AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಚರ್ಮದ ಕ್ಯಾನ್ಸರ್: ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದ ಲಾರೆನ್

WPL 2024: ಫೆಬ್ರವರಿ 23 ರಿಂದ ವುಮೆನ್ಸ್ ಪ್ರೀಮಿಯರ್ ಲೀಗ್ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಟೂರ್ನಿಯಿಂದ ಗುಜರಾತ್ ಜೈಂಟ್ಸ್ ತಂಡದ ಸ್ಟಾರ್ ಆಟಗಾರ್ತಿ ಲಾರೆನ್ ಹೊರಗುಳಿದಿದ್ದಾರೆ. ಹೀಗಾಗಿ ಗುಜರಾತ್ ಫ್ರಾಂಚೈಸಿ ಬದಲಿ ವಿದೇಶಿ ಆಟಗಾರ್ತಿಯನ್ನು ಆಯ್ಕೆ ಮಾಡಬೇಕಿದೆ.

WPL 2024: ಚರ್ಮದ ಕ್ಯಾನ್ಸರ್: ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದ ಲಾರೆನ್
Lauren Cheatle
TV9 Web
| Edited By: |

Updated on:Feb 01, 2024 | 12:30 PM

Share

ಆಸ್ಟ್ರೇಲಿಯಾ ತಂಡದ ಆಟಗಾರ್ತಿ ಲಾರೆನ್ ಚೀಟಲ್ (Lauren Cheatle) ವುಮೆನ್ಸ್​ ಪ್ರೀಮಿಯರ್ ಲೀಗ್​ನಿಂದ ಹೊರಗುಳಿದಿದ್ದಾರೆ. ಈ ಬಾರಿಯ WPL ಹರಾಜಿನಲ್ಲಿ ಲಾರೆನ್ ಅವರನ್ನು ಗುಜರಾತ್ ಜೈಂಟ್ಸ್​ ಫ್ರಾಂಚೈಸಿ 30 ಲಕ್ಷ ರೂ. ನೀಡಿ ಖರೀದಿಸಿತ್ತು. ಅಲ್ಲದೆ ಈ ಬಾರಿಯ ಟೂರ್ನಿಗಾಗಿ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿತ್ತು.

ಆದರೀಗ ಚರ್ಮದ ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗಿರುವ ಲಾರೆನ್ ಚೀಟಲ್ ವುಮೆನ್ಸ್​ ಪ್ರೀಮಿಯರ್ ಲೀಗ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಹೀಗಾಗಿ ಗುಜರಾತ್ ಜೈಂಟ್ಸ್​ ಫ್ರಾಂಚೈಸಿ ಇದೀಗ ಬದಲಿ ಆಟಗಾರ್ತಿಯನ್ನು ಆಯ್ಕೆ ಮಾಡಬೇಕಿದೆ.

25 ವರ್ಷದ ಲಾರೆನ್ ಚೀಟಲ್ ಈಗಾಗಲೇ ಆಸ್ಟ್ರೇಲಿಯಾ ಪರ 1 ಟೆಸ್ಟ್ ಹಾಗೂ 4 ಏಕದಿನ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 2 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಇನ್ನು 7 ಟಿ20 ಪಂದ್ಯಗಳಿಂದ 5 ವಿಕೆಟ್ ಪಡೆದಿದ್ದಾರೆ.

ಆಸೀಸ್ ಬಳಗದ ಭರವಸೆಯ ವೇಗಿಗಳಲ್ಲಿ ಗುರುತಿಸಿಕೊಂಡಿದ್ದ ಲಾರೆನ್ ಇದೀಗ ಚಿಕಿತ್ಸೆಯ ಕಾರಣ ಮೈದಾನದಿಂದ ಹೊರಗುಳಿಯಬೇಕಾಗಿ ಬಂದಿದೆ. ಇದಾಗ್ಯೂ ಮುಂದಿನ ಆಫ್-ಸೀಸನ್ ವಿರಾಮದ ಬಳಿಕ ನ್ಯೂ ಸೌತ್ ವೇಲ್ಸ್​ ತರಬೇತಿ ಕೇಂದ್ರಕ್ಕೆ ಮರಳುವ ಗುರಿಯನ್ನು ಚೀಟಲ್ ಹೊಂದಿದ್ದಾರೆ.

ಗುಜರಾತ್ ಜೈಂಟ್ಸ್ (GG) ತಂಡ: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್, ಫೋಬೆ ಲಿಚ್‌ಫೀಲ್ಡ್*, ಮೇಘನಾ ಸಿಂಗ್, ತ್ರಿಶಾ ಪೂಜಿತಾ, ಕಾಶ್ವೀ ಗೌತಮ್, ಪ್ರಿಯಾ ಮಿಶ್ರಾ, ಕ್ಯಾಥರಿನ್ ಬ್ರೈಸ್*, ಮನ್ನತ್ ಕಶ್ಯಪ್, ತರನ್ನುಮ್ ಪಠಾಣ್, ವೇದಾ ಕೃಷ್ಣಮೂರ್ತಿ.

ವುಮೆನ್ಸ್ ಪ್ರೀಮಿಯರ್ ಲೀಗ್ ಯಾವಾಗ ಶುರು?

ವುಮೆನ್ಸ್ ಪ್ರೀಮಿಯರ್ ಲೀಗ್ (WPL 2024) ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿ ಫೆಬ್ರವರಿ 23 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 17 ರಂದು ನಡೆಯಲಿದೆ. ಈ ಬಾರಿಯ ಟೂರ್ನಿಯು ಬೆಂಗಳೂರು ಮತ್ತು ದೆಹಲಿಯಲ್ಲಿ ನಡೆಯಲಿದೆ.

ಇದನ್ನೂ ಓದಿ: Babar Azam: ಮೂರು ಶ್ರೇಯಾಂಕ ಪಟ್ಟಿಯಲ್ಲೂ ಬಾಬರ್ ಆಝಂ ಮಿಂಚಿಂಗ್

WPL 2024 ಸಂಪೂರ್ಣ ವೇಳಾಪಟ್ಟಿ:

  • ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
  • ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
  • ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
  • ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
  • ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
  • ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
  • ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
  • ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
  • ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
  • ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
  • ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
  • ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
  • ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
  • ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
  • ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
  • ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)
  • ಮಾರ್ಚ್ 10 –  ಡೆಲ್ಲಿ ಕ್ಯಾಪಿಟಲ್ಸ್ vs  ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
  • ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
  • ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
  • ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
  • ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
  • ಮಾರ್ಚ್ 17 – ಫೈನಲ್ (ದೆಹಲಿ)

Published On - 12:29 pm, Thu, 1 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ