AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024 Final: ಕಪ್ ನಮ್ದೇ….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಸಿಂಹಿಣಿಯರು

WPL 2024 Final: ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಸ್ಮೃತಿ ಮಂಧಾನ ನೇತೃತ್ವದ ಆರ್​ಸಿಬಿ ಪಡೆ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

WPL 2024 Final: ಕಪ್ ನಮ್ದೇ....! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಸಿಂಹಿಣಿಯರು
ಆರ್​ಸಿಬಿ ಮಹಿಳಾ ತಂಡ
ಪೃಥ್ವಿಶಂಕರ
|

Updated on:Mar 18, 2024 | 12:14 AM

Share

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ ಫೈನಲ್​ಗೇರಿತ್ತಾದರೂ ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಫೈನಲ್‌ ಪಂದ್ಯದಲ್ಲೂ ಆರ್​ಸಿಬಿ ಗೆಲುವಿಗಾಗಿ ಮುಕ್ಕೋಟಿ ದೇವರ ಬಳಿ ಮೊರೆ ಇಡುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು ಅದೇ ಸೋಲು, ಅದೇ ನಿರಾಸೆ, ಅದೇ ಕಣ್ಣೀರು. ಈಗಲೂ ಆರ್​ಸಿಬಿ ಅಭಿಮಾನಿಗಳ ಕಣ್ಣಲ್ಲಿ ನೀರಿದೆ. ಆದರೆ ಅದು ದುಃಖದ ಕಣ್ಣೀರಲ್ಲ, ಬದಲಿಗೆ 17 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಯಿತಲ್ಲ ಎಂಬ ಆನಂದದ ಕಣ್ಣೀರು. 16 ಆವೃತ್ತಿಗಳ ಐಪಿಎಲ್​ನಲ್ಲಿ ಆರ್​ಸಿಬಿ ಪುರುಷ ತಂಡ ಮಾಡಲಾಗದ ಕೆಲಸವನ್ನು ಆರ್​ಸಿಬಿ ಮಹಿಳಾ ಹುಲಿಗಳ ಪಡೆ ಕೇವಲ ಎರಡನೇ ಆವೃತ್ತಿಯಲ್ಲೇ ಮಾಡಿ ಮುಗಿಸಿದೆ.

ಆರ್​ಸಿಬಿಗೆ 8 ವಿಕೆಟ್ ಜಯ

ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಸ್ಮೃತಿ ಮಂಧಾನ ನೇತೃತ್ವದ ಆರ್​ಸಿಬಿ ಪಡೆ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನು 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ಗೆಲುವಿನ ಬೌಂಡರಿ ಬಾರಿಸಿದ ರಿಚಾ

ಡೆಲ್ಲಿ ನೀಡಿದ 114 ರನ್​ಗಳ ಅಲ್ಪ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ವೇಗದ ಆರಂಭ ಸಿಗದಿದ್ದರೂ 49 ರನ್​ಗಳ ಉಪಯುಕ್ತ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಸ್ಮೃತಿ ಹಾಗೂ ಸೋಫಿ ಡಿವೈನ್ ಮೊದಲ ವಿಕೆಟ್​ಗೆ 49 ರನ್​ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ ಸೋಫಿ 27 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 32 ರನ್​ಗಳ ಅಮೂಲ್ಯ ಕಾಣಿಕೆ ನೀಡಿದರು. ಆ ಬಳಿಕ ಜೊತೆಯಾದ ಸ್ಮೃತಿ ಹಾಗೂ ಎಲ್ಲಿಸ್ ಪೆರ್ರಿ 33 ರನ್​ಗಳ ಜೊತೆಯಾಟ ನಡೆಸಿದರು. ಆರಂಭದಿಂದಲೂ ತಾಳ್ಮೆಯ ಆಟವಾಡುತ್ತಿದ್ದ ಸ್ಮೃತಿ ಗೆಲುವಿನಂಚಿನಲ್ಲಿ ಲಯ ಕಳೆದುಕೊಂಡು 39 ಎಸೆತಗಳಲ್ಲಿ 3 ಬೌಂಡರಿ ಸಹಿತ 33 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಅಂತ್ಯದಲ್ಲಿ ಬಂದ ರಿಚಾ ಘೋಷ್, ಎಲ್ಲಿಸ್ ಪೆರ್ರಿಗೆ ಅಜೇಯ ಸಾಥ್ ನೀಡಿದಲ್ಲದೆ, ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ ಪೆರ್ರಿ 37 ಎಸೆತಗಳಲ್ಲಿ 4 ಬೌಂಡರಿ ಸಹಿತ 34 ರನ್​ ಬಾರಿಸಿದರೆ, ರಿಚಾ 14 ಎಸೆತಗಳಲ್ಲಿ 2 ಬೌಂಡರಿ ಸಹಿತ ಅಜೇಯ 17 ರನ್ ಸಿಡಿಸಿದರು.

ಡೆಲ್ಲಿಗೆ ಉತ್ತಮ ಆರಂಭ

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವನ್ನಾಡಿದರು. ಈ ವೇಳೆ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶಫಾಲಿ ಮೊಲಿನೆಕ್ಸ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು. ಆ ನಂತರ ಬಂದ ಭರವಸೆಯ ಆಟಗಾರ್ತಿ ಜೆಮಿಮಾ ರಾಡ್ರಿಗಸ್ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಜಮಿಮಾ ನಂತರ ಬಂದ ಆಲಿಸ್ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು. ಆರ್​ಸಿಬಿಗೆ ಆಪತ್ಬಾಂಧವಿಯಂತೆ ಬಂದ ಸೋಫಿ ಮೊಲಿನೆಕ್ಸ್ ಒಂದೇ ಓವರ್​ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಬಿಗ್ ಶಾಕ್ ನೀಡಿದರು.

ಕುಸಿದ ಬ್ಯಾಟಿಂಗ್ ಕ್ರಮಾಂಕ

ನಂತರ ದಾಳಿಗಿಳಿದ ಕನ್ನಡತಿ ಶ್ರೇಯಾಂಕ ಪಾಟೀಲ್, ಡೆಲ್ಲಿ ನಾಯಕಿ ಮೆಗ್ ಲ್ಯಾನಿಂಗ್​ರನ್ನು ಎಲ್​ಬಿಡ್ಬ್ಲ್ಯೂ ಬಲೆಗೆ ಬೀಳಿಸಿದರು. ಮೆಗ್ ಲ್ಯಾನಿಂಗ್ ಇನ್ನಿಂಗ್ಸ್ 23 ರನ್​ಗಳಿಗೆ ಅಂತ್ಯಗೊಂಡಿತು. ಇಲ್ಲಿಂದ ಡೆಲ್ಲಿ ಇನ್ನಿಂಗ್ಸ್ ಕುಸಿಯಲಾರಂಭಿಸಿತು. ಇದರ ಲಾಭ ಪಡೆದ ಆರ್​ಸಿಬಿ ಬೌಲರ್​ಗಳು ಡೆಲ್ಲಿ ಬ್ಯಾಟರ್​ಗಳಿಗೆ ಹೆಚ್ಚು ರನ್ ಬಿಟ್ಟುಕೊಡದೆ ಅವರನ್ನು ಒತ್ತಡಕ್ಕೆ ಸಿಲುಕಿಸಿದರು. ಹೀಗಾಗಿ ಒತ್ತಡಕ್ಕೊಳಗಾದ ಡೆಲ್ಲಿ ಬ್ಯಾಟರ್ಸ್​ ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆಹಾಕಿದರು.

ಪರ್ಪಲ್ ಕ್ಯಾಪ್ ಗೆದ್ದ ಶ್ರೇಯಾಂಕ

14ನೇ ಓವರ್​ನ ಮೊದಲ ಎಸೆತದಲ್ಲಿ ಆಶಾ ಕೇಪ್ ಅವರನ್ನು 8 ರನ್​ಗಳಿಗೆ ಬಲಿ ಪಡೆದರೆ, ಜೆಸ್ ಜೊನಾಸೆನ್ ಕೂಡ ಆಶಾಗೆ ವಿಕೆಟ್ ಒಪ್ಪಿಸಿದರು. ಸೋಫಿ ಮೊಲಿನೆಕ್ಸ್ ಅವರ ಅದ್ಭುತ ಎಸೆತದಲ್ಲಿ ರಾಧಾ ರನೌಟ್​ಗೆ ಬಲಿಯಾದರೆ, ಕೊನೆಯ ಮೂರು ವಿಕೆಟ್​ಗಳನ್ನು ಕನ್ನಡತಿ ಶ್ರೇಯಾಂಕ ಪಡೆಯುವಲ್ಲಿ ಯಶಸ್ವಿಯಾದರು. ಶ್ರೇಯಾಂಕ, ಮಿನ್ನು ಮಣಿ (5 ರನ್) ಅರುಂಧತಿ ರೆಡ್ಡಿ (10 ರನ್) ತನಿಯಾ ಭಾಟಿಯಾ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಫೈನಲ್ ಪಂದ್ಯದಲ್ಲಿ ಶ್ರೇಯಾಂಕ 4 ವಿಕೆಟ್ ಪಡೆಯುವ ಮೂಲಕ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Sun, 17 March 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ