AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: ಆರ್​ಸಿಬಿ ಗೆಲುವಿಗೆ ಕಾರಣವಾಯ್ತು ಕನ್ನಡತಿ ಶ್ರೇಯಾಂಕ ಮಾಡಿದ 18ನೇ ಓವರ್.!

WPL 2024: ಪಂದ್ಯದುದ್ದಕ್ಕೂ ಗೆಲುವನ್ನು ತನ್ನ ಬಳಿ ಇಟ್ಟುಕೊಂಡಿದ್ದ ಮುಂಬೈ ಕೊನೆಯ 3 ಓವರ್​ಗಳಲ್ಲಿ ಮಾಡಿಕೊಂಡ ಎಡವಟ್ಟಿನಿಂದ ಪಂದ್ಯವನ್ನು ಸೋಲಬೇಕಾಯಿತು. ಇತ್ತ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿದ ಆರ್​ಸಿಬಿ ವನಿತಾ ಪಡೆ ಅರ್ಹ ಗೆಲುವು ಸಂಪಾಧಿಸಿ ಫೈನಲ್​ಗೆ ಲಗ್ಗೆ ಇಟ್ಟಿತು. ಅಷ್ಟಕ್ಕೂ ಗೆಲುವಿನ ಫೆವರೇಟ್ ಎನಿಸಿಕೊಂಡಿದ್ದ ಹರ್ಮನ್‌ಪ್ರೀತ್ ಕೌರ್ ಪಡೆ ಎಡವಿದೆಲ್ಲಿ ಎಂಬ ಪ್ರಶ್ನೆಗೆ ಎಲ್ಲರು ನೀಡುವ ಉತ್ತರವೆಂದರೆ ಅದು ಮುಂಬೈ ಇನ್ನಿಂಗ್ಸ್​ನ ಕೊನೆಯ 3 ಓವರ್​ಗಳು ಎಂಬುದು.

WPL 2024: ಆರ್​ಸಿಬಿ ಗೆಲುವಿಗೆ ಕಾರಣವಾಯ್ತು ಕನ್ನಡತಿ ಶ್ರೇಯಾಂಕ ಮಾಡಿದ 18ನೇ ಓವರ್.!
ಆರ್​ಸಿಬಿ
ಪೃಥ್ವಿಶಂಕರ
|

Updated on: Mar 16, 2024 | 5:14 PM

Share

ಕೊನೆಗೂ ಕೋಟ್ಯಾಂತರ ಆರ್​ಸಿಬಿ ಅಭಿಮಾನಿಗಳ ಕನಸು ನನಸಾಗಿದೆ. ಊಹೆಗೂ ನಿಲುಕದ ಪ್ರದರ್ಶನ ನೀಡಿದ ಆರ್​ಸಿಬಿ ಮಹಿಳಾ ತಂಡ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (Women’s Premier League) ಎಲಿಮಿನೇಟರ್ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯಾನ್ಸ್ (Mumbai Indians vs Royal Challengers Bangalore) ತಂಡವನ್ನು 5 ರನ್​ಗಳಿಂದ ಮಣಿಸಿ ಮೊದಲ ಬಾರಿಗೆ ಡಬ್ಲ್ಯುಪಿಎಲ್‌ ಫೈನಲ್​ಗೇರಿದೆ. ಪಂದ್ಯದುದ್ದಕ್ಕೂ ಗೆಲುವನ್ನು ತನ್ನ ಬಳಿ ಇಟ್ಟುಕೊಂಡಿದ್ದ ಮುಂಬೈ ಕೊನೆಯ 3 ಓವರ್​ಗಳಲ್ಲಿ ಮಾಡಿಕೊಂಡ ಎಡವಟ್ಟಿನಿಂದ ಪಂದ್ಯವನ್ನು ಸೋಲಬೇಕಾಯಿತು. ಇತ್ತ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿದ ಆರ್​ಸಿಬಿ ವನಿತಾ ಪಡೆ ಅರ್ಹ ಗೆಲುವು ಸಂಪಾಧಿಸಿ ಫೈನಲ್​ಗೆ ಲಗ್ಗೆ ಇಟ್ಟಿತು. ಅಷ್ಟಕ್ಕೂ ಗೆಲುವಿನ ಫೆವರೇಟ್ ಎನಿಸಿಕೊಂಡಿದ್ದ ಹರ್ಮನ್‌ಪ್ರೀತ್ ಕೌರ್ ಪಡೆ ಎಡವಿದೆಲ್ಲಿ ಎಂಬ ಪ್ರಶ್ನೆಗೆ ಎಲ್ಲರು ನೀಡುವ ಉತ್ತರವೆಂದರೆ ಅದು ಮುಂಬೈ ಇನ್ನಿಂಗ್ಸ್​ನ ಕೊನೆಯ 3 ಓವರ್​ಗಳು ಎಂಬುದು. ಅಷ್ಟಕ್ಕೂ ಕೊನೆಯ ಓವರ್​ಗಳಲ್ಲಿ ನಡೆದಿದ್ದೇನು? ಆರ್​ಸಿಬಿ ಬೌಲರ್​ಗಳು ಮಾಡಿದ ಮ್ಯಾಜಿಕ್ ಏನು ಎಂಬುದನ್ನು ನೋಡುವುದಾದರೆ..

ಕೊನೆಯ 18 ಎಸೆತಗಳಲ್ಲಿ 20 ರನ್ ಗುರಿ

ವಾಸ್ತವವಾಗಿ 17 ಓವರ್ ಮುಕ್ತಾಯಕ್ಕೆ 125 ರನ್ ಕಲೆಹಾಕಿ ಕೇವಲ 3 ವಿಕೆಟ್ ಕಳೆದುಕೊಂಡಿದ್ದ ಮುಂಬೈ ತಂಡದ್ದೇ ಗೆಲುವು ಎಂದು ಎಲ್ಲರು ಭಾವಿಸಿದ್ದರು. ಆದರೆ 18ನೇ ಓವರ್​ನಿಂದ ವಿಜಯಲಕ್ಷ್ಮಿ ಆರ್​ಸಿಬಿ ಪರ ವಾಲಿದಳು. ಕೊನೆಯ 18 ಎಸೆತಗಳಲ್ಲಿ 20 ರನ್ ಗುರಿ ಹೊಂದಿದ್ದ ಮುಂಬೈ ಪರ ನಾಯಕಿ ಹರ್ಮನ್‌ಪ್ರೀತ್ ಸ್ಟ್ರೈಕ್​ನಲ್ಲಿದ್ದರು. ಇತ್ತ 18ನೇ ಓವರ್ ಬೌಲ್ ಮಾಡುವ ಜವಬ್ದಾರಿಯನ್ನು ಆರ್​ಸಿಬಿ ನಾಯಕಿ ಅನಾನುಭವಿ ಶ್ರೇಯಾಂಕ ಪಾಟೀಲ್​ಗೆ ನೀಡಿದರು. ಇದಕ್ಕೂ ಮೊದಲು ಹರ್ಮನ್‌ಪ್ರೀತ್ ಹಾಗೂ ಅಮೆಲಿಯ ಕೇರ್ ನಡುವೆ 50 ರನ್​ಗಳ ಜೊತೆಯಾಟ ನಡೆದಿದ್ದರಿಂದ ಮುಂಬೈ ಈ ಓವರ್​ನಲ್ಲೇ ಪಂದ್ಯ ಮುಗಿಸುತ್ತದೆ ಎಂದು ಎಲ್ಲರು ನಿರೀಕ್ಷಿಸಿದ್ದರು. ಆದರೆ 18ನೇ ಓವರ್​ನಲ್ಲಿ ಪಂದ್ಯದ ಗತಿಯೇ ಬದಲಾಯಿತು.

ಕೇವಲ 4 ರನ್ ನೀಡಿ 1 ವಿಕೆಟ್

18ನೇ ಓವರ್ ಬೌಲ್ ಮಾಡಿದ ಶ್ರೇಯಾಂಕ ಪಾಟೀಲ್, ಕೇವಲ 4 ರನ್ ನೀಡಿದಲ್ಲದೆ ಪ್ರಮುಖವಾಗಿ ನಾಯಕಿ ಹರ್ಮನ್‌ಪ್ರೀತ್ ಕೌರ್ ವಿಕೆಟ್ ಪಡೆದರು. ವಾಸ್ತವವಾಗಿ ಓವರ್​ನ ಮೊದಲ ಎಸೆತದಲ್ಲೇ ನಾಯಕಿ ಹರ್ಮನ್‌ಪ್ರೀತ್​ರನ್ನು ಸ್ಟಂಪ್ ಔಟ್ ಮಾಡುವ ಅವಕಾಶವನ್ನು ಕೀಪರ್ ರಿಚಾ ಘೋಷ್ ಕೈಚೆಲ್ಲಿದರು. ಇದು ತಂಡಕ್ಕೆ ದುಬಾರಿಯಾಗುತ್ತದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಮುಂದಿನ 4 ಎಸೆತಗಳಲ್ಲಿ ಶ್ರೇಯಾಂಕ ಕೇವಲ 4 ರನ್​ ನೀಡಿ ಮುಂಬೈ ತಂಡವನ್ನು ಒತ್ತಡಕ್ಕೆ ಸಿಲುಕಿಸಿದರು. ಹೀಗಾಗಿ ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸುವ ಚಿಂತನೆಯಲ್ಲಿದ್ದ ಹರ್ಮನ್ ಕೊನೆಯ ಎಸೆತವನ್ನು ಲಾಂಗ್ ಆನ್ ಕಡೆಗೆ ಬಿಗ್ ಶಾಟ್ ಆಡಿದರು. ಆದರೆ ಚೆಂಡು ಸಿಕ್ಸರ್​ಗೆ ಹೋಗುವ ಬದಲು ಅಲ್ಲೆ ನಿಂತಿದ್ದ ಸೋಫಿ ಡಿವೈನ್ ಕೈಸೇರಿತು. ಹೀಗಾಗಿ ತಂಡವನ್ನು ಗೆಲುವಿನತ್ತ ಮುನ್ನಡೆಸುತ್ತಿದ್ದ ಹರ್ಮನ್ ಪೆವಿಲಿಯನತ್ತ ಹೆಜ್ಜೆಹಾಕಬೇಕಾಯಿತು. ಈ ಓವರ್​ನಲ್ಲಿ ಕೇವಲ 4 ರನ್ ಬಂದಿದ್ದರಿಂದ ಕೊನೆಯ 2 ಓವರ್​ಗಳಲ್ಲಿ ಮುಂಬೈ ಗೆಲುವಿಗೆ 16 ರನ್ ಅವಶ್ಯಕತೆ ಇತ್ತು.

Breaking: ಮುಂಬೈ ಮಣಿಸಿ ಮೊದಲ ಬಾರಿಗೆ ಫೈನಲ್​ಗೇರಿದ ಆರ್​ಸಿಬಿ..!

2 ಓವರ್​ಗಳಲ್ಲಿ ಮುಂಬೈ ಗೆಲುವಿಗೆ 16 ರನ್

ಈ ವೇಳೆ 19ನೇ ಓವರ್ ಬೌಲ್ ಮಾಡುವ ಜವಬ್ದಾರಿ ಸೋಫಿ ಮೊಲಿನೆಕ್ಸ್‌ ಹೆಗಲೇರಿತು. ಈ ಓವರ್​ನ ಮೊದಲ ಎಸೆತದಲ್ಲಿ 1 ರನ್ ಬಂದರೆ, ಎರಡನೇ ಎಸೆತದಲ್ಲಿ 0, ಮೂರನೇ ಎಸೆತದಲ್ಲಿ 1 ಹಾಗೂ 4ನೇ ಎಸೆತದಲ್ಲೂ ಒಂದು ರನ್ ಬಂತು. ಐದನೆ ಎಸೆತದಲ್ಲಿ ಸಜೀವನ್ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆದರು. ಕೊನೆಯ ಎಸೆತದಲ್ಲಿ 1 ರನ್ ಬಂತು. ಹೀಗಾಗಿ ಈ ಓವರ್​ನಲ್ಲಿ ಕೇವಲ 4 ರನ್ ಬಂದರೆ ಒಂದು ವಿಕೆಟ್ ಕೂಡ ಪತನವಾಯಿತು. ಅಂತಿಮವಾಗಿ ಕೊನೆಯ 6 ಎಸೆತಗಳಲ್ಲಿ ಮುಂಬೈ ಗೆಲುವಿಗೆ 12 ರನ್ ಬೇಕಿತ್ತು. ಕೊನೆಯ ಓವರ್ ಬೌಲ್ ಮಾಡಲು ಬಂದ ಆಶಾ ಶೋಭನಾ ಈ ಓವರ್‌ನಲ್ಲಿ ಕೇವಲ 6 ರನ್ ಬಿಟ್ಟುಕೊಟ್ಟು 1 ವಿಕೆಟ್ ಕೂಡ ಉರುಳಿಸಿದರು. ಅಂತಿಮವಾಗಿ ಮುಂಬೈ ತಂಡ 5 ರನ್​ಗಳಿಂದ ಸೋಲನುಭವಿಸಿತು.

ಪಂದ್ಯ ಹೀಗಿತ್ತು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ನಿಗದಿತ 20 ಓವರ್​ಗಳಲ್ಲಿ ಆರ್​ಸಿಬಿ ತಂಡ 6 ವಿಕೆಟ್ ನಷ್ಟಕ್ಕೆ 135 ರನ್ ಗಳಿಸಿ ಗೆಲುವಿಗೆ 136 ರನ್​ಗಳ ಸವಾಲನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಮುಂಬೈ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 130 ರನ್ ಕಲೆಹಾಕಲಷ್ಟೇ ಶಕ್ತವಾಗಿ 5 ರನ್​ಗಳ ಸೋಲು ಅನುಭವಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್