AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಕಳಪೆ ಪ್ರದರ್ಶನ; ಲೀಗ್​ನಲ್ಲಿ ಆರ್​ಸಿಬಿಗೆ ಸತತ 2ನೇ ಹೀನಾಯ ಸೋಲು

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಲೀಗ್​ನಲ್ಲಿ ಮೂರನೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

WPL 2024: ಕಳಪೆ ಪ್ರದರ್ಶನ; ಲೀಗ್​ನಲ್ಲಿ ಆರ್​ಸಿಬಿಗೆ ಸತತ 2ನೇ ಹೀನಾಯ ಸೋಲು
ಮುಂಬೈ ತಂಡ
ಪೃಥ್ವಿಶಂಕರ
|

Updated on:Mar 02, 2024 | 10:25 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL 2024)​ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ (Royal Challengers Bangalore vs Mumbai Indians) ಲೀಗ್​ನಲ್ಲಿ ಮೂರನೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 131 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಆರಂಭಿಕರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ 15 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಆರ್​ಸಿಬಿ ಟಾಪ್ ಆರ್ಡರ್ ಫ್ಲಾಪ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 14 ರನ್​ಗಳಿರುವಾಗ ನಾಯಕಿ ಸ್ಮೃತಿ ಮಂಧಾನ ಕೇವಲ 9 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಅವರ ಹಿಂದೆ ಬಂದ ಮೇಘನಾ ಕೂಡ 11 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಸೋಫಿ ಡಿವೈನ್ ಇನ್ನಿಂಗ್ಸ್ ಕೂಡ 9 ರನ್​ಗಳಿಗೆ ಅಂತ್ಯಗೊಂಡಿತು. ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಆಟವೂ 7 ರನ್​ಗಳಿಗೆ ಕೊನೆಗೊಂಡಿತು. ಹೀಗಾಗಿ ತಂಡ 42 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

WPL 2024: ಬೆಂಗಳೂರಿನಲ್ಲಿ ಬಲಿಷ್ಠ ತಂಡಗಳ ನಡುವೆ ಫೈಟ್; ಆರ್​ಸಿಬಿ ಮೊದಲು ಬ್ಯಾಟಿಂಗ್

ಎಲ್ಲಿಸಾ ಪೆರ್ರಿ ಏಕಾಂಗಿ ಹೋರಾಟ

ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಎಲ್ಲಿಸಾ ಪೆರ್ರಿ 38 ಎಸೆತಗಳಲ್ಲಿ 5 ಬೌಂಡರಿ ಸಹಿತ 44 ರನ್​ಗಳ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ಜಾರ್ಜಿಯಾ ವೇರ್ಹ್ಯಾಮ್ 3 ಬೌಂಡರಿ ಸಹಿತ 27 ರನ್​ಗಳ ಕಾಣಿಕೆ ನೀಡಿದರು. ಈ ಇಬ್ಬರ ಆಟದಿಂದಾಗಿ ತಂಡ 131 ರನ್ ಕಲೆಹಾಕಲು ಸಾಧ್ಯವಾಯಿತು. ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ನ್ಯಾಟ್ ಸ್ಕಿವರ್-ಬ್ರಂಟ್ ಹಾಗೂ ಪೂಜಾ ವಸ್ತಾಕರ್ ತಲಾ 2 ವಿಕೆಟ್ ಪಡೆದರು.

ಮುಂಬೈಗೆ ಸುಲಭ ಜಯ

ಆರ್​ಸಿಬಿ ತಂಡವನ್ನು ಅಲ್ಪರನ್​ಗಳಿಗೆ ಕಟ್ಟಿಹಾಕಿ ಗುರಿ ಬೆನ್ನಟ್ಟಿದ ಮುಂಬೈ ತಂಡಕ್ಕೆ ಯಾಸ್ತಿಕಾ ಭಾಟಿಯಾ ಹಾಗೂ ಹೇಲಿ ಮ್ಯಾಥ್ಯೂಸ್ ಸ್ಫೋಟಕ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು. ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಯಾಸ್ತಿಕಾ ಕೇವಲ 15 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 31 ರನ್ ಸಿಡಿಸಿದರೆ, ಹೇಲಿ ಮ್ಯಾಥ್ಯೂಸ್ 26 ರನ್​ಗಳ ಕೊಡುಗೆ ನೀಡಿದರು. ನಾಯಕಿ ನ್ಯಾಟ್ ಸ್ಕಿವರ್-ಬ್ರಂಟ್ ಇನ್ನಿಂಗ್ಸ್ 27 ರನ್​ಗಳಿಗೆ ಕೊನೆಗೊಂಡಿತು.  ಅಮೆಲಿಯಾ ಕೆರ್ ಅಜೇಯ 40 ರನ್ ಬಾರಿಸಿದರೆ,  ಪೂಜಾ ವಸ್ತ್ರಕರ್ ಅಜೇಯ 8 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಉಭಯ ತಂಡಗಳ ಪ್ಲೇಯಿಂಗ್ 11

ಆರ್​ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವಾರೆಹಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಶೋಭಾನಾ, ರೇಣುಕಾ ಠಾಕೂರ್ ಸಿಂಗ್.

ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ನೇಟ್ ಸಿವರ್-ಬ್ರಂಟ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಎಸ್ ಸಜ್ನಾ, ಅಮಾನ್ಜೋತ್ ಕೌರ್, ಹುಮೈರಾ ಕಾಜಿ, ಕೀರ್ತನ್ ಬಾಲಕೃಷ್ಣನ್, ಸೈಕಾ ಇಶಾಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Sat, 2 March 24

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ