AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024 Final: ಆರ್​ಸಿಬಿ ಸಾಂಘೀಕ ದಾಳಿಗೆ ತತ್ತರಿಸಿದ ಡೆಲ್ಲಿ 113 ರನ್​ಗಳಿಗೆ ಆಲೌಟ್..!

WPL 2024 Final: ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ಅಂದರೆ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್​ಸಿಬಿ ಬೌಲರ್​ಗಳ ಸಾಂಘೀಕ ದಾಳಿಗೆ ನಲುಗಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ.

WPL 2024 Final: ಆರ್​ಸಿಬಿ ಸಾಂಘೀಕ ದಾಳಿಗೆ ತತ್ತರಿಸಿದ ಡೆಲ್ಲಿ 113 ರನ್​ಗಳಿಗೆ ಆಲೌಟ್..!
ಆರ್​ಸಿಬಿ
ಪೃಥ್ವಿಶಂಕರ
|

Updated on:Mar 17, 2024 | 9:15 PM

Share

ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ಎರಡನೇ ಆವೃತ್ತಿಯ ಅಂತಿಮ ಪಂದ್ಯ ಇಂದು ಅಂದರೆ ಮಾರ್ಚ್ 17 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್​ಸಿಬಿ (Delhi Capitals vs Royal Challengers Bangalore) ಬೌಲರ್​ಗಳ ಸಾಂಘೀಕ ದಾಳಿಗೆ ನಲುಗಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿದೆ. ಈ ಮೂಲಕ ಆರ್​ಸಿಬಿಗೆ 114 ರನ್​ಗಳ ಗೆಲುವಿನ ಗುರಿ ನೀಡಿದೆ. ಆರ್​ಸಿಬಿ ಪರ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) 4 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಆಶಾ ಶೋಭನಾ 2 ವಿಕೆಟ್ ಪಡೆದರು.

ಡೆಲ್ಲಿಗೆ ಉತ್ತಮ ಆರಂಭ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ನಾಯಕಿ ಮೆಗ್ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟವನ್ನಾಡಿದರು. ಈ ವೇಳೆ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ ಶಫಾಲಿ ಮೊಲಿನೆಕ್ಸ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಕ್ಯಾಚಿತ್ತು ಔಟಾದರು. ಆ ನಂತರ ಬಂದ ಭರವಸೆಯ ಆಟಗಾರ್ತಿ ಜೆಮಿಮಾ ರಾಡ್ರಿಗಸ್ 2 ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದರು. ಜಮಿಮಾ ನಂತರ ಬಂದ ಆಲಿಸ್ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು. ಆರ್​ಸಿಬಿಗೆ ಆಪತ್ಬಾಂಧವಿಯಂತೆ ಬಂದ ಸೋಫಿ ಮೊಲಿನೆಕ್ಸ್ ಒಂದೇ ಓವರ್​ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಬಿಗ್ ಶಾಕ್ ನೀಡಿದರು.

WPL 2024 Final: ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ; ಆರ್​ಸಿಬಿ ಮೊದಲು ಬೌಲಿಂಗ್

ದಿಢೀರ್ ಕುಸಿದ ಡೆಲ್ಲಿ ಇನ್ನಿಂಗ್ಸ್

ನಂತರ ದಾಳಿಗಿಳಿದ ಕನ್ನಡತಿ ಶ್ರೇಯಾಂಕ ಪಾಟೀಲ್, ಡೆಲ್ಲಿ ನಾಯಕಿ ಮೆಗ್ ಲ್ಯಾನಿಂಗ್​ರನ್ನು ಎಲ್​ಬಿಡ್ಬ್ಲ್ಯೂ ಬಲೆಗೆ ಬೀಳಿಸಿದರು. ಮೆಗ್ ಲ್ಯಾನಿಂಗ್ ಇನ್ನಿಂಗ್ಸ್ 23 ರನ್​ಗಳಿಗೆ ಅಂತ್ಯಗೊಂಡಿತು. ಇಲ್ಲಿಂದ ಡೆಲ್ಲಿ ಇನ್ನಿಂಗ್ಸ್ ಕುಸಿಯಲಾರಂಭಿಸಿತು. ಇದರ ಲಾಭ ಪಡೆದ ಆರ್​ಸಿಬಿ ಬೌಲರ್​ಗಳು ಡೆಲ್ಲಿ ಬ್ಯಾಟರ್​ಗಳಿಗೆ ಹೆಚ್ಚು ರನ್ ಬಿಟ್ಟುಕೊಡದೆ ಅವರನ್ನು ಒತ್ತಡಕ್ಕೆ ಸಿಲುಕಿಸಿದರು. ಹೀಗಾಗಿ ಒತ್ತಡಕ್ಕೊಳಗಾದ ಡೆಲ್ಲಿ ಬ್ಯಾಟರ್ಸ್​ ಬಂದಷ್ಟೇ ವೇಗವಾಗಿ ಪೆವಿಲಿಯನ್ ಕಡೆ ಹೆಜ್ಜೆಹಾಕಿದರು.

ಕನ್ನಡತಿ ಶ್ರೇಯಾಂಕಗೆ 4 ವಿಕೆಟ್

14ನೇ ಓವರ್​ನ ಮೊದಲ ಎಸೆತದಲ್ಲಿ ಆಶಾ ಕೇಪ್ ಅವರನ್ನು 8 ರನ್​ಗಳಿಗೆ ಬಲಿ ಪಡೆದರೆ, ಜೆಸ್ ಜೊನಾಸೆನ್ ಕೂಡ ಆಶಾಗೆ ವಿಕೆಟ್ ಒಪ್ಪಿಸಿದರು. ಸೋಫಿ ಮೊಲಿನೆಕ್ಸ್ ಅವರ ಅದ್ಭುತ ಎಸೆತದಲ್ಲಿ ರಾಧಾ ರನೌಟ್​ಗೆ ಬಲಿಯಾದರೆ, ಕೊನೆಯ ಮೂರು ವಿಕೆಟ್​ಗಳನ್ನು ಕನ್ನಡತಿ ಶ್ರೇಯಾಂಕ ಪಡೆಯುವಲ್ಲಿ ಯಶಸ್ವಿಯಾದರು. ಶ್ರೇಯಾಂಕ, ಮಿನ್ನು ಮಣಿ (5 ರನ್) ಅರುಂಧತಿ ರೆಡ್ಡಿ (10 ರನ್) ತನಿಯಾ ಭಾಟಿಯಾ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಫೈನಲ್ ಪಂದ್ಯದಲ್ಲಿ ಶ್ರೇಯಾಂಕ 4 ವಿಕೆಟ್ ಪಡೆಯುವ ಮೂಲಕ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sun, 17 March 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!