AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024 Final: ಆರ್​ಸಿಬಿ ಸಾಂಘೀಕ ದಾಳಿಗೆ ತತ್ತರಿಸಿದ ಡೆಲ್ಲಿ 113 ರನ್​ಗಳಿಗೆ ಆಲೌಟ್..!

WPL 2024 Final: ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ಅಂದರೆ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್​ಸಿಬಿ ಬೌಲರ್​ಗಳ ಸಾಂಘೀಕ ದಾಳಿಗೆ ನಲುಗಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ.

WPL 2024 Final: ಆರ್​ಸಿಬಿ ಸಾಂಘೀಕ ದಾಳಿಗೆ ತತ್ತರಿಸಿದ ಡೆಲ್ಲಿ 113 ರನ್​ಗಳಿಗೆ ಆಲೌಟ್..!
ಆರ್​ಸಿಬಿ
ಪೃಥ್ವಿಶಂಕರ
|

Updated on:Mar 17, 2024 | 9:15 PM

Share

ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ಅಂದರೆ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್​ಸಿಬಿ (Delhi Capitals vs Royal Challengers Bangalore) ಬೌಲರ್​ಗಳ ಸಾಂಘೀಕ ದಾಳಿಗೆ ನಲುಗಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ. ಈ ಮೂಲಕ ಆರ್​ಸಿಬಿಗೆ 114 ರನ್​ಗಳ ಗೆಲುವಿನ ಗುರಿ ನೀಡಿದೆ. ಆರ್​ಸಿಬಿ ಪರ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) 4 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಆಶಾ ಶೋಭನಾ 2 ವಿಕೆಟ್ ಪಡೆದರು.

ಡೆಲ್ಲಿಗೆ ಉತ್ತಮ ಆರಂಭ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವನ್ನಾಡಿದರು. ಈ ವೇಳೆ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶಫಾಲಿ ಮೊಲಿನೆಕ್ಸ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು. ಆ ನಂತರ ಬಂದ ಭರವಸೆಯ ಆಟಗಾರ್ತಿ ಜೆಮಿಮಾ ರಾಡ್ರಿಗಸ್ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಜಮಿಮಾ ನಂತರ ಬಂದ ಆಲಿಸ್ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು. ಆರ್​ಸಿಬಿಗೆ ಆಪತ್ಬಾಂಧವಿಯಂತೆ ಬಂದ ಸೋಫಿ ಮೊಲಿನೆಕ್ಸ್ ಒಂದೇ ಓವರ್​ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಬಿಗ್ ಶಾಕ್ ನೀಡಿದರು.

WPL 2024 Final: ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ; ಆರ್​ಸಿಬಿ ಮೊದಲು ಬೌಲಿಂಗ್

ದಿಢೀರ್ ಕುಸಿದ ಡೆಲ್ಲಿ ಇನ್ನಿಂಗ್ಸ್

ನಂತರ ದಾಳಿಗಿಳಿದ ಕನ್ನಡತಿ ಶ್ರೇಯಾಂಕ ಪಾಟೀಲ್, ಡೆಲ್ಲಿ ನಾಯಕಿ ಮೆಗ್ ಲ್ಯಾನಿಂಗ್​ರನ್ನು ಎಲ್​ಬಿಡ್ಬ್ಲ್ಯೂ ಬಲೆಗೆ ಬೀಳಿಸಿದರು. ಮೆಗ್ ಲ್ಯಾನಿಂಗ್ ಇನ್ನಿಂಗ್ಸ್ 23 ರನ್​ಗಳಿಗೆ ಅಂತ್ಯಗೊಂಡಿತು. ಇಲ್ಲಿಂದ ಡೆಲ್ಲಿ ಇನ್ನಿಂಗ್ಸ್ ಕುಸಿಯಲಾರಂಭಿಸಿತು. ಇದರ ಲಾಭ ಪಡೆದ ಆರ್​ಸಿಬಿ ಬೌಲರ್​ಗಳು ಡೆಲ್ಲಿ ಬ್ಯಾಟರ್​ಗಳಿಗೆ ಹೆಚ್ಚು ರನ್ ಬಿಟ್ಟುಕೊಡದೆ ಅವರನ್ನು ಒತ್ತಡಕ್ಕೆ ಸಿಲುಕಿಸಿದರು. ಹೀಗಾಗಿ ಒತ್ತಡಕ್ಕೊಳಗಾದ ಡೆಲ್ಲಿ ಬ್ಯಾಟರ್ಸ್​ ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆಹಾಕಿದರು.

ಕನ್ನಡತಿ ಶ್ರೇಯಾಂಕಗೆ 4 ವಿಕೆಟ್

14ನೇ ಓವರ್​ನ ಮೊದಲ ಎಸೆತದಲ್ಲಿ ಆಶಾ ಕೇಪ್ ಅವರನ್ನು 8 ರನ್​ಗಳಿಗೆ ಬಲಿ ಪಡೆದರೆ, ಜೆಸ್ ಜೊನಾಸೆನ್ ಕೂಡ ಆಶಾಗೆ ವಿಕೆಟ್ ಒಪ್ಪಿಸಿದರು. ಸೋಫಿ ಮೊಲಿನೆಕ್ಸ್ ಅವರ ಅದ್ಭುತ ಎಸೆತದಲ್ಲಿ ರಾಧಾ ರನೌಟ್​ಗೆ ಬಲಿಯಾದರೆ, ಕೊನೆಯ ಮೂರು ವಿಕೆಟ್​ಗಳನ್ನು ಕನ್ನಡತಿ ಶ್ರೇಯಾಂಕ ಪಡೆಯುವಲ್ಲಿ ಯಶಸ್ವಿಯಾದರು. ಶ್ರೇಯಾಂಕ, ಮಿನ್ನು ಮಣಿ (5 ರನ್) ಅರುಂಧತಿ ರೆಡ್ಡಿ (10 ರನ್) ತನಿಯಾ ಭಾಟಿಯಾ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಫೈನಲ್ ಪಂದ್ಯದಲ್ಲಿ ಶ್ರೇಯಾಂಕ 4 ವಿಕೆಟ್ ಪಡೆಯುವ ಮೂಲಕ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sun, 17 March 24

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ