Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024 Final: ಕಪ್ ನಮ್ದೇ….! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಸಿಂಹಿಣಿಯರು

WPL 2024 Final: ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಸ್ಮೃತಿ ಮಂಧಾನ ನೇತೃತ್ವದ ಆರ್​ಸಿಬಿ ಪಡೆ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

WPL 2024 Final: ಕಪ್ ನಮ್ದೇ....! ಇತಿಹಾಸ ಸೃಷ್ಟಿಸಿದ ಆರ್​ಸಿಬಿ ಸಿಂಹಿಣಿಯರು
ಆರ್​ಸಿಬಿ ಮಹಿಳಾ ತಂಡ
Follow us
ಪೃಥ್ವಿಶಂಕರ
|

Updated on:Mar 18, 2024 | 12:14 AM

ಈ ಕ್ಷಣ… ಇದೊಂದು ಕ್ಷಣಕ್ಕಾಗಿ ಆರ್​ಸಿಬಿ (RCB) ಅಭಿಮಾನಿಗಳು ಕಾಯ್ದಿದ್ದು ಬರೋಬ್ಬರಿ 17 ವರ್ಷಗಳು. ಐಪಿಎಲ್ (IPL) ಶುರುವಾಗಿ ಇಲ್ಲಿಯವರೆಗೆ 16 ಆವೃತ್ತಿಗಳು ಕಳೆದಿವೆ. ಪ್ರತಿ ಆವೃತ್ತಿಯಲ್ಲೂ ಬೆಟ್ಟದಷ್ಟು ನಿರೀಕ್ಷೆ ಇಟ್ಟು ಕಾಯುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು, ಸೋಲಿನ ನಿರಾಸೆ. ಕಳೆದ 16 ಆವೃತ್ತಿಗಳಲ್ಲಿ ಆರ್​ಸಿಬಿ 4 ಬಾರಿ ಫೈನಲ್​ಗೇರಿತ್ತಾದರೂ ಒಮ್ಮೆಯೂ ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. ಪ್ರತಿ ಫೈನಲ್‌ ಪಂದ್ಯದಲ್ಲೂ ಆರ್​ಸಿಬಿ ಗೆಲುವಿಗಾಗಿ ಮುಕ್ಕೋಟಿ ದೇವರ ಬಳಿ ಮೊರೆ ಇಡುತ್ತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಕೊನೆಗೆ ಎದುರಾಗುತ್ತಿದ್ದಿದ್ದು ಅದೇ ಸೋಲು, ಅದೇ ನಿರಾಸೆ, ಅದೇ ಕಣ್ಣೀರು. ಈಗಲೂ ಆರ್​ಸಿಬಿ ಅಭಿಮಾನಿಗಳ ಕಣ್ಣಲ್ಲಿ ನೀರಿದೆ. ಆದರೆ ಅದು ದುಃಖದ ಕಣ್ಣೀರಲ್ಲ, ಬದಲಿಗೆ 17 ವರ್ಷಗಳ ಕಾಯುವಿಕೆ ಕೊನೆಗೂ ಅಂತ್ಯವಾಯಿತಲ್ಲ ಎಂಬ ಆನಂದದ ಕಣ್ಣೀರು. 16 ಆವೃತ್ತಿಗಳ ಐಪಿಎಲ್​ನಲ್ಲಿ ಆರ್​ಸಿಬಿ ಪುರುಷ ತಂಡ ಮಾಡಲಾಗದ ಕೆಲಸವನ್ನು ಆರ್​ಸಿಬಿ ಮಹಿಳಾ ಹುಲಿಗಳ ಪಡೆ ಕೇವಲ ಎರಡನೇ ಆವೃತ್ತಿಯಲ್ಲೇ ಮಾಡಿ ಮುಗಿಸಿದೆ.

ಆರ್​ಸಿಬಿಗೆ 8 ವಿಕೆಟ್ ಜಯ

ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಬಲಿಷ್ಠ ಡೆಲ್ಲಿ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿದ ಸ್ಮೃತಿ ಮಂಧಾನ ನೇತೃತ್ವದ ಆರ್​ಸಿಬಿ ಪಡೆ ಇದೇ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನು 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ಗೆಲುವಿನ ಬೌಂಡರಿ ಬಾರಿಸಿದ ರಿಚಾ

ಡೆಲ್ಲಿ ನೀಡಿದ 114 ರನ್​ಗಳ ಅಲ್ಪ ಗುರಿ ಬೆನ್ನಟ್ಟಿದ ಆರ್​ಸಿಬಿಗೆ ವೇಗದ ಆರಂಭ ಸಿಗದಿದ್ದರೂ 49 ರನ್​ಗಳ ಉಪಯುಕ್ತ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಸ್ಮೃತಿ ಹಾಗೂ ಸೋಫಿ ಡಿವೈನ್ ಮೊದಲ ವಿಕೆಟ್​ಗೆ 49 ರನ್​ಗಳ ಜೊತೆಯಾಟ ನೀಡಿದರು. ಈ ಹಂತದಲ್ಲಿ ಸೋಫಿ 27 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 32 ರನ್​ಗಳ ಅಮೂಲ್ಯ ಕಾಣಿಕೆ ನೀಡಿದರು. ಆ ಬಳಿಕ ಜೊತೆಯಾದ ಸ್ಮೃತಿ ಹಾಗೂ ಎಲ್ಲಿಸ್ ಪೆರ್ರಿ 33 ರನ್​ಗಳ ಜೊತೆಯಾಟ ನಡೆಸಿದರು. ಆರಂಭದಿಂದಲೂ ತಾಳ್ಮೆಯ ಆಟವಾಡುತ್ತಿದ್ದ ಸ್ಮೃತಿ ಗೆಲುವಿನಂಚಿನಲ್ಲಿ ಲಯ ಕಳೆದುಕೊಂಡು 39 ಎಸೆತಗಳಲ್ಲಿ 3 ಬೌಂಡರಿ ಸಹಿತ 33 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು. ಅಂತ್ಯದಲ್ಲಿ ಬಂದ ರಿಚಾ ಘೋಷ್, ಎಲ್ಲಿಸ್ ಪೆರ್ರಿಗೆ ಅಜೇಯ ಸಾಥ್ ನೀಡಿದಲ್ಲದೆ, ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದ ಪೆರ್ರಿ 37 ಎಸೆತಗಳಲ್ಲಿ 4 ಬೌಂಡರಿ ಸಹಿತ 34 ರನ್​ ಬಾರಿಸಿದರೆ, ರಿಚಾ 14 ಎಸೆತಗಳಲ್ಲಿ 2 ಬೌಂಡರಿ ಸಹಿತ ಅಜೇಯ 17 ರನ್ ಸಿಡಿಸಿದರು.

ಡೆಲ್ಲಿಗೆ ಉತ್ತಮ ಆರಂಭ

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವನ್ನಾಡಿದರು. ಈ ವೇಳೆ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶಫಾಲಿ ಮೊಲಿನೆಕ್ಸ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು. ಆ ನಂತರ ಬಂದ ಭರವಸೆಯ ಆಟಗಾರ್ತಿ ಜೆಮಿಮಾ ರಾಡ್ರಿಗಸ್ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಜಮಿಮಾ ನಂತರ ಬಂದ ಆಲಿಸ್ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು. ಆರ್​ಸಿಬಿಗೆ ಆಪತ್ಬಾಂಧವಿಯಂತೆ ಬಂದ ಸೋಫಿ ಮೊಲಿನೆಕ್ಸ್ ಒಂದೇ ಓವರ್​ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಬಿಗ್ ಶಾಕ್ ನೀಡಿದರು.

ಕುಸಿದ ಬ್ಯಾಟಿಂಗ್ ಕ್ರಮಾಂಕ

ನಂತರ ದಾಳಿಗಿಳಿದ ಕನ್ನಡತಿ ಶ್ರೇಯಾಂಕ ಪಾಟೀಲ್, ಡೆಲ್ಲಿ ನಾಯಕಿ ಮೆಗ್ ಲ್ಯಾನಿಂಗ್​ರನ್ನು ಎಲ್​ಬಿಡ್ಬ್ಲ್ಯೂ ಬಲೆಗೆ ಬೀಳಿಸಿದರು. ಮೆಗ್ ಲ್ಯಾನಿಂಗ್ ಇನ್ನಿಂಗ್ಸ್ 23 ರನ್​ಗಳಿಗೆ ಅಂತ್ಯಗೊಂಡಿತು. ಇಲ್ಲಿಂದ ಡೆಲ್ಲಿ ಇನ್ನಿಂಗ್ಸ್ ಕುಸಿಯಲಾರಂಭಿಸಿತು. ಇದರ ಲಾಭ ಪಡೆದ ಆರ್​ಸಿಬಿ ಬೌಲರ್​ಗಳು ಡೆಲ್ಲಿ ಬ್ಯಾಟರ್​ಗಳಿಗೆ ಹೆಚ್ಚು ರನ್ ಬಿಟ್ಟುಕೊಡದೆ ಅವರನ್ನು ಒತ್ತಡಕ್ಕೆ ಸಿಲುಕಿಸಿದರು. ಹೀಗಾಗಿ ಒತ್ತಡಕ್ಕೊಳಗಾದ ಡೆಲ್ಲಿ ಬ್ಯಾಟರ್ಸ್​ ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆಹಾಕಿದರು.

ಪರ್ಪಲ್ ಕ್ಯಾಪ್ ಗೆದ್ದ ಶ್ರೇಯಾಂಕ

14ನೇ ಓವರ್​ನ ಮೊದಲ ಎಸೆತದಲ್ಲಿ ಆಶಾ ಕೇಪ್ ಅವರನ್ನು 8 ರನ್​ಗಳಿಗೆ ಬಲಿ ಪಡೆದರೆ, ಜೆಸ್ ಜೊನಾಸೆನ್ ಕೂಡ ಆಶಾಗೆ ವಿಕೆಟ್ ಒಪ್ಪಿಸಿದರು. ಸೋಫಿ ಮೊಲಿನೆಕ್ಸ್ ಅವರ ಅದ್ಭುತ ಎಸೆತದಲ್ಲಿ ರಾಧಾ ರನೌಟ್​ಗೆ ಬಲಿಯಾದರೆ, ಕೊನೆಯ ಮೂರು ವಿಕೆಟ್​ಗಳನ್ನು ಕನ್ನಡತಿ ಶ್ರೇಯಾಂಕ ಪಡೆಯುವಲ್ಲಿ ಯಶಸ್ವಿಯಾದರು. ಶ್ರೇಯಾಂಕ, ಮಿನ್ನು ಮಣಿ (5 ರನ್) ಅರುಂಧತಿ ರೆಡ್ಡಿ (10 ರನ್) ತನಿಯಾ ಭಾಟಿಯಾ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಫೈನಲ್ ಪಂದ್ಯದಲ್ಲಿ ಶ್ರೇಯಾಂಕ 4 ವಿಕೆಟ್ ಪಡೆಯುವ ಮೂಲಕ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 pm, Sun, 17 March 24

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ