AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: RCB ತಂಡಕ್ಕೆ ಮೂವರು ಆಟಗಾರ್ತಿಯರ ಎಂಟ್ರಿ

WPL 2024 Auction: ವುಮೆನ್ಸ್​ ಪ್ರೀಮಿಯರ್ ಲೀಗ್ ನಿಯಮದ ಪ್ರಕಾರ ಒಟ್ಟು ತಂಡದಲ್ಲಿ ಕನಿಷ್ಠ 15 ಆಟಗಾರ್ತಿಯರು ಇರಬೇಕು. ಅಲ್ಲದೆ ಒಂದು ತಂಡದ ಗರಿಷ್ಠ ಸಂಖ್ಯೆ 18. ಹೀಗಾಗಿ ಆರ್​ಸಿಬಿ ತಂಡಕ್ಕೆ ಇನ್ನೂ ಮೂವರು ಆಟಗಾರ್ತಿಯರನ್ನು ಖರೀದಿಸುವ ಅವಕಾಶವಿದೆ.

WPL 2024: RCB ತಂಡಕ್ಕೆ ಮೂವರು ಆಟಗಾರ್ತಿಯರ ಎಂಟ್ರಿ
WPL 2024- RCB
TV9 Web
| Edited By: |

Updated on:Dec 09, 2023 | 4:40 PM

Share

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದುವರೆಗೆ ಮೂವರು ಆಟಗಾರ್ತಿಯರನ್ನು ಖರೀದಿಸಿದೆ. ಆಸ್ಟ್ರೇಲಿಯಾದ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು 40 ಲಕ್ಷ ರೂ.ಗೆ ಖರೀದಿಸುವ ಮೂಲಕ ಬಿಡ್ಡಿಂಗ್ ಆರಂಭಿಸಿದ ಆರ್​ಸಿಬಿ, ಆ ಬಳಿಕ ಇಂಗ್ಲೆಂಡ್ ತಂಡದ ಅನುಭವಿ ಆಟಗಾರ್ತಿ ಕೇಟ್ ಕ್ರಾಸ್ ಅವರನ್ನು 30 ಲಕ್ಷ ರೂ.ಗೆ ಖರೀದಿಸಿತು.

ಇದಾದ ಬಳಿಕ ಭಾರತೀಯ ಆಟಗಾರ್ತಿ ಏಕ್ತಾ ಬಿಷ್ತ್ ಅವರನ್ನು 60 ಲಕ್ಷ ರೂ.ಗೆ ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಇನ್ನು ಅನ್​ಕ್ಯಾಪ್ಡ್​ ಆಟಗಾರ್ತಿಯರ ಪಟ್ಟಿಯಿಂದ ಆರ್​ಸಿಬಿ ಇದುವರೆಗೆ ಯಾವುದೇ ಪ್ಲೇಯರ್​ ಅನ್ನು ಖರೀದಿಸಿಲ್ಲ.

ಇದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿತ್ತು. ಇದೀಗ ಹರಾಜಿನ ಮೊದಲೆರಡು ಸುತ್ತಿನಲ್ಲೇ ಮೂವರು ಆಟಗಾರ್ತಿಯರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ.

RCB ಉಳಿಸಿಕೊಂಡಿರುವ ಆಟಗಾರ್ತಿಯರು: ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸ್ಮೃತಿ ಮಂಧಾನ, ಸೋಫಿ ಡಿವೈನ್.

ಇದನ್ನೂ ಓದಿ: WPL 2024: ಬರೋಬ್ಬರಿ 2 ಕೋಟಿಗೆ ಹರಾಜಾದ ಅನ್ನಾಬೆಲ್

ವುಮೆನ್ಸ್​ ಪ್ರೀಮಿಯರ್ ಲೀಗ್ ನಿಯಮದ ಪ್ರಕಾರ ಒಟ್ಟು ತಂಡದಲ್ಲಿ ಕನಿಷ್ಠ 15 ಆಟಗಾರ್ತಿಯರು ಇರಬೇಕು. ಅಲ್ಲದೆ ಒಂದು ತಂಡದ ಗರಿಷ್ಠ ಸಂಖ್ಯೆ 18. ಹೀಗಾಗಿ ಆರ್​ಸಿಬಿ ತಂಡಕ್ಕೆ ಇನ್ನೂ ನಾಲ್ವರು ಆಟಗಾರ್ತಿಯರನ್ನು ಖರೀದಿಸುವ ಅವಕಾಶವಿದೆ.

Published On - 4:13 pm, Sat, 9 December 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ