AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ಚೊಚ್ಚಲ ಆವೃತ್ತಿಗೆ ಹೊಸ ಜೆರ್ಸಿ ಅನಾವರಣಗೊಳಿಸಿದ ಮುಂಬೈ ಇಂಡಿಯನ್ಸ್; ಫೋಟೋ ನೋಡಿ

WPL 2023: ಮಹಿಳಾ ತಂಡದ ಜೆರ್ಸಿಗೂ, ಪುರುಷರ ತಂಡದ ಜೆರ್ಸಿಗೂ ಸಾಕಷ್ಟು ಸಾಮ್ಯತೆ ಇದೆ. ಈ ಜೆರ್ಸಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮುಂಬೈ ತಂಡ ಮಾಹಿತಿ ಹಂಚಿಕೊಂಡಿದೆ.

WPL 2023: ಚೊಚ್ಚಲ ಆವೃತ್ತಿಗೆ ಹೊಸ ಜೆರ್ಸಿ ಅನಾವರಣಗೊಳಿಸಿದ ಮುಂಬೈ ಇಂಡಿಯನ್ಸ್; ಫೋಟೋ ನೋಡಿ
ಮುಂಬೈ ಇಂಡಿಯನ್ಸ್ ತಂಡ
ಪೃಥ್ವಿಶಂಕರ
|

Updated on:Feb 25, 2023 | 3:09 PM

Share

ಭಾರತದಲ್ಲಿ ಮೊದಲ ಬಾರಿಗೆ ಆಯೋಜನೆಯಾಗುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್​ಗೆ (Women’s Premier League) ದಿನಗಣನೆ ಆರಂಭವಾಗಿದೆ. ಮಾರ್ಚ್ 4 ರಂದು ಮೊದಲ ಪಂದ್ಯ ನಡೆಯುವುದರೊಂದಿಗೆ ಟೂರ್ನಿಗೆ ಅದ್ಧೂರಿ ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ನಡೆದ ಮೆಗಾ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರ್ತಿಯರ ಮೇಲೆ ಹಣದ ಮಳೆಯನ್ನೇ ಸುರಿಸಿದವು. ಇದರೊಂದಿಗೆ ತಮ್ಮ ತಮ್ಮ ತಂಡಗಳನ್ನು ಬಲಿಷ್ಠಗೊಳಿಸಿಕೊಂಡಿದ್ದವು. ಆ ಬಳಿಕ ತಮ್ಮ ತಮ್ಮ ತಂಡಗಳಿಗೆ ನಾಯಕಿಯರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಇದೀಗ ಎಲ್ಲಾ ಫ್ರಾಂಚೈಸಿಗಳಿಗಿಂತ ಒಂದು ಹೆಜ್ಜೆ ಮುಂದಿಟ್ಟಿರುವ ಮುಂಬೈ ಇಂಡಿಯನ್ಸ್ (Mumbai Indians) ತಂಡ ತನ್ನ ಮಹಿಳಾ ತಂಡದ ಜೆರ್ಸಿಯನ್ನು ಶನಿವಾರ ಬಿಡುಗಡೆ ಮಾಡಿದೆ.

ಮುಂಬೈನ ಮಹಿಳಾ ತಂಡದ ಜೆರ್ಸಿ ತಿಳಿ ನೀಲಿ ಬಣ್ಣದ್ದಾಗಿದ್ದು, ಇದು ಬದಿಯಲ್ಲಿ ಕಿತ್ತಳೆ ಬಣ್ಣ ಮತ್ತು ಗೋಲ್ಡನ್ ಬಣ್ಣದ ಗೆರೆಗಳನ್ನು ಹೊಂದಿದೆ. ಮಹಿಳಾ ತಂಡದ ಜೆರ್ಸಿಗೂ, ಪುರುಷರ ತಂಡದ ಜೆರ್ಸಿಗೂ ಸಾಕಷ್ಟು ಸಾಮ್ಯತೆ ಇದೆ. ಈ ಜೆರ್ಸಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಮುಂಬೈ ತಂಡ ಮಾಹಿತಿ ಹಂಚಿಕೊಂಡಿದೆ.

ಪುರುಷರ ತಂಡದಂತೆ ಯಶಸ್ವಿಯಾಗುತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್‌ನ ಅತ್ಯಂತ ಯಶಸ್ವಿ ತಂಡಗಳ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಅಗ್ರ ಪಂಕ್ತಿಯಲ್ಲಿ ನಿಲ್ಲುತ್ತದೆ. ಈ ತಂಡ ಇದುವರೆಗೆ ಅತಿ ಹೆಚ್ಚು ಬಾರಿ ಅಂದರೆ, ಐದು ಬಾರಿ ಗೆದ್ದಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಈ ತಂಡವು 2013, 2015, 2017, 2019, 2020 ರಲ್ಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆದರೆ ಕಳೆದೆರಡು ಸೀಸನ್​ಗಳಲ್ಲಿ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರೂ ಯಾವ ಸಮಯದಲ್ಲಾದರೂ ಪಂದ್ಯದ ಗತಿ ಬದಲಿಸುವ ಸಾಮಥ್ಯ್ರ ಈ ತಂಡದ ಆಟಗಾರರಲ್ಲಿದೆ. ಹೀಗಾಗಿ ಪುರುಷರ ತಂಡದಂತೆಯೇ ಮಹಿಳಾ ತಂಡವೂ ಈ ಲೀಗ್​ನಲ್ಲಿ ಯಶಸ್ವಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ. ಇದಕ್ಕೆ ಪೂರಕವಾಗಿ ಈ ತಿಂಗಳು ನಡೆದ ಹರಾಜಿನಲ್ಲಿ ಹಲವು ಪ್ರಮುಖ ಆಟಗಾರ್ತಿಯರನ್ನು ಫ್ರಾಂಚೈಸಿ ಖರೀದಿಸಿತ್ತು. ಇದರಲ್ಲಿ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಸೇರಿದ್ದಾರೆ.

WPL 2023: ಆರ್​ಸಿಬಿ ಮಹಿಳಾ ತಂಡಕ್ಕೆ ನಾಯಕಿಯಾಗಿ ಸ್ಮೃತಿ ಮಂಧಾನ ಆಯ್ಕೆ..!

ಮೊದಲ ಪಂದ್ಯದಲ್ಲಿ ಗುಜರಾತ್‌ ಎದುರಾಳಿ

ಚೊಚ್ಚಲ ಆವೃತ್ತಿಯಲ್ಲಿ ಮುಂಬೈ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಎರಡೂ ತಂಡಗಳು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ಆಡಲಿವೆ. ಇದರ ನಂತರ, ಮಾರ್ಚ್ 6 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಲಿದೆ. ಹಾಗೆಯೇ ಮಾರ್ಚ್ 9 ರಂದು ದೆಹಲಿಯನ್ನು ಎದುರಿಸಲಿದೆ. ನಂತರ ಮಾರ್ಚ್ 12 ರಂದು ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ. ಮಾರ್ಚ್ 14 ರಂದು ಮುಂಬೈ ಮತ್ತು ಗುಜರಾತ್ ತಂಡಗಳು ಮತ್ತೆ ಮುಖಾಮುಖಿಯಾಗಲಿವೆ. ಮಾರ್ಚ್ 18 ರಂದು ಮುಂಬೈ ಮತ್ತು ಯುಪಿ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 20 ರಂದು ಮುಂಬೈ ಮತ್ತು ದೆಹಲಿ ಮತ್ತೆ ಮುಖಾಮುಖಿಯಾಗಲಿದ್ದು, ಮಾರ್ಚ್ 21 ರಂದು ಬೆಂಗಳೂರು ಮತ್ತು ಮುಂಬೈ ಮತ್ತೆ ಆಡಲಿವೆ.

ಮುಂಬೈ ಮಹಿಳಾ ತಂಡ

ಹರ್ಮನ್‌ಪ್ರೀತ್ ಕೌರ್, ನ್ಯಾಟ್ ಸಿವರ್, ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಯಾಸ್ತಿಕಾ ಭಾಟಿಯಾ, ಹೀದರ್ ಗ್ರಹಾಂ, ಇಸಾಬೆಲ್ಲೆ ವಾಂಗ್, ಅಮನ್ಜೋತ್ ಕೌರ್, ಧಾರಾ ಗುಜ್ಜರ್, ಸೈಕಾ ಇಶಾಕ್, ಹೇಯ್ಲಿ ಮ್ಯಾಥ್ಯೂಸ್, ಕ್ಲೋಯ್ ಟ್ರಯಾನ್, ಹುಮೈರಾ ಕಾಜಿ, ಪ್ರಿಯಾಂಕಾ ಬಾಲಾ, ಸೋನಮ್ ಯಾದವ್, ನೀಲಂ ಬಿಶ್ತ್, ಜಿತುಮೋನಿ ಕಲಿತಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Sat, 25 February 23

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು