AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಕಳಪೆ ಪ್ರದರ್ಶನ; ಲೀಗ್​ನಲ್ಲಿ ಆರ್​ಸಿಬಿಗೆ ಸತತ 2ನೇ ಹೀನಾಯ ಸೋಲು

WPL 2024: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್​ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಲೀಗ್​ನಲ್ಲಿ ಮೂರನೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

WPL 2024: ಕಳಪೆ ಪ್ರದರ್ಶನ; ಲೀಗ್​ನಲ್ಲಿ ಆರ್​ಸಿಬಿಗೆ ಸತತ 2ನೇ ಹೀನಾಯ ಸೋಲು
ಮುಂಬೈ ತಂಡ
ಪೃಥ್ವಿಶಂಕರ
|

Updated on:Mar 02, 2024 | 10:25 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL 2024)​ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ (Royal Challengers Bangalore vs Mumbai Indians) ಲೀಗ್​ನಲ್ಲಿ ಮೂರನೇ ಜಯ ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 131 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಆರಂಭಿಕರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ 15 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

ಆರ್​ಸಿಬಿ ಟಾಪ್ ಆರ್ಡರ್ ಫ್ಲಾಪ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 14 ರನ್​ಗಳಿರುವಾಗ ನಾಯಕಿ ಸ್ಮೃತಿ ಮಂಧಾನ ಕೇವಲ 9 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಅವರ ಹಿಂದೆ ಬಂದ ಮೇಘನಾ ಕೂಡ 11 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರು. ಸೋಫಿ ಡಿವೈನ್ ಇನ್ನಿಂಗ್ಸ್ ಕೂಡ 9 ರನ್​ಗಳಿಗೆ ಅಂತ್ಯಗೊಂಡಿತು. ಸ್ಫೋಟಕ ಬ್ಯಾಟರ್ ರಿಚಾ ಘೋಷ್ ಆಟವೂ 7 ರನ್​ಗಳಿಗೆ ಕೊನೆಗೊಂಡಿತು. ಹೀಗಾಗಿ ತಂಡ 42 ರನ್​ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

WPL 2024: ಬೆಂಗಳೂರಿನಲ್ಲಿ ಬಲಿಷ್ಠ ತಂಡಗಳ ನಡುವೆ ಫೈಟ್; ಆರ್​ಸಿಬಿ ಮೊದಲು ಬ್ಯಾಟಿಂಗ್

ಎಲ್ಲಿಸಾ ಪೆರ್ರಿ ಏಕಾಂಗಿ ಹೋರಾಟ

ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಎಲ್ಲಿಸಾ ಪೆರ್ರಿ 38 ಎಸೆತಗಳಲ್ಲಿ 5 ಬೌಂಡರಿ ಸಹಿತ 44 ರನ್​ಗಳ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಸ್ಫೋಟಕ ಇನ್ನಿಂಗ್ಸ್ ಆಡಿದ ಜಾರ್ಜಿಯಾ ವೇರ್ಹ್ಯಾಮ್ 3 ಬೌಂಡರಿ ಸಹಿತ 27 ರನ್​ಗಳ ಕಾಣಿಕೆ ನೀಡಿದರು. ಈ ಇಬ್ಬರ ಆಟದಿಂದಾಗಿ ತಂಡ 131 ರನ್ ಕಲೆಹಾಕಲು ಸಾಧ್ಯವಾಯಿತು. ಮುಂಬೈ ಪರ ಬೌಲಿಂಗ್​ನಲ್ಲಿ ಮಿಂಚಿದ ನ್ಯಾಟ್ ಸ್ಕಿವರ್-ಬ್ರಂಟ್ ಹಾಗೂ ಪೂಜಾ ವಸ್ತಾಕರ್ ತಲಾ 2 ವಿಕೆಟ್ ಪಡೆದರು.

ಮುಂಬೈಗೆ ಸುಲಭ ಜಯ

ಆರ್​ಸಿಬಿ ತಂಡವನ್ನು ಅಲ್ಪರನ್​ಗಳಿಗೆ ಕಟ್ಟಿಹಾಕಿ ಗುರಿ ಬೆನ್ನಟ್ಟಿದ ಮುಂಬೈ ತಂಡಕ್ಕೆ ಯಾಸ್ತಿಕಾ ಭಾಟಿಯಾ ಹಾಗೂ ಹೇಲಿ ಮ್ಯಾಥ್ಯೂಸ್ ಸ್ಫೋಟಕ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ವಿಕೆಟ್​ಗೆ 45 ರನ್​ಗಳ ಜೊತೆಯಾಟ ಕೂಡ ಹಂಚಿಕೊಂಡರು. ಈ ಹಂತದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ಯಾಸ್ತಿಕಾ ಕೇವಲ 15 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 31 ರನ್ ಸಿಡಿಸಿದರೆ, ಹೇಲಿ ಮ್ಯಾಥ್ಯೂಸ್ 26 ರನ್​ಗಳ ಕೊಡುಗೆ ನೀಡಿದರು. ನಾಯಕಿ ನ್ಯಾಟ್ ಸ್ಕಿವರ್-ಬ್ರಂಟ್ ಇನ್ನಿಂಗ್ಸ್ 27 ರನ್​ಗಳಿಗೆ ಕೊನೆಗೊಂಡಿತು.  ಅಮೆಲಿಯಾ ಕೆರ್ ಅಜೇಯ 40 ರನ್ ಬಾರಿಸಿದರೆ,  ಪೂಜಾ ವಸ್ತ್ರಕರ್ ಅಜೇಯ 8 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಉಭಯ ತಂಡಗಳ ಪ್ಲೇಯಿಂಗ್ 11

ಆರ್​ಸಿಬಿ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವಾರೆಹಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಆಶಾ ಶೋಭಾನಾ, ರೇಣುಕಾ ಠಾಕೂರ್ ಸಿಂಗ್.

ಮುಂಬೈ ಇಂಡಿಯನ್ಸ್ ತಂಡ: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ(ವಿಕೆಟ್ ಕೀಪರ್), ನೇಟ್ ಸಿವರ್-ಬ್ರಂಟ್(ನಾಯಕಿ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಎಸ್ ಸಜ್ನಾ, ಅಮಾನ್ಜೋತ್ ಕೌರ್, ಹುಮೈರಾ ಕಾಜಿ, ಕೀರ್ತನ್ ಬಾಲಕೃಷ್ಣನ್, ಸೈಕಾ ಇಶಾಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:23 pm, Sat, 2 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ