AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2024: RCB ತಂಡಕ್ಕೆ ಭರ್ಜರಿ ಜಯ

WPL 2024: ವುಮೆನ್ಸ್ ಪ್ರೀಮಿಯರ್ ಲೀಗ್​ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ತಂಡಕ್ಕೆ ಸೋಲುಣಿಸಿದೆ. ಈ ಮೂಲಕ ಆರ್​ಸಿಬಿ ಆಡಿದ 2 ಪಂದ್ಯಗಳಲ್ಲೂ ಜಯಭೇರಿ ಬಾರಿಸಿದೆ. ಇದಕ್ಕೂ ಮುನ್ನ ಯುಪಿ ವಾರಿಯರ್ಸ್ ವಿರುದ್ಧದದ ಪಂದ್ಯದಲ್ಲಿ ಆರ್​ಸಿಬಿ 2 ರನ್​ಗಳ ರೋಚಕ ಜಯ ಸಾಧಿಸಿತ್ತು.

WPL 2024: RCB ತಂಡಕ್ಕೆ ಭರ್ಜರಿ ಜಯ
RCB
TV9 Web
| Edited By: |

Updated on:Feb 28, 2024 | 7:27 AM

Share

WPL 2024: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು ಉತ್ತಮ ಆರಂಭ ಪಡೆಯಲು ವಿಫಲವಾಯಿತು.

ಆರಂಭಿಕ ಆಟಗಾರ್ತಿ ಬೆತ್ ಮೂನಿ ಕೇವಲ 8 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಲಿಚ್​ಫೀಲ್ಡ್​ 5 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ವೇದಾ ಕೃಷ್ಣ ಮೂರ್ತಿ ಕೇವಲ 9 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ಹರ್ಲೀನ್ ಡಿಯೋಲ್ 31 ಎಸೆತಗಳನ್ನು ಎದುರಿಸಿದರೂ ಕಲೆಹಾಕಿದ್ದು ಕೇವಲ 22 ರನ್​ಗಳನ್ನು ಮಾತ್ರ.

ಇದಾಗ್ಯೂ ಕೆಳ ಕ್ರಮಾಂಕದಲ್ಲಿ ಆರ್​ಸಿಬಿ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಹೇಮಲತಾ 31 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 100ರ ಗಡಿದಾಟಿಸಿದರು. ಅಂತಿಮವಾಗಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು ಗುಜರಾತ್ ಜೈಂಟ್ಸ್ ತಂಡವು 107 ರನ್​ ಕಲೆಹಾಕಿತು.

108 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ಪರ ಸೋಫಿ ಡಿವೈನ್ (6) ಮತ್ತೊಮ್ಮೆ ವಿಫಲರಾದರು. ಮತ್ತೊಂದೆಡೆ ನಾಯಕಿಯ ಆಟವಾಡಿದ ಸ್ಮೃತಿ ಮಂಧಾನ 27 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 43 ರನ್ ಬಾರಿಸಿ ಮಿಂಚಿದರು.

ಇನ್ನು ಸಬ್ಬಿನೇನಿ ಮೇಘನಾ ಅಜೇಯ 36 ಹಾಗೂ ಎಲ್ಲಿಸ್ ಪೆರ್ರಿ ಅಜೇಯ 23 ರನ್​ ಬಾರಿಸುವ ಮೂಲಕ 12.3 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಆರ್​ಸಿಬಿ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

RCB ಬ್ಯಾಟಿಂಗ್ ಝಲಕ್:

ಆರ್​ಸಿಬಿ ಪ್ಲೇಯಿಂಗ್ 11: ಸೋಫಿ ಡಿವೈನ್ , ಸ್ಮೃತಿ ಮಂಧಾನ (ನಾಯಕಿ) , ಸಬ್ಬಿನೇನಿ ಮೇಘನಾ , ಎಲ್ಲಿಸ್ ಪೆರ್ರಿ , ರಿಚಾ ಘೋಷ್ (ವಿಕೆಟ್ ಕೀಪರ್) , ಜಾರ್ಜಿಯಾ ವೇರ್ಹಮ್ , ಸೋಫಿ ಮೊಲಿನೆಕ್ಸ್ , ಶ್ರೇಯಾಂಕಾ ಪಾಟೀಲ್ , ಸಿಮ್ರಾನ್ ಬಹದ್ದೂರ್ , ಆಶಾ ಶೋಭಾನಾ , ರೇಣುಕಾ ಠಾಕೂರ್ ಸಿಂಗ್.

ಇದನ್ನೂ ಓದಿ: IPL 2024: RCB ಗೆದ್ದರೆ ಹೊಸ ಇತಿಹಾಸ

ಗುಜರಾತ್ ಜೈಂಟ್ಸ್ ಪ್ಲೇಯಿಂಗ್​ 11: ಬೆತ್ ಮೂನಿ (ನಾಯಕಿ) , ವೇದಾ ಕೃಷ್ಣಮೂರ್ತಿ , ಹರ್ಲೀನ್ ಡಿಯೋಲ್ , ಫೋಬೆ ಲಿಚ್​ಫೀಲ್ಡ್ , ದಯಾಲನ್ ಹೇಮಲತಾ , ಆಶ್ಲೀಗ್ ಗಾರ್ಡ್ನರ್ , ಕ್ಯಾಥರಿನ್ ಬ್ರೈಸ್ , ಸ್ನೇಹ ರಾಣಾ , ತನುಜಾ ಕನ್ವರ್ , ಲೀ ತಹುಹು , ಮೇಘನಾ ಸಿಂಗ್.

Published On - 7:26 am, Wed, 28 February 24

ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
ಮುಸ್ಲಿಮರಿಗೆ ಬೆಡ್​ಶೀಟ್ ಕೊಡದ ಬಿಜೆಪಿ ಮಾಜಿ ಸಂಸದ ಸುಖ್​ಬೀರ್
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ