AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: 10 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಆಟಗಾರ್ತಿಗೆ 2 ಕೋಟಿ ರೂ..!

WPL 2024 Auction: ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮಗಳ ಅಡಿಯಲ್ಲಿ, ಪ್ರತಿ ಫ್ರಾಂಚೈಸಿಯು ತನ್ನ ತಂಡದಲ್ಲಿ ಕನಿಷ್ಠ 15 ಮತ್ತು ಗರಿಷ್ಠ 18 ಆಟಗಾರರ್ತಿಯರನ್ನು ಹೊಂದಿರಬೇಕು. ಇದರಲ್ಲಿ 6 ವಿದೇಶಿ ಆಟಗಾರ್ತಿಯರಿಗೆ ಮಾತ್ರ ಅವಕಾಶ. 

WPL 2024: 10 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಆಟಗಾರ್ತಿಗೆ 2 ಕೋಟಿ ರೂ..!
Kashvee Gautam
TV9 Web
| Edited By: |

Updated on:Dec 09, 2023 | 5:03 PM

Share

ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ (WPL 2024) ಅನ್​ಕ್ಯಾಪ್ಡ್​ ಪ್ಲೇಯರ್​​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಯುವ ಆಟಗಾರ್ತಿ ಕಾಶ್ವೀ ಗೌತಮ್ ಬರೋಬ್ಬರಿ 2 ಕೋಟಿ ರೂ.ಗೆ ಹರಾಜಾಗಿದ್ದಾರೆ. ಕೇವಲ 10 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕಾಶ್ವೀ ಅವರ ಖರೀದಿಗೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಆಸಕ್ತಿವಹಿಸಿತ್ತು.

ಆರಂಭದಲ್ಲಿ ಮುಂಬೈ ಇಂಡಿಯನ್ಸ್​ ಜೊತೆ ಆರ್​ಸಿಬಿ ಪೈಪೋಟಿಗೆ ಇಳಿಯಿತು. ಆದರೆ ಯುವ ಆಟಗಾರ್ತಿಯ ಬಿಡ್ಡಿಂಗ್ ಮೊತ್ತ 50 ಲಕ್ಷ ರೂ. ದಾಟುತ್ತಿದ್ದಂತೆ ಆರ್​ಸಿಬಿ ಹಿಂದೆ ಸರಿಯಿತು. ಆದರೆ ಮತ್ತೊಂದೆಡೆ ಗುಜರಾತ್ ಜೈಂಟ್ಸ್ ತಂಡವು ಕಾಶ್ವೀ ಗೌತಮ್ ಖರೀದಿಗೆ ಹೆಚ್ಚಿನ ಆಸಕ್ತಿವಹಿಸಿತು. ಪರಿಣಾಮ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

ಪರಿಣಾಮ ಕಾಶ್ವೀ ಅವರ ಬಿಡ್ಡಿಂಗ್ ಮೊತ್ತ ಒಂದೂವರೆ ಕೋಟಿ ದಾಟಿತು. ಈ ಹಂತದಲ್ಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಿರಲಿಲ್ಲ. ಅದರಂತೆ 1.90 ಕೋಟಿ ರೂ.ವರೆಗೆ ಮುಂಬೈ ಪೈಪೋಟಿ ನಡೆಸಿತು.

ಆದರೆ ಅಂತಿಮವಾಗಿ 2 ಕೋಟಿ ರೂ.ಗೆ ಬಿಡ್ಡಿಂಗ್ ಮಾಡುವ ಮೂಲಕ ಗುಜರಾತ್ ಜೈಂಟ್ಸ್ ತಂಡವು ಕಾಶ್ವೀ ಗೌತಮ್ ಅವರನ್ನು ತಮ್ಮದಾಗಿಸಿಕೊಂಡಿತು. ಅಂದರೆ ಮೂಲ ಬೆಲೆಗಿಂತ 20 ಪಟ್ಟು ಅಧಿಕ ಮೊತ್ತಕ್ಕೆ 20 ವರ್ಷದ ವೇಗಿ ಕಾಶ್ವೀ ಗೌತಮ್ ಹರಾಜಾಗಿದ್ದಾರೆ.

ಗುಜರಾತ್ ಜೈಂಟ್ಸ್ ತಂಡವು ಉಳಿಸಿಕೊಂಡಿರುವ ಆಟಗಾರ್ತಿಯರು: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್.

ಕನಿಷ್ಠ 15 ಆಟಗಾರ್ತಿಯರು:

ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮಗಳ ಅಡಿಯಲ್ಲಿ, ಪ್ರತಿ ಫ್ರಾಂಚೈಸಿಯು ತನ್ನ ತಂಡದಲ್ಲಿ ಕನಿಷ್ಠ 15 ಮತ್ತು ಗರಿಷ್ಠ 18 ಆಟಗಾರರ್ತಿಯರನ್ನು ಹೊಂದಿರಬೇಕು. ಇದರಲ್ಲಿ 6 ವಿದೇಶಿ ಆಟಗಾರ್ತಿಯರಿಗೆ ಮಾತ್ರ ಅವಕಾಶ.

Published On - 4:58 pm, Sat, 9 December 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ