AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: 10 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಆಟಗಾರ್ತಿಗೆ 2 ಕೋಟಿ ರೂ..!

WPL 2024 Auction: ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮಗಳ ಅಡಿಯಲ್ಲಿ, ಪ್ರತಿ ಫ್ರಾಂಚೈಸಿಯು ತನ್ನ ತಂಡದಲ್ಲಿ ಕನಿಷ್ಠ 15 ಮತ್ತು ಗರಿಷ್ಠ 18 ಆಟಗಾರರ್ತಿಯರನ್ನು ಹೊಂದಿರಬೇಕು. ಇದರಲ್ಲಿ 6 ವಿದೇಶಿ ಆಟಗಾರ್ತಿಯರಿಗೆ ಮಾತ್ರ ಅವಕಾಶ. 

WPL 2024: 10 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡ ಆಟಗಾರ್ತಿಗೆ 2 ಕೋಟಿ ರೂ..!
Kashvee Gautam
TV9 Web
| Edited By: |

Updated on:Dec 09, 2023 | 5:03 PM

Share

ಈ ಬಾರಿಯ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ (WPL 2024) ಅನ್​ಕ್ಯಾಪ್ಡ್​ ಪ್ಲೇಯರ್​​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಯುವ ಆಟಗಾರ್ತಿ ಕಾಶ್ವೀ ಗೌತಮ್ ಬರೋಬ್ಬರಿ 2 ಕೋಟಿ ರೂ.ಗೆ ಹರಾಜಾಗಿದ್ದಾರೆ. ಕೇವಲ 10 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಕಾಶ್ವೀ ಅವರ ಖರೀದಿಗೆ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಆಸಕ್ತಿವಹಿಸಿತ್ತು.

ಆರಂಭದಲ್ಲಿ ಮುಂಬೈ ಇಂಡಿಯನ್ಸ್​ ಜೊತೆ ಆರ್​ಸಿಬಿ ಪೈಪೋಟಿಗೆ ಇಳಿಯಿತು. ಆದರೆ ಯುವ ಆಟಗಾರ್ತಿಯ ಬಿಡ್ಡಿಂಗ್ ಮೊತ್ತ 50 ಲಕ್ಷ ರೂ. ದಾಟುತ್ತಿದ್ದಂತೆ ಆರ್​ಸಿಬಿ ಹಿಂದೆ ಸರಿಯಿತು. ಆದರೆ ಮತ್ತೊಂದೆಡೆ ಗುಜರಾತ್ ಜೈಂಟ್ಸ್ ತಂಡವು ಕಾಶ್ವೀ ಗೌತಮ್ ಖರೀದಿಗೆ ಹೆಚ್ಚಿನ ಆಸಕ್ತಿವಹಿಸಿತು. ಪರಿಣಾಮ ಗುಜರಾತ್ ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನೇರ ಪೈಪೋಟಿ ಏರ್ಪಟ್ಟಿತ್ತು.

ಪರಿಣಾಮ ಕಾಶ್ವೀ ಅವರ ಬಿಡ್ಡಿಂಗ್ ಮೊತ್ತ ಒಂದೂವರೆ ಕೋಟಿ ದಾಟಿತು. ಈ ಹಂತದಲ್ಲೂ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಹಿಂದೆ ಸರಿಯಲು ಮುಂದಾಗಿರಲಿಲ್ಲ. ಅದರಂತೆ 1.90 ಕೋಟಿ ರೂ.ವರೆಗೆ ಮುಂಬೈ ಪೈಪೋಟಿ ನಡೆಸಿತು.

ಆದರೆ ಅಂತಿಮವಾಗಿ 2 ಕೋಟಿ ರೂ.ಗೆ ಬಿಡ್ಡಿಂಗ್ ಮಾಡುವ ಮೂಲಕ ಗುಜರಾತ್ ಜೈಂಟ್ಸ್ ತಂಡವು ಕಾಶ್ವೀ ಗೌತಮ್ ಅವರನ್ನು ತಮ್ಮದಾಗಿಸಿಕೊಂಡಿತು. ಅಂದರೆ ಮೂಲ ಬೆಲೆಗಿಂತ 20 ಪಟ್ಟು ಅಧಿಕ ಮೊತ್ತಕ್ಕೆ 20 ವರ್ಷದ ವೇಗಿ ಕಾಶ್ವೀ ಗೌತಮ್ ಹರಾಜಾಗಿದ್ದಾರೆ.

ಗುಜರಾತ್ ಜೈಂಟ್ಸ್ ತಂಡವು ಉಳಿಸಿಕೊಂಡಿರುವ ಆಟಗಾರ್ತಿಯರು: ಆಶ್ಲೀಗ್ ಗಾರ್ಡ್ನರ್*, ಬೆತ್ ಮೂನಿ*, ದಯಾಲನ್ ಹೇಮಲತಾ, ಹರ್ಲೀನ್ ಡಿಯೋಲ್, ಲಾರಾ ವೊಲ್ವಾರ್ಡ್*, ಶಬ್ನಮ್ ಶಕಿಲ್, ಸ್ನೇಹ ರಾಣಾ, ತನುಜಾ ಕನ್ವರ್.

ಕನಿಷ್ಠ 15 ಆಟಗಾರ್ತಿಯರು:

ವುಮೆನ್ಸ್ ಪ್ರೀಮಿಯರ್ ಲೀಗ್​ ನಿಯಮಗಳ ಅಡಿಯಲ್ಲಿ, ಪ್ರತಿ ಫ್ರಾಂಚೈಸಿಯು ತನ್ನ ತಂಡದಲ್ಲಿ ಕನಿಷ್ಠ 15 ಮತ್ತು ಗರಿಷ್ಠ 18 ಆಟಗಾರರ್ತಿಯರನ್ನು ಹೊಂದಿರಬೇಕು. ಇದರಲ್ಲಿ 6 ವಿದೇಶಿ ಆಟಗಾರ್ತಿಯರಿಗೆ ಮಾತ್ರ ಅವಕಾಶ.

Published On - 4:58 pm, Sat, 9 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್