ್ ಪೆರ್ರಿ , ಕನಿಕಾ ಅಹುಜಾ , ಹೀದರ್ ನೈಟ್.

WPL 2023: ಎಲಿಮಿನೇಟರ್‌ ಹಂತಕ್ಕೇರಲು RCB ಗೆ ಇನ್ನೂ ಇದೆ ಅವಕಾಶ..!
RCB
TV9 Web
| Updated By: ಝಾಹಿರ್ ಯೂಸುಫ್|

Updated on: Mar 14, 2023 | 5:33 PM

Share

WPL 2023: ಸೋಲು…ಸೋಲು…ಸೋಲು…ಸೋಲು…ಸೋಲು..ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪಾಲಿಗೆ ಗೆಲುವು ಮರೀಚಿಕೆಯಾಗಿ ಉಳಿದಿದೆ. ಆಡಿರುವ 5 ಪಂದ್ಯಗಳಲ್ಲಿ ಸೋತಿರುವ ಸ್ಮೃತಿ ಮಂಧಾನ ಪಡೆ ಮೊದಲ ಗೆಲುವಿನ ಹಂಬಲದಲ್ಲಿದೆ. ಆರ್​ಸಿಬಿ ತಂಡಲ್ಲಿ ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಸೋಫಿ ಡಿವೈನ್ ಅವರಂತಹ ಸ್ಟಾರ್ ಆಟಗಾರ್ತಿಯರಿದ್ದರೂ ಇದುವರೆಗೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ.

ಮೊದಲಾರ್ಧದಲ್ಲಿ ಆಡಿದ 4 ಪಂದ್ಯಗಳನ್ನು ಸೋತಿದ್ದ ಆರ್​ಸಿಬಿ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೂ ಪರಾಜಯಗೊಂಡಿದೆ. ಸೋಮವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆರ್​ಸಿಬಿ ವನಿತೆಯರು ರೋಚಕ ಕಾದಾಟ ನಡೆಸಿದರೂ, ಗೆಲುವು ದಕ್ಕಲಿಲ್ಲ. ಇನ್ನು ರಾಯಲ್ ಚಾಲೆಂಜರ್ಸ್​ ಬೆಂಗಳೂರು ಪಾಲಿಗೆ ಉಳಿದಿರುವುದು ಕೇವಲ 3 ಪಂದ್ಯಗಳು ಮಾತ್ರ.

ಇದಾಗ್ಯೂ ಆರ್​ಸಿಬಿ ವನಿತೆಯರು ಎಲಿಮಿನೇಟರ್ ಹಂತಕ್ಕೇರುವ ಆಸೆಯನ್ನು ಕೈ ಬಿಟ್ಟಿಲ್ಲ. ಏಕೆಂದರೆ ಉಳಿದಿರುವ ಮೂರು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದರೆ ಎಲಿಮಿನೇಟರ್​ ಹಂತಕ್ಕೇರಬಹುದು. ಇದು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಅವಲಂಭಿತವಾಗಿರಲಿದೆ.

ಆರ್​ಸಿಬಿ ಎಲಿನೇಟರ್ ಹಂತಕ್ಕೇರುವುದು ಹೇಗೆ?

ಆರ್​ಸಿಬಿ ತಂಡಕ್ಕೆ ಉಳಿದಿರುವ ಮೂರು ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಬೇಕು. ಅಂದರೆ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್​, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್​ ತಂಡಗಳಿಗೆ ಸೋಲುಣಿಸಬೇಕು. ಅಲ್ಲದೆ ಯುಪಿ ವಾರಿಯರ್ಸ್​ ತಂಡವು ಮುಂದಿನ ಎಲ್ಲಾ ಪಂದ್ಯಗಳಲ್ಲೂ ಸೋಲುವುದನ್ನು ಎದುರು ನೋಡಬೇಕು.

ಅಂದರೆ ಇಲ್ಲಿ ಆರ್​ಸಿಬಿ ಮುಂದಿನ 3 ಪಂದ್ಯಗಳನ್ನು ಗೆಲ್ಲಬೇಕು, ಹಾಗೆಯೇ ಯುಪಿ ವಾರಿಯರ್ಸ್​ ಮುಂದಿನ ಯಾವುದೇ ಪಂದ್ಯಗಳನ್ನು ಗೆಲ್ಲಬಾರದು. ಇದರ ಜೊತೆಗೆ ಗುಜರಾತ್ ಜೈಂಟ್ಸ್ ತಂಡವು ಕನಿಷ್ಠ 2 ಸೋಲು ಕಾಣಬೇಕು. ಹೀಗಾದ್ರೆ ಮಾತ್ರ ಆರ್​ಸಿಬಿಗೆ ನೆಟ್​ ರನ್​ ರೇಟ್​ ಮೂಲಕ ಎಲಿಮಿನೇಟರ್ ಪಂದ್ಯವಾಡಬಹುದು.

ಫೈನಲ್ ಎಂಟ್ರಿ ಹೇಗೆ?

ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ರತಿ ತಂಡವು ಇತರ ತಂಡಗಳೊಂದಿಗೆ ಎರಡು ಬಾರಿ ಮುಖಾಮುಖಿಯಾಗುತ್ತದೆ. ಅಂದರೆ ಲೀಗ್​ ಹಂತದಲ್ಲಿ ಒಂದು ತಂಡವು ಒಟ್ಟು 8 ಪಂದ್ಯಗಳನ್ನಾಡಲಿದೆ. ಇದರಲ್ಲಿ ಅತ್ಯಧಿಕ ಗೆಲುವು ಸಾಧಿಸಿ ಪಾಯಿಂಟ್ ಟೇಬಲ್​ನಲ್ಲಿ  ಅಗ್ರಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್ ಪ್ರವೇಶಿಸುತ್ತದೆ.

ಇನ್ನು ಪಾಯಿಂಟ್ ಟೇಬಲ್​ನಲ್ಲಿ 2ನೇ ಹಾಗೂ 3ನೇ ಸ್ಥಾನ ಅಲಂಕರಿಸುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದೆ. ಇದರಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

ಇದೀಗ ಪಾಯಿಂಟ್ ಟೇಬಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವು 8 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಹಾಗೆಯೇ 8 ಪಾಯಿಂಟ್ ಪಡೆದಿರುವ ಡೆಲ್ಲಿ ಕ್ಯಾಪಿಟಲ್ಸ್ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮೂರನೇ ಸ್ಥಾನದಲ್ಲಿರುವ ಯುಪಿ ವಾರಿಯರ್ಸ್ ನಾಲ್ಕು ಮ್ಯಾಚ್​ಗಳಲ್ಲಿ 2 ಗೆಲುವಿಗಳೊಂದಿಗೆ 4 ಅಂಕಗಳನ್ನು ಹೊಂದಿದೆ. ಯುಪಿ ತಂಡವು ಮುಂದಿನ 4 ಪಂದ್ಯಗಳಲ್ಲಿ ಸೋತರೆ ಪಾಯಿಂಟ್ ಟೇಬಲ್​ನಲ್ಲಿ ಕೆಳಗಿಳಿಯಲಿದೆ.

ಇತ್ತ 4ನೇ ಸ್ಥಾನದಲ್ಲಿರುವ ಗುಜರಾತ್ ಜೈಂಟ್ಸ್ 4 ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಜಯ ಸಾಧಿಸಿದೆ. ಹೀಗಾಗಿ ಮುಂದಿನ 4 ಪಂದ್ಯಗಳಲ್ಲಿ ಕನಿಷ್ಠ 2 ರಲ್ಲಿ ಸೋಲನುಭವಿಸಬೇಕು. ಹಾಗೆಯೇ 5ನೇ ಸ್ಥಾನದಲ್ಲಿರುವ ಆರ್​ಸಿಬಿ ಉಳಿದ 3 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ನೆಟ್​ ರನ್​ ರೇಟ್ ಮೂಲಕ 3ನೇ ಸ್ಥಾನಕ್ಕೇರಬಹುದು. ಈ ಮೂಲಕ ಆರ್​ಸಿಬಿ ಎಲಿಮಿನೇಟರ್​ ಪಂದ್ಯವಾಡುವ ಅವಕಾಶವನ್ನು ಪಡೆಯಬಹುದು.

ಇದನ್ನೂ ಓದಿ: IPL 2023: RCB ತಂಡದ ಯುವ ಆಟಗಾರನಿಗೆ ಗಾಯ: ಐಪಿಎಲ್​ಗೆ ಡೌಟ್..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಸ್ಮೃತಿ ಮಂಧಾನ (ನಾಯಕಿ) , ರಿಚಾ ಘೋಷ್ (ವಿಕೆಟ್ ಕೀಪರ್) , ಸೋಫಿ ಡಿವೈನ್ , ಎಲ್ಲಿಸ್ ಪೆರ್ರಿ , ಕನಿಕಾ ಅಹುಜಾ , ಹೀದರ್ ನೈಟ್ , ಶ್ರೇಯಾಂಕಾ ಪಾಟೀಲ್ , ಎರಿನ್ ಬರ್ನ್ಸ್ , ಕೋಮಲ್ ಝಂಝಾದ್ , ರೇಣುಕಾ ಠಾಕೂರ್ ಸಿಂಗ್ , ಸಹನಾ ಪವಾರ್ , ಪೂನಮ್ ಖೇಮ್ನಾರ್ , ದಿಶಾ ಕಸತ್, ಮೇಗನ್ ಶುಟ್, ಡೇನ್ ವ್ಯಾನ್ ನೀಕರ್ಕ್ , ಪ್ರೀತಿ ಬೋಸ್ , ಇಂದ್ರಾಣಿ ರಾಯ್ , ಆಶಾ ಶೋಬನಾ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ